ವಿಷಯಕ್ಕೆ ಹೋಗಿ

ನಮ್ಮ ಪರಿಸರದಲ್ಲಿನ ಗಿಡಮೂಲಿಕೆಗಳನ್ನು ಗುರುತಿಸಿ ದೈನಂದಿನ ಜೀವನದಲ್ಲಿ ಬಳಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಿ

ನಮ್ಮ ಪರಿಸರದಲ್ಲಿನ ಗಿಡ ಮೂಲಿಕೆಗಳು ಅಪಾರವಾದ ಗುಣ ಪಡಿಸುವ ಸಾಮರ್ಥ್ಯ ಹೊಂದಿದ್ದು. ನಾವು ಆ ಔಷಧೀಯ  ಗಿಡ ಮೂಲಿಕೆಗಳನ್ನು ಗುರುತಿಸಿ ದೈನಂದಿನ ಜೀವನದಲ್ಲಿ ಬಳಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹುಳಿಯಾರಿನ ಆರೋಗ್ಯ ಮಂದಿರದ ಪಂಡಿತ ಬಸವರಾಜು ತಿಳಿಸಿದರು.  

ಅವರು  ಗುರುವಾಪುರ ಗ್ರಾಮದಲ್ಲಿ  ಬಿ.ಎಂ.ಎಸ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಆಯೋಜಿಸಲಾಗಿರುವ ರಾಷ್ಟ್ರೀಯ ಸೇವಾ ಯೋಜನೆ ಘಟಕ ಒಂದು ಹಾಗೂ ಎರಡು ಆಯೋಜಿಸಿದ  ವಾರ್ಷಿಕ ವಿಶೇಷ ಶಿಬಿರದಲ್ಲಿ  ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು.

ನಮ್ಮ ಪರಿಸರದಲ್ಲಿಯೇ ಇರುವ ವಸ್ತುಗಳನ್ನು ನಾವು ಬಳಸಿಕೊಳ್ಳಬಹುದು.ಉದಾಹರಣೆಗೆ ಎಕ್ಕದ ಹಾಲು ಚೇಳು ಕಡಿತಕ್ಕೆ ಉತ್ತಮ ಔಷಧಿಯಾದರೆ ಗುಳ್ಳದ ಕಾಯಿ ಕಂಠಕ್ಕೆ  ಬರುವ  ಸಮಸ್ಯೆಗಳನ್ನು  ಪರಿಹರಿಸುತ್ತದೆ.ಉತ್ತರಾಣಿ  ವಿಷ ಜಂತುಗಳ ಕಡಿತ, ಮೊಡವೆಯಂತಹ  ಚರ್ಮದ ಸಮಸ್ಯೆಗಳಿಗೆ ಪರಿಹಾರ ಕೊಡುತ್ತದೆ. ತಂಗಡೆ ಹೂ ಸುಟ್ಟ ಗಾಯ, ಕುದಿವ ನೀರಿನಿಂದ ಸಂಭವಿಸುವ ಗುಳ್ಳೆಗಳಿಗೆ  ದಿವ್ಯೌಷಧವಾಗಿದೆ. 

ಪಂಚ ಪಲ್ಲವ  ದ್ರವ್ಯಗಳ ಕಷಾಯ ಮತ್ತು ಲೇಹ್ಯಗಳಿಂದ ಹೆಚ್ಚು ಕಡಿಮೆ ಎಲ್ಲಾ ರೋಗಗಳನ್ನು  ನಿವಾರಿಸಬಹುದು. ಪಂಚ ಪಲ್ಲವ ಎಂದರೆ ಅರಳಿ ಮರ, ಬೇವು, ಬನ್ನಿ, ಅತ್ತಿ ಹಾಗೂ ಬಿಲ್ವಪತ್ರೆ. ಸಾಧಾರಣ  ನೆಗಡಿಯಿಂದ ಹಿಡಿದು ಯಾವುದೇ ಹೆಸರಿಲ್ಲದ ಕಾಯಿಲೆಗಳನ್ನು ಕೂಡ ಗುಣಪಡಿಸುವ ಶಕ್ತಿ  ಈ ಚಿಗುರುಗಳಿಗೆ ಇದೆ.ಇದೇ ರೀತಿಯ ಇನ್ನೊಂದು ಅದ್ಭುತ ಔಷಧಿ ಅಶ್ವಗಂಧ ಎಂದರು. 

ಉಮತ್ತ, ದಾಗಡಿ ಬಳ್ಳಿ, ಹಾಲೆ ಸೊಪ್ಪು, ಹರಳು, ಅಮೃತಬಳ್ಳಿ, ತುಂಬೆ, ತುಳಸಿ,ಗರಿಕೆ  ಹೀಗೆ ಹತ್ತು ಹಲವು ಔಷಧೀಯ ಸಸ್ಯಗಳ  ಗುಣಲಕ್ಷಣಗಳನ್ನು  ,ಮದ್ದು ತಯಾರಿಸುವ ವಿಧಾನಗಳನ್ನು  ಅವರು ಶಿಬಿರಾರ್ಥಿಗಳಿಗೆ  ವಿವರಿಸಿದರು.   
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೋರನ ಕಣಿವೆಯ ಸುವರ್ಣ ವಿದ್ಯಾ ಚೇತನದ ಶ್ರೀ ರಾಮಕೃಷ್ಣಪ್ಪನವರು ಮಾತಾಡಿ ನಾವು ಬದುಕುತ್ತಿರುವುದು ನಮ್ಮ ಪರಿಸರದ ಕರುಣೆಯಿಂದ. ಪರಿಸರಕ್ಕೆ ವಿರುದ್ಧವಾಗಿ ನಡೆದಿರುವ ಕಾರಣದಿಂದಾಗಿ  ಕೇದಾರನಾಥ, ಹೃಷಿಕೇಶ,ಮಡಿಕೇರಿ ಯಲ್ಲಿ ಸಂಭವಿಸಿದಂತಹ  ಪರಿಸರ ವಿಕೋಪದ ದುರಂತಗಳು ಸಂಭವಿಸುತ್ತವೆ. ಇಂತಹ ದುರಂತಗಳನ್ನು ತಡೆಯಲು ನಾವು  ಹಸಿರು ಹೆಜ್ಜೆಯ ಹಾದಿಯನ್ನು  ತುಳಿಯಬೇಕು  ಎಂದು ಕರೆ ಕೊಟ್ಟರು.ಕಾಡು, ನೀರು,ಪರಿಸರ  ಇವೆಲ್ಲ  ಸಮುದಾಯಕ್ಕೆ ಸೇರಿದ್ದು.  ಗಾಳಿ, ನೀರು, ಬಿಸಿಲು  ಈ ಎಲ್ಲ  ಪರಿಸರದ ಘಟಕಗಳಿಗೆ ಮೈಯೊಡ್ಡಿ ದಂತೆ ನಾವು ಗಟ್ಟಿಯಾಗುತ್ತೇವೆ ಎಂದು ಅವರು ಅಭಿಪ್ರಾಯ ಪಟ್ಟರು.    

ಇನ್ನೋರ್ವ  ಮುಖ್ಯ ಅತಿಥಿ ಬಿ.ಎಂ.ಎಸ್.ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮುಖ್ಯ ಗ್ರಂಥಪಾಲಕ ಡಾ. ಲೋಕೇಶ್ ನಾಯಕ್  ಮಾತನಾಡಿ  ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ಬೆಳೆಸುತ್ತದೆ. ಎನ್ನೆಸ್ಸೆಸ್ ಶಿಬಿರದಲ್ಲಿ  ಕಲಿತ  ಮೌಲ್ಯಗಳು  ವಿದ್ಯಾರ್ಥಿಗಳನ್ನು ಸೌಹಾರ್ದಯುತ ವ್ಯಕ್ತಿಗಳನ್ನಾಗಿ ರೂಪಿಸುತ್ತವೆ ಎಂದು ಹೇಳಿದರು.  

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುರುವಾಪುರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ವೀರಭದ್ರಯ್ಯ ಬಿಎಂಎಸ್ ವಿದ್ಯಾರ್ಥಿಗಳು ಗುರುವಾಪುರ ಗ್ರಾಮದಲ್ಲಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ರಮಗಳ  ಬಗ್ಗೆ ,ಹತ್ತು ಹಲವು  ವಿಷಯಗಳ ಬಗ್ಗೆ  ಜಾಗೃತಿ  ಮೂಡಿಸಿದ ಬಗ್ಗೆ  ಮೆಚ್ಚುಗೆ ವ್ಯಕ್ತ ಪಡಿಸಿದರು.    

ವಿದ್ಯಾರ್ಥಿನಿಯರಾದ ಕಾವ್ಯ ಮತ್ತು ಸಂಗಡಿಗರು ಪ್ರಾರ್ಥಿಸಿದರು.ಕಾಂಚನ  ಸ್ವಾಗತಿಸಿದರು.ದೀಪಕ್ ಕೆ. ಧನ್ಯವಾದ ಸಮರ್ಪಿಸಿದರು. ಕಾವೇರಿ ಪಿ ಬಿ. ಕಾರ್ಯಕ್ರಮ ನಿರೂಪಿಸಿದರು.

 ಬಿಎಂಎಸ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸೇವಾ ಯೋಜನೆಯ ಶಿಬಿರಾಧಿಕಾರಿಗಳಾದ  ಡಾ. ಮೋಹನ್ ಕುಮಾರ್ ಮಿರ್ಲೆ, ಡಾ. ಜಯಶ್ರೀ ಬಿ.ಕದ್ರಿ, ಸಹ ಶಿಬಿರಾಧಿಕಾರಿಗಳಾದ ಶ್ರೀ ಸೋಮಶೇಖರಪ್ಪ, ಶ್ರೀ  ಶಂಕರ್,ಉಪನ್ಯಾಸಕರಾದ ಶ್ರೀ ಲೋಕೇಶ್,ಶ್ರೀ ಹೊನ್ನಪ್ಪ ಕೆ ಎಸ್,ಶ್ರೀ ಚಂದ್ರಹಾಸ  ಬಿ.ಅರ್ ಉಪಸ್ಥಿತರಿದ್ದರು .

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...