ಹುಳಿಯಾರು ಪಟ್ಟಣದ BH ರಸ್ತೆಯ ಅಕ್ಕಪಕ್ಕದಲ್ಲಿ, ಹೊಸದಾಗಿ ಹೆದ್ದಾರಿ ನಿರ್ಮಾಣ ಮಾಡಿರುವ ಸಮಯದಲ್ಲಿ ಒಳಚರಂಡಿಗಳ ಮೇಲ್ಬಾಗದಲ್ಲಿ ಸ್ಲಾಬ್ ಹಾಕದಿರುವುದು, ಅವೈಜ್ಞಾನಿಕ ಚರಂಡಿಗಳ ನಿರ್ಮಾಣದಿಂದಾಗಿ ಕೊಳಚೆ ನೀರು ಸರಿಯಾಗಿ ಹರಿಯದೆ, ಕೊಳಚೆ ನೀರು ನಿಂತು ಸೊಳ್ಳೆಗಳು ಹೆಚ್ಚಾಗಿ ರೋಗ ರುಜಿನಗಳು ಹೆಚ್ಚಾಗಲು ಕಾರಣವಾಗಿರುವುದು, ಸ್ವಚ್ಚತಾ ಕಾರ್ಯ ಸಮರ್ಪಕವಾಗಿ ನಡೆಯದಿರುವುದು.... ಹೀಗೆ ಹತ್ತು ಹಲವಾರು ಸಮಸ್ಯೆಗಳನ್ನು ಸರಿಪಡಿಸುವಂತೆ ಸರಿಪಡಿಸುವಂತೆ ಒತ್ತಾಯಿಸಿ ಹುಳಿಯಾರು ಪಟ್ಟಣದಲ್ಲಿ 10-8-22 ಬುಧವಾರ ಬೆಳಿಗ್ಗೆ 11.30ಕ್ಕೆ ಹುಳಿಯಾರಿನ ರಾಂಗೋಪಾಲ್ ವೃತ್ತದಲ್ಲಿ ರೈತಸಂಘ, ಕನ್ನಡ ಪರಸಂಘಟನೆಗಳು, ಮಹಿಳಾ ಸಂಘಟನೆಗಳು, ನಾನಾ ಸಂಘಸಂಸ್ಥೆಗಳ ಹಾಗೂ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರ ಸಹಯೋಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ, ಪ್ರತಿಭಟನಾಕಾರರ ಪರವಾಗಿ ರಾಜ್ಯರೈತಸಂಘದ ಅಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಹಾಗೂ ಹುಳಿಯಾರು ಜಿ.ಪಂ.ಮಾಜಿ ಸದಸ್ಯ ವೈಸಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ