ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜುಲೈ, 2022 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಅನುಭವದಿಂದ ದಕ್ಕಿದ ಜ್ಞಾನ ಅತ್ಯಂತ ಶ್ರೇಷ್ಠ :ಸಚಿವ ಜೆ.ಸಿ.ಮಾಧುಸ್ವಾಮಿ

ಜ್ಞಾನ ಶ್ರೇಷ್ಠ. ಜ್ಞಾನಕ್ಕೆ ಸಮಾನವಾದುದು ಯಾವುದು ಇಲ್ಲ. ಆದರೆ,ಅನುಭವದಿಂದ ದಕ್ಕಿದ ಜ್ಞಾನ ಅತ್ಯಂತ ಶ್ರೇಷ್ಠ .ಈ ನಿಟ್ಟಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳು ಬದುಕು  ಕಟ್ಟಿಕೊಳ್ಳುವುದನ್ನು ಕಲಿತುಕೊಳ್ಳುತ್ತಾರೆ" ಎಂದು ಸಚಿವರಾದ ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಹುಳಿಯಾರಿನ ಬಿ.ಎಂ.ಎಸ್.ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಘಟಕ-1 ಮತ್ತು ಘಟಕ-2 ರ ವತಿಯಿಂದ 2021-22 ನೆಯ ಸಾಲಿನ "ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ"ವನ್ನು ಗುರುವಾಪುರ ಗ್ರಾಮದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಮುಂದುವರಿದು ವೈಯಕ್ತಿಕ ನೆಲೆಯಲ್ಲಿಯೂ, ಸಾಮಾಜಿಕ ನೆಲೆಯಲ್ಲಿಯೂ ಗ್ರಾಮಗಳು ಅಭಿವೃದ್ಧಿ ಹೊಂದಬೇಕಾಗಿದೆ.ಈ ನಿಟ್ಟಿನಲ್ಲಿ  ಜಾತಿ - ಧರ್ಮದ ಸಂಕೋಲೆಯನ್ನು ತೊಡೆದು ಹಾಕಬೇಕು ಹಾಗೂ  ಗಾಂಧೀಜಿಯವರ ಕನಸಿನಂತೆ. ಗ್ರಾಮ ಸ್ವರಾಜ್ಯವಾಗಬೇಕು ಎಂದು ಅವರು ಕರೆ ನೀಡಿದರು.ಗ್ರಾಮಗಳು. ಸಶಕ್ತವಾಗಲು ಯುವ ಶಕ್ತಿಯ ಒಳಗೊಳ್ಳುವಿಕೆ ಅಗತ್ಯವಿದೆ.ಕಾಲೇಜು ವಿದ್ಯಾರ್ಥಿಗಳಿಗೆ ಗ್ರಾಮಗಳ ಬಗ್ಗೆ ಅನುಭವ ಅಗತ್ಯ. ಶ್ರಮದಾನದ ಸಮಯದಲ್ಲಿ  ವಿದ್ಯಾರ್ಥಿಗಳು ಶಿಸ್ತು ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಸಹಕಾರ ಮತ್ತು ಸುರಕ್ಷತೆ ನೀಡಿ, ಕೃಷಿ ಹಾಗೂ ಇನ್ನ

ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಇಂದಿನಿಂದ

*ಗುರುವಾಪುರ ಗ್ರಾಮದಲ್ಲಿ ಒಟ್ಟು 7 ದಿನಗಳ ಕಾಲ ನಡೆಯಲಿರುವ ಶಿಬಿರ* ಹುಳಿಯಾರಿನ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಘಟಕ-1 ಮತ್ತು ಘಟಕ-2 ರ ವತಿಯಿಂದ 2021-22 ನೆಯ ಸಾಲಿನ "ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ"ವನ್ನು ಗುರುವಾಪುರ ಗ್ರಾಮದಲ್ಲಿ ಇಂದಿನಿಂದ ಆಗಸ್ಟ್ ನಾಲ್ಕರವರೆಗೆ ಒಟ್ಟು ಏಳು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಆಗಿರುವ ಜೆ.ಸಿ.ಮಾಧುಸ್ವಾಮಿ ಅವರು ಇಂದು ಅಪರಾಹ್ನ 3:00ಗಂಟೆಗೆ ಈ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ನೆರವೇರಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವೀರಣ್ಣ ಎಸ್.ಸಿ. ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ||ಮೋಹನ್ ಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ತುಮಕೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ|| ಮೌನೇಶ್ವರ ಶ್ರೀನಿವಾಸರಾವ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಕೆ.ಬಿ. ಮರುಳಸಿದ್ದಪ್ಪ, ಗಾಣದಾಳ್ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ ನಾಗರಾಜು‌, ಸಿಡಿಸಿ ಸದಸ್ಯ ಎಲ್.ಆರ್. ಬಾಲಾಜಿ, ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕೆಂಕೆರೆ ನವೀನ್, ಡಾ|| ಕೆ ಚಂದನ, ಕೆ.ಕೆ.ಹನುಮಂತಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್

ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ನಾಗರತ್ನ ವೈ.ಡಿ.ಗೆ ಪ್ರಥಮ ಸ್ಥಾನ

ಹುಳಿಯಾರು-ಕೆಂಕೆರೆಯ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ   “75ನೆಯ ಸ್ವಾತಂತ್ರ್ಯದ ಅಮೃತ ಮಹೋತ್ಸವ”ದ ಆಚರಣೆಯ ಅಂಗವಾಗಿ ಸಾಂಸ್ಕೃತಿಕ ವಿಭಾಗದ ವತಿಯಿಂದ "ದೇಶಭಕ್ತಿ ಗೀತೆ ಸ್ಪರ್ಧೆ" ಯನ್ನು ಹಮ್ಮಿಕೊಳ್ಳಲಾಗಿತ್ತು.  ಪ್ರಾಂಶುಪಾಲರಾದ ಪ್ರೊ. ವೀರಣ್ಣ ಎಸ್.ಸಿ. ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಡಾ. ಮೋಹನ್ ಕುಮಾರ್ ಎಂ.ಜೆ . ಅವರು ಕಾರ್ಯಕ್ರಮವನ್ನು ಕುರಿತು ಪ್ರಾಸ್ತಾವಿಕ ನುಡಿಗಳನ್ನು ಆಡುತ್ತಾ ಕಾಲೇಜಿನಲ್ಲಿ ನಡೆಯುವ ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ, ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವಕ್ಕೆ ಹೊಸ ಮೆರಗನ್ನು ಪಡೆಯಬಹುದು ಎಂಬ ಆಶಯವನ್ನು ವ್ಯಕ್ತಪಡಿಸಿದರು. ನಂತರ ನಡೆದ "ದೇಶಭಕ್ತಿ ಗೀತೆ ಸ್ಪರ್ಧೆ"ಯಲ್ಲಿ ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯನ್ನು ಸೂಚಿಸುವ ಬಗೆಬಗೆಯ ಹಾಡುಗಳನ್ನು ಹಾಡಿದರು.  ಕೆಲವು ವಿದ್ಯಾರ್ಥಿಗಳು ಹಿಂದಿ ದೇಶಭಕ್ತಿಗೀತೆಗಳನ್ನೂ ಹಾಡಿದರು. ಈ "ದೇಶಭಕ್ತಿ ಗೀತೆ" ಸ್ಪರ್ಧೆಯಲ್ಲಿ ತೃತೀಯ ಬಿ.ಕಾಂ. ವಿದ್ಯಾರ್ಥಿನಿ ನಾಗರತ್ನ ವೈ.ಡಿ. ಪ್ರಥಮ ಸ್ಥಾನವನ್ನು , ದ್ವಿತೀಯ ಬಿ.ಕಾಂ. ವಿದ್ಯಾರ್ಥಿ ತರುಣ್ ಕುಮಾರ್ ಕೆ.ಎಂ. ದ್ವಿತೀಯ ಸ್ಥಾನವನ್ನು ಹಾಗೂ ತೃತೀಯ ಬಿ.ಕಾಂ. ವಿದ್ಯಾರ್ಥಿನಿ ನೂರ್ ಜಹರಾ ಅವರು ತೃತೀಯ ಸ್ಥಾನವನ್ನು ಪಡೆದರು.  ಉಪನ್

ಅಡಿಕೆ, ರಾಗಿ, ತೆಂಗು ಮತ್ತು ಹುಣಿಸೆಹಣ್ಣು ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿ

ಜಿಲ್ಲಾ ಪಂಚಾಯತ್ ತುಮಕೂರು, ತಾಲೂಕು ಪಂಚಾಯತಿ ಚಿಕ್ಕನಾಯಕನಹಳ್ಳಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ/ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಅಡಿಯಲ್ಲಿ "ಪ್ರಧಾನ ಮಂತ್ರಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ಪರಿಶಿಷ್ಟ ಪಂಗಡದ ಜನಾಂಗಕ್ಕೆ ಹೆಚ್ಚಿನ ಒತ್ತು ನೀಡುವ ಪ್ರಧಾನ ಮಂತ್ರಿ ವನಧನ ವಿಕಾಸ ಯೋಜನೆಯ ಅನುಷ್ಟಾನ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ತೀರ್ಥಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮದಲಿಂಗನ ಕಣಿವೆ ಸಂಜೀವಿನಿ ವನಧನ ವಿಕಾಸ ಕೇಂದ್ರದಡಿಯಲ್ಲಿ ಅಡಿಕೆ, ರಾಗಿ, ತೆಂಗು ಮತ್ತು ಹುಣಿಸೆಹಣ್ಣು ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ತರಬೇತಿಯನ್ನು ಆಯೋಜಿಸಲಾಗಿತ್ತು.  ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಯೋಜನೆಯಿಂದ ಮೌಲ್ಯವರ್ಧನೆ ಚಟುವಟಿಕೆ ಮಾಡಿಕೊಳ್ಳಲು ಶೇ 80% ಹಾಗೂ ಸದಸ್ಯರ ವಂತಿಕೆ 20% ನಿಯಮಕ್ಕೆ ಒಳಪಟ್ಟು ಒಂದು ತಾಲೂಕು ಒಂದು ಉತ್ಪನ್ನ ಎಂಬ ಮಾದರಿಯಂತೆ ಸುಮಾರು 100 ರಿಂದ 120 ಮಹಿಳೆಯರು ಯಶಸ್ವಿಯಾಗಿ ಭಾಗವಹಿಸಿದರು. ಈ ತರಬೇತಿ ಕಾರ್ಯಕ್ರಮದಲ್ಲಿ  ಚಿ ನಾ. ಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಸಂತ್ ಕುಮಾರ್, ಟೈಡ್ ಸಂಸ್ಥೆಯ ಯೋಜನಾ ಸಂಯೋಜಕರಾದ ರಂಗಸ್ವಾಮಿ, ಸಂಜೀವಿನಿ ಘಟಕದ  ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ  ಶಿವಶಂಕರ್, ವಲಯ ಮೇಲ್ವಿಚಾರಕರಾದ ಶ್ರೀಮತಿ ಯಮುನಾ, ತಾಲೂಕು ತಾಂತ್ರಿಕ ಸಂಯೋಜಕರಾದ ವಿಜಯ್, ರವಿ ಕುಮ

ಕುಮಾರಿ ಅರುಂಧತಿಗೆ ಎಂ.ಕಾಂ (ಮಾಹಿತಿ ವ್ಯವಸ್ಥೆ)ಯಲ್ಲಿ ಪ್ರಥಮ ರ‌್ಯಾಂಕ್ ಹಾಗೂ ಚಿನ್ನದ ಪದಕ

ಚಿಕ್ಕನಾಯಕನಹಳ್ಳಿ ತಾಲ್ಲೂಕು,ಯಳನಾಡು ಗ್ರಾಮದ ಉಪನ್ಯಾಸಕ ಶ್ರೀ ವೈ.ಆರ್.ಗೋಪಿ ಹಾಗೂ ಶ್ರೀಮತಿ ವಿ.ಪುಷ್ಟ ಇವರ ಮಗಳಾದ ಕುಮಾರಿ ಜಿ.ಅರುಂಧತಿ ಇವರು ಎಂ.ಕಾಂ (ಮಾಹಿತಿ ವ್ಯವಸ್ಥೆ) ಅಂತಿಮ ವರ್ಷದ ಪದವಿಯಲ್ಲಿ ಪ್ರಥಮ ರ‌್ಯಾಂಕ್ ಹಾಗೂ ಚಿನ್ನದ ಪದಕ ಪಡೆದು ಜಿಲ್ಲೆಗೆ ಕೀರ್ತಿತಂದಿದ್ದಾರೆ. ಕುಮಾರಿ ಜಿ.ಅರುಂಧತಿ ಇವರು ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ತುಮಕೂರು ವಿಶ್ವವಿದ್ಯಾನಿಲಯದ ವಾಣಿಜ್ಯ ಅಧ್ಯಯನ ಮತ್ತು ಸಂಶೋಧನ ವಿಭಾಗದಲ್ಲಿ ವ್ಯಾಸಂಗ ನಡೆಸಿದ್ದರು. ದಿ.05.07.2022 ರಂದು ನಡೆದ ತುಮಕೂರು ವಿಶ್ವವಿದ್ಯಾನಿಲಯದ 15 ನೇ ಘಟಿಕೋತ್ಸವದಲ್ಲಿ ಕರ್ನಾಟಕದ ಘನತೆವೆತ್ತ ರಾಜ್ಯಪಾಲರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಹಾಗೂ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದ ಸದಸ್ಯರಾದ ಪ್ರೊ.ಸುಷ್ಮಾ ಯಾದವ್ ಇವರು ಕುಮಾರಿ ಅರುಂಧತಿಗೆ ರ‌್ಯಾಂಕ್ ಪ್ರಮಾಣಪತ್ರ ಹಾಗೂ ಚಿನ್ನದ ಪದಕ ಪ್ರಧಾನ ಮಾಡಿದರು.

ಹೆಚ್.ತಮ್ಮಡಿಹಳ್ಳಿಯ ಸರಕಾರಿ ಪ್ರೌಢಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ ಕಾಟಲಿಂಗಯ್ಯ ಆಯ್ಕೆ

ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿಯ ಹೆಚ್.ತಮ್ಮಡಿಹಳ್ಳಿಯ  ಸರ್ಕಾರಿ ಪ್ರೌಢಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ ಕಾಟಲಿಂಗಯ್ಯ ಪೂಜಾರಿ ಆಯ್ಕೆಯಾಗಿದ್ದಾರೆ. ಒಂಬತ್ತು ಸದಸ್ಯರನ್ನು ಒಳಗೊಂಡಿರುವ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆ ಘೋಷಣೆಯಾಗಿ 1-7 -2022 ರಂದು ನಾಮಪತ್ರ ಸಲ್ಲಿಕೆಯಾಗಿ, 2-7-2022 ರಂದು ಚುನಾವಣೆ ನಡೆದಿದ್ದು ಅಧ್ಯಕ್ಷರ ಸ್ಥಾನಕ್ಕೆ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ರಮೇಶ್ ಕುಮಾರ್ ಹಾಗೂ ಮತ್ತೊಬ್ಬ ಅಭ್ಯರ್ಥಿ ಕಾಟಲಿಂಗಯ್ಯ ಪೂಜಾರಿ ಇವರು ಸ್ಪರ್ಧಿಸಿದ್ದು, ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ನಡೆದ ಈ ಚುನಾವಣೆಯಲ್ಲಿ ಪೂಜಾರಿ ಕಾಟಲಿಂಗಯ್ಯ ಆರು ಜನ ಸದಸ್ಯರ ಸಹಮತದಿಂದ ಜಯಶೀಲರಾಗಿದ್ದಾರೆ ಮತ್ತು ರಮೇಶ್ ಕುಮಾರ್ ಅವರು ಮೂರು ಮತಗಳನ್ನು ಪಡೆದು ಪರಾಜಿತಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದ್ದಾರೆ.