ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ದಿನಾಂಕ 22/04 /2022 ರಂದು ಶುಕ್ರವಾರ ಬೆಳಗ್ಗೆ 7.30 ಕ್ಕೆ ಶ್ರೀ ರೇಣುಕಾ ಎಲ್ಲಮ್ಮ ದೇವಿಯವರ ರಥೋತ್ಸವವು ವಿವಿಧ ಧಾರ್ಮಿಕ ಕಾರ್ಯಗಳು ಹಾಗೂ ವಾದ್ಯ ಮೇಳದೊಂದಿಗೆ ಸಕಲ ಭಕ್ತಾದಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಬೆಳಗ್ಗೆ 7.30 ಕ್ಕೆ ಪ್ರಾರಂಭವಾಗಿ ಊರಿನ ಪ್ರಮುಖ ರಾಜಬೀದಿಗಳಲ್ಲಿ ತಾಯಿಯವರ ರಥೋತ್ಸವವು ವೈಭವದಿಂದ ನೆರವೇರಿ ಸಂಜೆ 4:30 ಕ್ಕೆ ನೆಲೆ ನಿಂತಿತ್ತು.ಶ್ರೀ ಕರಿಯಮ್ಮದೇವಿ, ಶ್ರೀ ಆಂಜನೇಯಸ್ವಾಮಿ, ಶ್ರೀಪಾತರಾಯ ಸ್ವಾಮಿ ದೇವರುಗಳು ರಥೋತ್ಸವದಲ್ಲಿ ಪಾಲ್ಗೊಂಡಿದ್ದವು . ಸುಮಾರು ಗ್ರಾಮದ ಎರಡರಿಂದ ಮೂರು ಕಿಲೋಮೀಟರ್ ದೂರ ರಥೋತ್ಸವ ಎಳೆಯುವುದು ಇಲ್ಲಿನ ವಿಶೇಷ.ಈ ಸಂದರ್ಭದಲ್ಲಿ ಗ್ರಾಮದ ಸಕಲ ಭಕ್ತರು ತಮ್ಮ ಹರಕೆ ಸಲ್ಲಿಸಿ ಹಾರ ,ಫಲಹಾರ ಪಾನಕ ಮುಂತಾದ ಮುಂತಾದ ಸೇವೆ ಸಲ್ಲಿಸುತ್ತಾರೆ. ಸಕಲ ಭಕ್ತಾದಿಗಳು ಶ್ರೀದೇವಿಯವರ ರಥೋತ್ಸವ ಕಾರ್ಯದಲ್ಲಿ ಭಾಗವಹಿಸಿ ಭಕ್ತಿ ಸಮರ್ಪಿಸಿದರು. ಶ್ರೀ ಕರಿಯಮ್ಮ ದೇವಿ ಮತ್ತು ಶ್ರೀ ರೇಣುಕಾ ಎಲ್ಲಮ್ಮ ದೇವಿ ಗೆಳೆಯರ ಬಳಗದವರಿಂದ ಶ್ರೀ ರೇಣುಕ ಎಲ್ಲಮ್ಮ ದೇವಾಲಯದ ಮೂಲ ವಿಗ್ರಹಕ್ಕೆ ಹಾಗೂ ದೇವಸ್ಥಾನದಲ್ಲಿ ವಿಶೇಷ ಹಣ್ಣಿನ ಅಲಂಕಾರದ ವ್ಯವಸ್ಥೆ ಮಾಡಲಾಗಿತ್ತು.
ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ