ವಿಷಯಕ್ಕೆ ಹೋಗಿ

ನಮ್ಮ ಪರಿಸರದಲ್ಲಿನ ಗಿಡಮೂಲಿಕೆಗಳನ್ನು ಗುರುತಿಸಿ ದೈನಂದಿನ ಜೀವನದಲ್ಲಿ ಬಳಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಿ

ನಮ್ಮ ಪರಿಸರದಲ್ಲಿನ ಗಿಡ ಮೂಲಿಕೆಗಳು ಅಪಾರವಾದ ಗುಣ ಪಡಿಸುವ ಸಾಮರ್ಥ್ಯ ಹೊಂದಿದ್ದು. ನಾವು ಆ ಔಷಧೀಯ  ಗಿಡ ಮೂಲಿಕೆಗಳನ್ನು ಗುರುತಿಸಿ ದೈನಂದಿನ ಜೀವನದಲ್ಲಿ ಬಳಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹುಳಿಯಾರಿನ ಆರೋಗ್ಯ ಮಂದಿರದ ಪಂಡಿತ ಬಸವರಾಜು ತಿಳಿಸಿದರು.  

ಅವರು  ಗುರುವಾಪುರ ಗ್ರಾಮದಲ್ಲಿ  ಬಿ.ಎಂ.ಎಸ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಆಯೋಜಿಸಲಾಗಿರುವ ರಾಷ್ಟ್ರೀಯ ಸೇವಾ ಯೋಜನೆ ಘಟಕ ಒಂದು ಹಾಗೂ ಎರಡು ಆಯೋಜಿಸಿದ  ವಾರ್ಷಿಕ ವಿಶೇಷ ಶಿಬಿರದಲ್ಲಿ  ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು.

ನಮ್ಮ ಪರಿಸರದಲ್ಲಿಯೇ ಇರುವ ವಸ್ತುಗಳನ್ನು ನಾವು ಬಳಸಿಕೊಳ್ಳಬಹುದು.ಉದಾಹರಣೆಗೆ ಎಕ್ಕದ ಹಾಲು ಚೇಳು ಕಡಿತಕ್ಕೆ ಉತ್ತಮ ಔಷಧಿಯಾದರೆ ಗುಳ್ಳದ ಕಾಯಿ ಕಂಠಕ್ಕೆ  ಬರುವ  ಸಮಸ್ಯೆಗಳನ್ನು  ಪರಿಹರಿಸುತ್ತದೆ.ಉತ್ತರಾಣಿ  ವಿಷ ಜಂತುಗಳ ಕಡಿತ, ಮೊಡವೆಯಂತಹ  ಚರ್ಮದ ಸಮಸ್ಯೆಗಳಿಗೆ ಪರಿಹಾರ ಕೊಡುತ್ತದೆ. ತಂಗಡೆ ಹೂ ಸುಟ್ಟ ಗಾಯ, ಕುದಿವ ನೀರಿನಿಂದ ಸಂಭವಿಸುವ ಗುಳ್ಳೆಗಳಿಗೆ  ದಿವ್ಯೌಷಧವಾಗಿದೆ. 

ಪಂಚ ಪಲ್ಲವ  ದ್ರವ್ಯಗಳ ಕಷಾಯ ಮತ್ತು ಲೇಹ್ಯಗಳಿಂದ ಹೆಚ್ಚು ಕಡಿಮೆ ಎಲ್ಲಾ ರೋಗಗಳನ್ನು  ನಿವಾರಿಸಬಹುದು. ಪಂಚ ಪಲ್ಲವ ಎಂದರೆ ಅರಳಿ ಮರ, ಬೇವು, ಬನ್ನಿ, ಅತ್ತಿ ಹಾಗೂ ಬಿಲ್ವಪತ್ರೆ. ಸಾಧಾರಣ  ನೆಗಡಿಯಿಂದ ಹಿಡಿದು ಯಾವುದೇ ಹೆಸರಿಲ್ಲದ ಕಾಯಿಲೆಗಳನ್ನು ಕೂಡ ಗುಣಪಡಿಸುವ ಶಕ್ತಿ  ಈ ಚಿಗುರುಗಳಿಗೆ ಇದೆ.ಇದೇ ರೀತಿಯ ಇನ್ನೊಂದು ಅದ್ಭುತ ಔಷಧಿ ಅಶ್ವಗಂಧ ಎಂದರು. 

ಉಮತ್ತ, ದಾಗಡಿ ಬಳ್ಳಿ, ಹಾಲೆ ಸೊಪ್ಪು, ಹರಳು, ಅಮೃತಬಳ್ಳಿ, ತುಂಬೆ, ತುಳಸಿ,ಗರಿಕೆ  ಹೀಗೆ ಹತ್ತು ಹಲವು ಔಷಧೀಯ ಸಸ್ಯಗಳ  ಗುಣಲಕ್ಷಣಗಳನ್ನು  ,ಮದ್ದು ತಯಾರಿಸುವ ವಿಧಾನಗಳನ್ನು  ಅವರು ಶಿಬಿರಾರ್ಥಿಗಳಿಗೆ  ವಿವರಿಸಿದರು.   
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೋರನ ಕಣಿವೆಯ ಸುವರ್ಣ ವಿದ್ಯಾ ಚೇತನದ ಶ್ರೀ ರಾಮಕೃಷ್ಣಪ್ಪನವರು ಮಾತಾಡಿ ನಾವು ಬದುಕುತ್ತಿರುವುದು ನಮ್ಮ ಪರಿಸರದ ಕರುಣೆಯಿಂದ. ಪರಿಸರಕ್ಕೆ ವಿರುದ್ಧವಾಗಿ ನಡೆದಿರುವ ಕಾರಣದಿಂದಾಗಿ  ಕೇದಾರನಾಥ, ಹೃಷಿಕೇಶ,ಮಡಿಕೇರಿ ಯಲ್ಲಿ ಸಂಭವಿಸಿದಂತಹ  ಪರಿಸರ ವಿಕೋಪದ ದುರಂತಗಳು ಸಂಭವಿಸುತ್ತವೆ. ಇಂತಹ ದುರಂತಗಳನ್ನು ತಡೆಯಲು ನಾವು  ಹಸಿರು ಹೆಜ್ಜೆಯ ಹಾದಿಯನ್ನು  ತುಳಿಯಬೇಕು  ಎಂದು ಕರೆ ಕೊಟ್ಟರು.ಕಾಡು, ನೀರು,ಪರಿಸರ  ಇವೆಲ್ಲ  ಸಮುದಾಯಕ್ಕೆ ಸೇರಿದ್ದು.  ಗಾಳಿ, ನೀರು, ಬಿಸಿಲು  ಈ ಎಲ್ಲ  ಪರಿಸರದ ಘಟಕಗಳಿಗೆ ಮೈಯೊಡ್ಡಿ ದಂತೆ ನಾವು ಗಟ್ಟಿಯಾಗುತ್ತೇವೆ ಎಂದು ಅವರು ಅಭಿಪ್ರಾಯ ಪಟ್ಟರು.    

ಇನ್ನೋರ್ವ  ಮುಖ್ಯ ಅತಿಥಿ ಬಿ.ಎಂ.ಎಸ್.ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಮುಖ್ಯ ಗ್ರಂಥಪಾಲಕ ಡಾ. ಲೋಕೇಶ್ ನಾಯಕ್  ಮಾತನಾಡಿ  ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಲ್ಲಿ ಶಿಸ್ತನ್ನು ಬೆಳೆಸುತ್ತದೆ. ಎನ್ನೆಸ್ಸೆಸ್ ಶಿಬಿರದಲ್ಲಿ  ಕಲಿತ  ಮೌಲ್ಯಗಳು  ವಿದ್ಯಾರ್ಥಿಗಳನ್ನು ಸೌಹಾರ್ದಯುತ ವ್ಯಕ್ತಿಗಳನ್ನಾಗಿ ರೂಪಿಸುತ್ತವೆ ಎಂದು ಹೇಳಿದರು.  

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗುರುವಾಪುರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ವೀರಭದ್ರಯ್ಯ ಬಿಎಂಎಸ್ ವಿದ್ಯಾರ್ಥಿಗಳು ಗುರುವಾಪುರ ಗ್ರಾಮದಲ್ಲಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ರಮಗಳ  ಬಗ್ಗೆ ,ಹತ್ತು ಹಲವು  ವಿಷಯಗಳ ಬಗ್ಗೆ  ಜಾಗೃತಿ  ಮೂಡಿಸಿದ ಬಗ್ಗೆ  ಮೆಚ್ಚುಗೆ ವ್ಯಕ್ತ ಪಡಿಸಿದರು.    

ವಿದ್ಯಾರ್ಥಿನಿಯರಾದ ಕಾವ್ಯ ಮತ್ತು ಸಂಗಡಿಗರು ಪ್ರಾರ್ಥಿಸಿದರು.ಕಾಂಚನ  ಸ್ವಾಗತಿಸಿದರು.ದೀಪಕ್ ಕೆ. ಧನ್ಯವಾದ ಸಮರ್ಪಿಸಿದರು. ಕಾವೇರಿ ಪಿ ಬಿ. ಕಾರ್ಯಕ್ರಮ ನಿರೂಪಿಸಿದರು.

 ಬಿಎಂಎಸ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸೇವಾ ಯೋಜನೆಯ ಶಿಬಿರಾಧಿಕಾರಿಗಳಾದ  ಡಾ. ಮೋಹನ್ ಕುಮಾರ್ ಮಿರ್ಲೆ, ಡಾ. ಜಯಶ್ರೀ ಬಿ.ಕದ್ರಿ, ಸಹ ಶಿಬಿರಾಧಿಕಾರಿಗಳಾದ ಶ್ರೀ ಸೋಮಶೇಖರಪ್ಪ, ಶ್ರೀ  ಶಂಕರ್,ಉಪನ್ಯಾಸಕರಾದ ಶ್ರೀ ಲೋಕೇಶ್,ಶ್ರೀ ಹೊನ್ನಪ್ಪ ಕೆ ಎಸ್,ಶ್ರೀ ಚಂದ್ರಹಾಸ  ಬಿ.ಅರ್ ಉಪಸ್ಥಿತರಿದ್ದರು .

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.