ವಿಷಯಕ್ಕೆ ಹೋಗಿ

ದೊಡ್ಡಬಿದರೆಯಲ್ಲಿ ಗ್ರಾಮ ದೇವತೆ ಶ್ರೀ ಕರಿಯಮ್ಮದೇವಿ, ಪಾತಲಿಂಗೇಶ್ವರ ಸ್ವಾಮಿ, ಲಕ್ಕಮ್ಮದೇವಿ,ಬೇವಿನಳ್ಳಮ್ಮ ದೇವಿಯವರ ಜಾತ್ರಾ ಮಹೋತ್ಸವ ಆರಂಭ

ಹುಳಿಯಾರು ಸಮೀಪದ ದೊಡ್ಡಬಿದರೆಯಲ್ಲಿ ಗ್ರಾಮ ದೇವತೆ ಶ್ರೀ ಕರಿಯಮ್ಮದೇವಿ, ಪಾತಲಿಂಗೇಶ್ವರ ಸ್ವಾಮಿ, ಲಕ್ಕಮ್ಮದೇವಿ,ಬೇವಿನಳ್ಳಮ್ಮ ದೇವಿಯವರ ಜಾತ್ರಾ ಮಹೋತ್ಸವ ಏ.14ರ ಗುರುವಾರ ಮಧುವಣಗಿತ್ತಿ ಶಾಸ್ತ್ರದ ಮೂಲಕ ಚಾಲನೆ ಗೊಂಡಿದ್ದು ಏ. 20ರ ಬುಧವಾರದವರೆಗೂ ನಡೆಯಲಿದೆ.
ಏ. 14ರ ಗುರುವಾರ ಮದುವಣಗಿತ್ತಿ ಕಾರ್ಯಕ್ರಮದ ಮೂಲಕ ಜಾತ್ರಾ ಮಹೋತ್ಸವ ಚಾಲನೆಗೊಂಡಿದ್ದು,
ಏ.15ರ ಶುಕ್ರವಾರ ಬಾನ,ರಾತ್ರಿ 8:00 ಗಂಟೆಗೆ ಮಧುವಣಗಿತ್ತಿ ಶಾಸ್ತ್ರ,ಮಡಿಲಕ್ಕಿ ಸೇವೆ, ನಂತರ ಚಿಕ್ಕಬಿದರೆ ಕರಿಯಮ್ಮದೇವಿ ಮತ್ತು ಕೋಡಿಹಳ್ಳಿ ಕೊಲ್ಲಾಪುರದಮ್ಮನವರ ಆಗಮನವಾಗಲಿದೆ.

ಏ. 16 ರ ಶನಿವಾರ ಬೆಳಗ್ಗೆ 6:30ಕ್ಕೆ ಆರತಿ ಬಾನ, ಗಂಗಾಪೂಜೆ,ನಡೆಮುಡಿಯೊಂದಿಗೆ ಅಮ್ಮನವರು ಮೂಲಸ್ಥಾನಕ್ಕೆ ಆಗಮಿಸುವರು.
ಬೆ.9.30 ಕ್ಕೆ ಅಗ್ನಿಕುಂಡ,ಮ. 12:00 ಗಂಟೆಗೆ ಅನ್ನಸಂತರ್ಪಣೆ ಸಂಜೆ 6:30ಕ್ಕೆ ಸಿಡಿ,ರಾತ್ರಿ 10:00 ಗಂಟೆಗೆ ಆರ್ಕೆಸ್ಟ್ರಾ ಏರ್ಪಡಿಸಲಾಗಿದೆ.

ಏ.17ರ ಭಾನುವಾರ ಬೆಳಿಗ್ಗೆ 8ಗಂಟೆಗೆ ರುದ್ರಾಭಿಷೇಕ, 10 ಗಂಟೆಗೆ ಧ್ವಜಾರೋಹಣ, 11ಗಂಟೆಗೆ ದೋಣಿ ಸೇವೆ, 2:00 ಗಂಟೆಗೆ ಲಕ್ಕಮ್ಮನವರ ಕಳಸ ಸ್ಥಾಪನೆ,ಗಂಗಾಪೂಜೆ ಪ್ರಸಾದ ವಿನಿಯೋಗ ನಡೆಯಲಿದೆ.
ಸಂಜೆ ಪಾತಲಿಂಗೇಶ್ವರ ಸ್ವಾಮಿ ಹಾಗೂ ಲಕ್ಕಮ್ಮ ನವರಿಗೆ ಕಂಕಣಧಾರಣೆ.ನಂತರ ಮಡಿಲಕ್ಕಿ ಸೇವೆ ನಡೆದು ಸ್ವಾಮಿಯವರು ಮತ್ತು ಅಮ್ಮನವರು ಮೂಲಸ್ಥಾನಕ್ಕೆ ದಯಮಾಡಿಸುವರು.

ಏ. 18ರ ಸೋಮವಾರ ಸಂಜೆ 7.30 ಕ್ಕೆ ದೊಡ್ಡ ಪರವು ನಡೆಯಲಿದೆ

ಏ. 19ರ ಮಂಗಳವಾರ ಬೆಳಗ್ಗೆ 6 ಗಂಟೆಗೆ ರುದ್ರಾಭಿಷೇಕ 9ರಿಂದ ಪಟ್ಟಧಾರಣೆ,ಮ.4:30ಕ್ಕೆ ಗಾವು, ನಂತರ ಅಮ್ಮನವರ ಹಾಗೂ ಸ್ವಾಮಿಯವರ ಉತ್ಸವ ನಡೆಯಲಿದೆ.

ಇದೇ ದಿನ ಮ. 12:00 ಗಂಟೆಗೆ ಶ್ರೀ ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಧಾರ್ಮಿಕ ಸಭೆ ನಡೆಯಲಿದೆ.

ಏ. 20ರ ಬುಧವಾರ ಬೆಳಗ್ಗೆ 6 ಗಂಟೆಗೆ ದೊಡ್ಡ ರಥೋತ್ಸವ, 8ಗಂಟೆಗೆ ಓಕಳಿ ಸೇವೆ ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಲಿದೆ. ನಂತರ ಸ್ವಾಮಿಯವರು ಮೂಲಸ್ಥಾನಕ್ಕೆ ಬಿಜಯಂಗೈಯುವುದರ ಮೂಲಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...