ವಿಷಯಕ್ಕೆ ಹೋಗಿ

ನಾಳೆಯಿಂದ ಹುಳಿಯಾರು ದುರ್ಗಮ್ಮನ ಜಾತ್ರೆ

ಹುಳಿಯಾರು : ಪಟ್ಟಣದ ಗ್ರಾಮದೇವತೆ ಶ್ರೀದುರ್ಗಾಪರಮೇಶ್ವರಿ ದೇವಿಯ 50ನೇ ವರ್ಷದ ಸುವರ್ಣ ಮಹೋತ್ಸವದ ಜಾತ್ರಾಮಹೋತ್ಸವ ಏ.16 ರ ಶನಿವಾರದಿಂದ ಪ್ರಾರಂಭಗೊಂಡು 24 ರ ಭಾನುವಾರದವರೆಗೆ ಒಂಬತ್ತು ದಿನಗಳ ಕಾಲ ಜರುಗಲಿದೆ.
ಏ.16ರ ಶನಿವಾರ ಕೋಡಿಪಾಳ್ಯ, ಲಿಂಗಪ್ಪನಪಾಳ್ಯದವರಿಂದ ಹಾಗೂ 17 ರ ಭಾನುವಾರ ಕಾಮಶೆಟ್ಟಿಪಾಳ್ಯ,ಸೋಮಜ್ಜನ ಪಾಳ್ಯದ ಭಕ್ತಾಧಿಗಳಿಂದ ಅಮ್ಮನವರಿಗೆ ಮಡಿಲಕ್ಕಿ ಸೇವೆ ನಡೆಯಲಿದೆ.

ಏ.18ರ ಸೋಮವಾರ ಬೆಳಿಗ್ಗೆ ಎಡೆಸೇವೆ,ಸಂಜೆ ಅಮ್ಮನವರ ಮಧುವಣಗಿತ್ತಿ ಕಾರ್ಯ ಹಾಗೂ ಧ್ವಜಾರೋಹಣ ಮತ್ತು ಅಂಕುರಾರ್ಪಣೆ ಕಾರ್ಯ ನಡೆಯಲಿದೆ.

ಏ.19 ರ ಮಂಗಳವಾರ ಗ್ರಾಮಸ್ಥರಿಂದ ಆರತಿಬಾನ, ಎಡೆಸೇವೆ ನಡೆಯಲಿದೆ.

ಏ.20ರ ಬುಧವಾರ ರಾತ್ರಿ ಹುಳಿಯಾರಿನ ಹುಳಿಯಾರಮ್ಮ, ಹೊಸಹಳ್ಳಿಯ ಶ್ರೀ ಕೊಲ್ಲಾಪುರದಮ್ಮ ,ಹೊಸಹಳ್ಳಿ ಪಾಳ್ಯದ ಅಂತರಘಟ್ಟೆಅಮ್ಮ, ಗೌಡಗೆರೆಯ ದುರ್ಗಮ್ಮ, ತಿರುಮಲಾಪುರದ ಕೊಲ್ಲಾಪುರದಮ್ಮ, ಗೊಲ್ಲರಹಟ್ಟಿಯ ಶ್ರೀ ಕರಿಯಮ್ಮ ,ಕೆಸಿ ಪಾಳ್ಯದ ಶ್ರೀ ಅಂತರಘಟ್ಟಮ್ಮ, ದಮ್ಮಡಿಹಟ್ಟಿಯ ಶ್ರೀ ಈರಬೊಮ್ಮಕ್ಕದೇವಿ  ದೇವರುಗಳ ಆಗಮನದೊಂದಿಗೆ ಕೂಡುಭೇಟಿ ನಡೆದು ನಂತರ ಗಂಗಾಸ್ನಾನಕ್ಕೆ ಕೆರೆಗೆ ದಯಮಾಡಿಸುವುದು.

ತಾ.21ರ ಗುರುವಾರ ಮುಂಜಾನೆ 5ಕ್ಕೆ ಕೆರೆಯ ಬಾವಿಹತ್ತಿರ ಕಳಸ ಸ್ಥಾಪನೆ ನಡೆದು ನಂತರ ಕಳಸ ಸಮೇತ ನಡೆಮುಡಿಯಲ್ಲಿ ಅಮ್ಮನವರ ಮೂಲಸ್ಥಾನಕ್ಕೆ ದಯಮಾಡಿಸುವುದು. ಅದೇ ದಿನ ರಾತ್ರಿ ಉಯ್ಯಾಲೋತ್ಸವ ನಡೆಯಲಿದೆ.

ತಾ.22ರ ಶುಕ್ರವಾರ ಮಧ್ಯಾಹ್ನ ಅಮ್ಮನವರ ವೈಭವಯುತ ಬ್ರಹ್ಮರಥೋತ್ಸವ ನಡೆದು ನಂತರ ವಸಂತಸೇವೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಅದೇ ದಿನ ರಾತ್ರಿ ವಿನಾಯಕನಗರದ ದುರ್ಗಮ್ಮನ ಮದಾಲ್ ಸಿ ಉತ್ಸವ ಜರುಗಲಿದೆ.

ಇದೇ ದಿನ ಸಂಜೆ ಅಮ್ಮನವರ ಬಂಗಾರದ ರಥದ ಉತ್ಸವ ನಡೆಯಲಿದೆ. ವಿಶೇಷ ಆಕರ್ಷಣೆಯಾಗಿ ಡೊಳ್ಳು ಕುಣಿತ- ಚಂಡೆ ವಾದ್ಯ-ಭದ್ರಕಾಳಿ ವೀರಭದ್ರ ಕುಣಿತ- ಅಣ್ಣಮ್ಮನ ತಮಟೆ ಪೂಜಾಕುಣಿತ-ನಾದಸ್ವರ ನಡೆಯಲಿದೆ.

23ರ ಶನಿವಾರ ಬೆಳಿಗ್ಗೆ ಸಿಡಿ ಕಾರ್ಯ ,ಓಕಳಿಸೇವೆ, ಕಂಕಣ ವಿಸರ್ಜನೆ ನಡೆದು 24 ರ ಭಾನುವಾರದಂದು ಮಡಿಲಕ್ಕಿ ಸೇವೆ ನಡೆಯುವ ಮೂಲಕ ಜಾತ್ರೆಗೆ ತೆರೆಬೀಳಲಿದೆ.

ಹುಳಿಯಾರು ಹಾಗೂ ಸುತ್ತಮುತ್ತಲ ಗ್ರಾಮಗಳ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಅಮ್ಮನವರ ಕೃಪೆಗೆ ಪಾತ್ರರಾಗುವಂತೆ ಧರ್ಮದರ್ಶಿ ಎಸ್ಆರ್‌ಎಸ್ ದಯಾನಂದ್ ಹಾಗೂ ಕನ್ವೀನರ್ ಪಟೇಲ್ ರಾಜಕುಮಾರ್ ಕೋರಿದ್ದಾರೆ.

ಕಾಮೆಂಟ್‌ಗಳು

ಕಾಮೆಂಟ್‌‌ ಪೋಸ್ಟ್‌ ಮಾಡಿ

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.