ವಿಷಯಕ್ಕೆ ಹೋಗಿ

ಹುಳಿಯಾರು ಅಮಾನಿಕೆರೆಯಲ್ಲಿರುವ ಅಲೆಮಾರಿ ನಿರ್ಗತಿಕರಿಗೆ ತುರ್ತು ಶಾಶ್ವತ ವಸತಿ ಕಲ್ಪಿಸಿ ಕೆರೆ ಅಂಗಳದಿಂದ ತೆರವುಗೊಳಿಸಿ ಜೀವ ಕಾಪಾಡುವಂತೆ ಮನವಿ

 

🖋🖊ವರದಿ : ಮಲ್ಲಿಕಾರ್ಜುನ ಭಟ್ಟರಹಳ್ಳಿ.

ತುಮಕೂರು ಜಿಲ್ಲೆˌಚಿಕ್ಕನಾಯಕನಹಳ್ಳಿ ತಾಲ್ಲೂಕ್ ಹುಳಿಯಾರು ಪಟ್ಟಣಪಂಚಾಯ್ತಿಗೆ ಹೊಂದಿಕೊಂಡಿರುವ ಸಣ್ಣನೀರಾವರಿ ಇಲಾಖೆಯ ನಿರ್ವಹಣೆಯಲ್ಲಿರುವ ಹುಳಿಯಾರು ಅಮಾನಿಕೆರೆಗೆ ಈ ಭಾಗದಲ್ಲಿ ವ್ಶಾಪಕ ಮಳೆಯಾಗುತ್ತಿರುವುದರಿಂದ ಯಥೇಚ್ಛ ನೀರು ಹರಿದುಬರುತ್ತಿದ್ದು ಸಂತಸದ ಜೊತೆಗೆ ಅಧಿಕಾರಿಗಳ ನಿರ್ಲಕ್ಷ್ಯದ ಕಾರಣದಿಂದಾಗಿ ಆತಂಕಕ್ಕೂ ಕಾರಣವಾಗಿದೆ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಅಧ್ಯಕ್ಷ ಭಟ್ಟರಹಳ್ಳಿ ಮಲ್ಲಿಕಾರ್ಜುನ್ ದೂರಿದ್ದಾರೆ.

ಈ ಬಗ್ಗೆ ಸರ್ಕಾರದ ಎಲ್ಲಾ ಅಧಿಕಾರಿಗಳಿಗೂ ದೂರು ಸಲ್ಲಿಸಿರುವ ಅವರು ಸಮಸ್ಯೆ ಬಗ್ಗೆ ವಿವರಣೆ ನೀಡಿದ್ದಾರೆ.

ಸಾರಾಂಶ: ಮೇಲ್ಕಂಡ ಕೆರೆಯಂಗಳದಲ್ಲಿ ಹಲವಾರು ವರ್ಷಗಳಿಂದ ಸುಮಾರು 50ಕ್ಕೂ ಹೆಚ್ಚು ನಿರ್ಗತಿಕ ಅಲೆಮಾರಿ ಕುಟುಂಬಗಳು ಗುಡಿಸಲು ಹಾಕಿಕೊಂಡು ಬದುಕುತ್ತಿದ್ದಾರೆ. ತಾವೂ ಸಹ ಎಲ್ಲರಂತೆ ಗೌರವದಿಂದ ಬದುಕಲು ಸರ್ಕಾರ ಮೂಲಭೂತ(ನಿವೇಶನˌಮನೆˌವ್ಶವಸಾಯಕ್ಕಾಗಿ ಭೂಮಿ) ಅವಶ್ಶಕತೆಗಳನ್ನು ಕಲ್ಪಿಸಿಕೊಂಡಬೇಕೆಂದು ಹಲವಾರು ವರ್ಷಗಳಿಂದ ನಿರಂತರ ಧ್ವನಿ ಎತ್ತಿ ಅಹೋರಾತ್ರಿ ಧರಣಿ ಸೇರಿದಂತೆ ಸಂವಿಧಾನಿಕ ಹಕ್ಕುಗಳಿಗಾಗಿ ಶಾಂತಿಯಿಂದ ಎಲ್ಲಾ ರೀತಿಯ ಪ್ರತಿಭಟನೆ ˌಮನವಿ ಸಲ್ಲಿಸಿದ್ದಾರೆ. ಹುಳಿಯಾರಿನ ಧರಣಿ ಸ್ಥಳಕ್ಕೆ ಅಂದಿನ ಜಿಲ್ಲಾಧಿಕಾರಿ ಮತ್ತು ಹಾಲೀ ರಾಜ್ಶ ಸಮಾಜಕಲ್ಶಾಣ ಇಲಾಖೆ ಆಯುಕ್ತರಾದ ಡಾ.ರಾಕೇಶ್ ಕುಮಾರ್ ಒಂದು ತಿಂಗಳೊಳಗೆ ಸೂಕ್ತ ಜಾಗ‌ ಗುರುತಿಸಿ ಪರ್ಯಾಯ ಎಲ್ಲಾ ವ್ಶವಸ್ಥೆ ಕಲ್ಪಿಸಿ ನೀವೂ ಸಹ ಗೌರವದಿಂದ ಮನುಷ್ಶರಂತೆ ಬದುಕುವ ಸಂವಿಧಾನ ಬದ್ಧ ಹಕ್ಕನ್ನು ಜಿಲ್ಲಾಡಳಿತ ನೀಡುತ್ತದೆ ಎಂದು ಹೇಳಿ 5ವರ್ಷವಾಗುತ್ತಾ ಬಂದಿದ್ದರೂ ಸಹ ಯಾವುದೇ ರೀತಿಯ ಭರವಸೆ ಈಡೇರಿಸಿಲ್ಲ.

IAS ಸೇರಿದಂತೆ ಕೆಳಹಂತದ ಅಧಿಕಾರಿಗಳೂ ಸಹ ಜನಪ್ರತಿನಿಧಿಗಳ ರೀತಿ ಸುಳ್ಳು ಭರವರಸೆ ನೀಡುವ ಚಾಳಿ ಬೆಳೆಸಿಕೊಂಡಿರುವುದು ಈ ಸಂವಿಧಾನಕ್ಕೆ ಮತ್ತು ಜನರ ವಿಶ್ವಾಸಕ್ಕೆ ಮಾಡುವ ಘಾತುಕತನ ನಿಜಕ್ಕೂ ಅತ್ಶಂತ ಖಂಡನೀಯ ಮತ್ತು ದಂಡನಾರ್ಹವಾದ ಕರ್ತವ್ಶಲೋಪ.

ಕಂದಾಯˌ ಸರ್ವೆˌನಗರಾಭಿವೃದ್ಧಿˌಸಮಾಜಕಲ್ಶಾಣˌಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳ ಸಮನ್ವಯತೆ ಇಲ್ಲದ ಬೇಜವಾಬ್ದಾರಿಯಿಂದ ಇಂದಿಗೂ ಸಹ ಈ ಅಲೆಮಾರಿ ಕುಟುಂಬಗಳು ಹುಳಿಯಾರು ಅಮಾನಿಕೆರೆಯಲ್ಲೇ ಜೀವ ಭಯದಿಂದ ಬದುಕುವ ವಾತಾವರಣ ಇದೆ.

ವ್ಶಾಪಕ ಮಳೆಯಿಂದ ಹುಳಿಯಾರು ಕೆರೆ ಯಾವಾಗ ಬೇಕಾದರೂ ಸಹ ತುಂಬಬಹುದು. ನೀರಿಲ್ಲದ ಕೆರೆಯಲ್ಲಿದ್ದ ವಿಷಕಾರಿ ಜಂತುಗಳು ಈಗ ಈ ಅಲೆಮಾರಿ ಕುಟುಂಬಗಳ ಗುಡಿಸಲುಗಳನ್ನು ವಾಸಕ್ಕಾಗಿ ಆಶ್ರಯಿಸಿದಾಗ ಆಗುವ ಮನುಷ್ಶರ ಪ್ರಾಣಹಾನಿಗೆ ಯಾರು ಹೊಣೆ..? ಮುಂದಾಲೋಚನೆ ˌಮುಂಜಾಗ್ರತೆಯ ಜವಾಬ್ದಾರಿಯಿಲ್ಲದ ತಾಲ್ಲೋಕು ಮತ್ತು ಜಿಲ್ಲಾಡಳಿತಕ್ಕೆ ಅಮಾಯಕ ಜನರ ಬಲಿಬೇಕಾ..?

ಈ ಅಲೆಮಾರಿಕುಟುಂಬಗಳಿಗೆ ಮೂಲಭೂತ ಸೌಕರ್ಯಕ್ಕಾಗಿ ಮೀಸಲಾದ ಹಣ ವೆಚ್ಚಮಾಡಿ ತಮ್ಮ ಕರ್ತವ್ಶ ನಿರ್ವಹಿಸಲು ಯೋಗ್ಯತೆಇಲ್ಲದ ˌಮಾನವೀಯ ಸಂವೇದನೆಗಳಿಲ್ಲದ ಅಧಿಕಾರಿಗಳಿಗೆ ಇನ್ನೂ ಸರ್ಕಾರಿ ಸೇವೆಯಲ್ಲಿ ಮುಂದುವರೆಯಲು ಯಾವ ಅರ್ಹತೆ ಇದೆ..?

ಇಡೀ ತುಮಕೂರು ಜಿಲ್ಲೆಯಲ್ಲಿ ಅಲೆಮಾರಿಗಳು ˌನಿರ್ಗತಿಕರು ˌಭೂರಹಿತರಿಗೆ ಭೂಮಿ-ವಸತಿ ನೀಡುವ ವಿಷಯದಲ್ಲಿ ಜಿಲ್ಲೆ ಮತ್ತು ತಾಲ್ಲೋಕು ಆಡಳಿತ ನಡೆದುಕೊಳ್ಳುತ್ತಿರುವ ರೀತಿ ನಿಜಕ್ಕೂ ಇಡೀ  ನಾಗರೀಕಸಮಾಜ ತಲೆತಗ್ಗಿಸುವಂತಿದೆ.

"ಸಂಬಳ ನನ್ನ ಹಕ್ಕು-ಗಿಂಬಳ ನನ್ನ ತಾಕತ್ತು-ಕೆಲಸ ನನ್ನ ಮರ್ಜಿ" ಎನ್ನುವ ಧೋರಣೆಯಿಂದ ಅಧಿಕಾರಿಗಳು ಹೊರಬಂದು ತಕ್ಷಣವೇ ಹುಳಿಯಾರು ಕೆರೆಯಲ್ಲಿ ವಾಸವಿರುವ ಅಲೆಮಾರಿ ಕುಟುಂಬಗಳನ್ನು ಶಾಶ್ವತ ವ್ಶವಸ್ಥೆಗೆ ಸ್ಥಳಾಂತರಿಸಿ ಜನರ ಜೀವ ಕಾಪಾಡಬೇಕು ಹಾಗೂ ಈ ಪ್ರಕರಣದಲ್ಲಿ ಕರ್ತವ್ಶಲೋಪ ಎಸಗಿರುವ ಜಿಲ್ಲಾಡಳಿತದ ಸಂಭಂಧಿಸಿದ ಇಲಾಖೆಗಳ ಎಲ್ಲಾ ಅಧಿಕಾರಿಗಳ ವಿರುದ್ಧ ಮೊಕದ್ದೊಮ್ಮೆ ದಾಖಲಿಸಿ ನಿರ್ಗತಿಕ ಅಲೆಮಾರಿ ಕುಟುಂಬಗಳಿಗೆ ಗೌರವದಿಂದ ಈ ವ್ಶವಸ್ಥೆಯಲ್ಲಿ ಬದುಕಲು ನ್ಶಾಯ ದೊರಕಿಸಿಕೊಡುವಂತೆ ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ(ರಿ) ಅಧ್ಶಕ್ಷರಾದ ಮಲ್ಲಿಕಾರ್ಜುನ ಭಟ್ಟರಹಳ್ಳಿ (9880665397) ಸರ್ಕಾರದ ಮುಖ್ಯ ಕಾರ್ಯದರ್ಶಿ,ಜಿಲ್ಲಾಧಿಕಾರಿ,ಮುಖ್ಯ ಕಾರ್ಯ ನಿರ್ವಹಣಾಧಿಕಾರಿ,ಚಿಕ್ಕನಾಯಕನಹಳ್ಳಿ ತಹಸೀಲ್ದಾರ್‌ ಸೇರಿದಂತೆ ಎಲ್ಲಾ ಅಧಿಕಾರಿಗಳಲ್ಲೂ, ಲೋಕಾಯುಕ್ತ ಅಧಿಕಾರಿಗಳಲ್ಲೂ ಮನವಿ ಮಾಡಿದ್ದಾರೆ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...