ಹುಳಿಯಾರು-ಕೆಂಕೆರೆಯ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಬಿಕಾಂ ವಿದ್ಯಾರ್ಥಿಗಳಿಗೆ 'ಕೈಗಾರಿಕಾ ಭೇಟಿ' ಕಾರ್ಯಕ್ರಮವನ್ನು ದಿನಾಂಕ 23-08-2022 ರಂದು ಹಮ್ಮಿಕೊಳ್ಳಲಾಗಿತ್ತು. ಹುಳಿಯಾರಿನ ಕೇಶವಾಪುರದ ಟಿ.ಎಸ್.ರಂಗನಾಥ ಆಂಡ್ ಕಂಪನಿಯ ಕಲ್ಪತರು ಬ್ರಿಕ್ಸ್ ಅಂಡ್ ಟೈಲ್ಸ್ ಗೆ ಭೇಟಿ ನೀಡಲಾಯಿತು. ಸುಮಾರು ಐದು ಎಕರೆ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೈಗಾರಿಕೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಇಲ್ಲಿನ ಇಟ್ಟಿಗೆ ಹೆಂಚು ಮತ್ತು ಟೈಲ್ಸ್ ಇವುಗಳ ಉತ್ಪಾದನಾ ಪ್ರಕ್ರಿಯೆ,ಅಗತ್ಯವಾದ ಕಚ್ಚಾ ವಸ್ತುಗಳು, ಅವುಗಳ ನಿರ್ವಹಣೆ,ದಾಸ್ತಾನು, ಮಾರಾಟ, ಒಟ್ಟು ಉತ್ಪಾದನಾ ವೆಚ್ಚ,ಯಂತ್ರೋಪಕರಣಗಳ ನಿರ್ವಹಣೆ,ಕಾರ್ಮಿಕರು ಹಾಗೂ ಅವರಿಗಿರುವ ಸೌಲಭ್ಯಗಳ ಕುರಿತು ವಿವರವಾದ ಮಾಹಿತಿಯನ್ನು ಪಡೆದುಕೊಂಡರು. ನಂತರ ಸೌರ ಶಕ್ತಿ ಸ್ಥಾವರಕ್ಕೆ ಭೇಟಿ ನೀಡಲಾಯಿತು . ಆ ಸಂಸ್ಥೆಯ ವ್ಯವಸ್ಥಾಪಕರಾದ ಶ್ರೀ ಗಿರೀಶ್ ಅವರು ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಕಲ್ಪತರು ಬ್ರಿಕ್ಸ್ ಅಂಡ್ ಟೈಲ್ಸ್ ಸಂಸ್ಥೆಯ ಮುಖ್ಯಸ್ಥರು ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರಿಗೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಪರವಾಗಿ ಕೃತಜ್ಞತೆ ಸಲ್ಲಿಸಲಾಯಿತು. ಕೈಗಾರಿಕಾ ಭೇಟಿಯ ಪೂರ್ವಭಾವಿ ಮಾಹಿತಿ ಸಭೆ : ಕೈಗಾ...
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070