ವಿಷಯಕ್ಕೆ ಹೋಗಿ

ಚಿಕ್ಕನಾಯಕನಹಳ್ಳಿ ತಾಲೂಕಿನ ಹೇಮಾವತಿ ಯೋಜನೆ ಕಿರಣ್ ಕುಮಾರ್ ಅವರ ಕಲ್ಪನೆಯ ಕೂಸು: ಸುರೇಶ್ ಗೌಡ

ಚಿಕ್ಕನಾಯಕನಹಳ್ಳಿ ತಾಲೂಕಿನ ಹೇಮಾವತಿ ಯೋಜನೆ ಕಿರಣ್ ಕುಮಾರ್ ಅವರ ಕಲ್ಪನೆಯ ಕೂಸು: ಸುರೇಶ್ ಗೌಡ
-------------------
ಹುಳಿಯಾರಿನಲ್ಲಿ ಕಿರಣ್ ಕುಮಾರ್ ಅಭಿಮಾನಿ ಬಳಗದಿಂದ ಕೆಎಸ್‌ಕೆ ಜನ್ಮದಿನದ ಅಂಗವಾಗಿ ಧಾರ್ಮಿಕ ಸಮಾರಂಭ,ಬೈಕ್‌ ರ‍್ಯಾಲಿ
---------------------------
ಹುಳಿಯಾರು:ಸಾಕಷ್ಟು ಟೀಕೆಗಳ ನಡುವೆಯೂ ಚಿಕ್ಕನಾಯಕನಹಳ್ಳಿ ತಾಲೂಕಿಗೆ ಹೇಮಾವತಿ ಯೋಜನೆಯು ಸಾಕಾರಗೊಳ್ಳಲು ಮಾಜಿ ಶಾಸಕ ಕಿರಣ್ ಕುಮಾರ್ ಕಾರಣರಾಗಿದ್ದು, ಅವರ ಕಲ್ಪನೆಯ ಕೂಸಾದ ಹೇಮಾವತಿಯಿಂದ ಜಿಲ್ಲೆಯ ಶೇಕಡ 50ರಷ್ಟು ಕೆರೆಗಳು ತುಂಬಲಿದ್ದು,ಸಂಕಷ್ಟಕ್ಕೆ ಈಡಾಗಿದ್ದ ರೈತರ ಮುಖದಲ್ಲಿ ಮಂದಹಾಸ ಮೂಡಿಸಲು ಕಾರಣವಾಗಿದೆ ಎಂದು ತುಮಕೂರು ಗ್ರಾಮಾಂತರದ ಮಾಜಿ ಶಾಸಕ ಸುರೇಶ್ ಗೌಡ ತಿಳಿಸಿದರು.
ಹುಳಿಯಾರಿನಲ್ಲಿ ಕೆ.ಎಸ್.ಕಿರಣ್ ಕುಮಾರ್ ಅಭಿಮಾನಿ ಬಳಗದಿಂದ ಮಾಜಿ ಶಾಸಕರು ಹಾಗೂ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಕೆ.ಎಸ್.ಕಿರಣ್ ಕುಮಾರ್ ಅವರ 59ನೇ ಹುಟ್ಟು ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ತಾಲೂಕಿಗೆ ಹೇಮಾವತಿ ನೀರು ಹರಿಸಲು ಕಿರಣ್ ಕುಮಾರ್ ಹೋರಾಟಗಾರರೊಂದಿಗೆ ಕೈಜೋಡಿಸಿ ಮಂಜೂರಾತಿ ದೊರಕಿಸಿಕೊಳ್ಳಲು ಕಾರಣರಾದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಜಿಎಸ್ ಬಸವರಾಜು ಅವರ ಪರಿಶ್ರಮ ಹಾಗೂ ಕಿರಣ್ ಕುಮಾರ್ ಅವರ ಹೋರಾಟದಿಂದ ಇಂದು ನೀರಿನ ಸಮಸ್ಯೆ ಬಗ್ಗೆ ಹರಿದಿದೆ. 14 ವರ್ಷದಿಂದ ಯಾವುದೇ ಅಧಿಕಾರ ಸಿಗದಿದ್ದರೂ ಸಹ ಪಕ್ಷ ವಿರೋಧಿ ಕಾರ್ಯದಲ್ಲಿ ತೊಡಗದೆ, ಬಿಜೆಪಿ ಗೆಲ್ಲಿಸಲು ಶ್ರಮಿಸಿದ್ದಾರೆ.ಪಕ್ಷ ನಿಷ್ಠೆ ಹಾಗೂ ಪ್ರಾಮಾಣಿಕತೆಗೆ ಮತ್ತೊಂದು ಹೆಸರೇ ಕಿರಣ್ ಕುಮಾರ್ ಅವರಾಗಿದ್ದು ಇವರ ಜನಪರ ಕೆಲಸಗಳೇ ಕಿರಣ್ ಕುಮಾರ್ ಅವರಿಗೆ ಶ್ರೀರಕ್ಷೆಯಾಗಿದ್ದು,ಮುಂದಿನ ಚುನಾವಣೆಯಲ್ಲಿ ಅವರ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.

ಸಂಸದ ಜಿ.ಎಸ್.ಬಸವರಾಜು ಮಾತನಾಡಿ ಬರಪೀಡಿತ ಪ್ರದೇಶವಾಗಿದ್ದ ಚಿಕ್ಕನಾಯಕನಹಳ್ಳಿಗೆ ಬರಪೂರ ನೀರು ಹರಿಯಲು ಕಿರಣ್ ಕುಮಾರ್ ಅವರು ಕಾರಣರಾಗಿದ್ದು, ಮುಂದಿನ ದಿನಗಳಲ್ಲಿ ಹೇಮಾವತಿ- ಎತ್ತಿನಹೊಳೆ- ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಗೊಳ್ಳುವ ಮೂಲಕ ಮೂರರ ಸಂಗಮ ಕ್ಷೇತ್ರ ಚಿಕ್ಕನಾಯಕನಹಳ್ಳಿಯಾಗಲಿದ್ದು, ಇದರಿಂದ ತಾಲೂಕು ಕರ್ನಾಟಕದಲ್ಲಿ ಅತಿ ಉತ್ಪೃಷ್ಟ ನೀರಾವರಿ ತಾಣವಾಗಲಿದೆ ಎಂದರು.ಇಲ್ಲಿನ ನೀರಾವರಿ ಯೋಜನೆಗೆ ಕಿರಣ್ ಕುಮಾರ್ ಅವರ ಕಾಣಿಕೆ ನೆನಪಿನಲ್ಲಿಡುವಂತದ್ದು ಎಂದು ಶ್ಲಾಘಿಸಿದರು.
ರಾಜ್ಯ ಬಿಜೆಪಿ ಉಪಾಧ್ಯಕ್ಷ ನಂದೀಶ್ ಮಾತನಾಡಿ ಸೂರ್ಯನಿಗೂ ಗ್ರಹಣ ಕಾಡುತ್ತದೆ. ಹಾಗೆಯೇ ಕಿರಣನಿಗೂ ಗ್ರಹಣ ಕಾಡಿದ್ದು ಸಹಜ. ಇಂದಿನ ಹುಟ್ಟುಹಬ್ಬಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿರುವ ಇಲ್ಲಿರುವ ಅಪಾರ ಜನಸ್ತೋಮ ನೋಡಿದ ಮೇಲೆ ಅವರ ಗ್ರಹಣ ಬಿಟ್ಟಿರುವುದು ಎಲ್ಲರಿಗೂ ವೇದ್ಯವಾಗಿದ್ದು, ಸರ್ವ ಸಮುದಾಯದ ನಾಯಕರಾಗಿ ಹೊರಹೊಮ್ಮಿರುವ ಅವರ ಮುಂದಿನ ಹುಟ್ಟುಹಬ್ಬವೂ ಅವರು ಶಾಸಕರಾಗುವ ಮೂಲಕ ಆಚರಿಸಿಕೊಳ್ಳುವಂತಾಗಲಿ ಎಂದು ಶುಭ ಹಾರೈಸಿದರು.
ಧಾರ್ಮಿಕ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಯಳನಾಡು ಅರಸೀಕೆರೆ ಮಹಾ ಸಂಸ್ಥಾನದ ಶ್ರೀ ಶ್ರೀ ಜ್ಞಾನಪ್ರಭು ಸಿದ್ದರಾಮ ದೇಶೀಕೇಂದ್ರ ಸ್ವಾಮೀಜಿಗಳು ಜನಪರ ಕಾಳಜಿ ಇರುವ ವ್ಯಕ್ತಿ ಕಿರಣ್ ಕುಮಾರ್ ಸಹಸ್ರಾರು ಅಭಿಮಾನಿಗಳ ಗೌರವಕ್ಕೆ ಪಾತ್ರರಾಗಿರುವುದು ಸಂತೋಷಕರ.ಸಾಗರೋಪಾದಿಯಲ್ಲಿ ಆಗಮಿಸಿರುವ ಅಭಿಮಾನಿಗಳ ಪ್ರೀತಿ ಕಿರಣ್ ಕುಮಾರ್ ಅವರ ಮೇಲಿದ್ದು, ಪುನಹ ಅವರು ಚುನಾವಣೆಯಲ್ಲಿ ಗೆದ್ದು ಶಾಸಕರಾಗಿ ಜನ ಋಣ ತೀರಿಸಲಿ ಎಂದು ಆಶೀರ್ವದಿಸಿದರು.
ಗೋಡೆಕೆರೆ ಶ್ರೀ ಮೃತ್ಯುಂಜಯ ದೇಶೀಕೇಂದ್ರ ಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು.
ಅರೇಮಾದನಹಳ್ಳಿ ವಿಶ್ವಕರ್ಮ ಪೀಠದ ಶ್ರೀ ಶಿವಸುಜ್ಞಾನ ತೀರ್ಥ ಸ್ವಾಮೀಜಿ, ಚಿತ್ರದುರ್ಗ ಸಿಬಾರ ಕೇತೇಶ್ವರ ಮಹಾಮಠದ ಇಮ್ಮಡಿ ಬಸವ ಮೇದಾರ ಕೇತೇಶ್ವರ ಮಹಾ ಸ್ವಾಮೀಜಿ, ನೆಲಮಂಗಲ ವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಮಠದ ಶ್ರೀ ಬಸವ ರಮಾನಂದ ಸ್ವಾಮೀಜಿ, ಗೊಲ್ಲಹಳ್ಳಿ ಸಿದ್ದಲಿಂಗೇಶ್ವರ ಮಹಾ ಸಂಸ್ಥಾನ ಮಠದ ವಿಭವ ವಿದ್ಯಾಶಂಕರ ದೇಶೀಕೇಂದ್ರ ಸ್ವಾಮೀಜಿ, ಬಿ.ಕೋಡಿಹಳ್ಳಿಯ ಶ್ರೀ ಬಸವ ಬೃಂಗೇಶ್ವರ ಮಹಾಮಠದ ಬಸವ ಬೃಂಗೇಶ್ವರ ಸ್ವಾಮೀಜಿ, ಶಿಡ್ಲೇಕೋಣ ಮಹಾಸಂಸ್ಥಾನದ ಡಾ.ಸಂಜಯಕುಮಾರ ಸ್ವಾಮೀಜಿ,ಚಿತ್ರದುರ್ಗ ಲಂಬಾಣಿ ಪೀಠದ ಸೇವಾಲಾಲ್ ಸರ್ದಾರ್ ಮಹಾ ಸ್ವಾಮೀಜಿ. ಮಾದಿಹಳ್ಳಿ ಶ್ರೀಗಳು. ಜಗಳೂರು ಶ್ರೀಗಳು ಮತ್ತಿತರ ಶ್ರೀಗಳು ಉಪಸ್ಥಿತರಿದ್ದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೆಚ್.ಬಿ.ಪಂಚಾಕ್ಷರಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಬುಳ್ಳೆನಹಳ್ಳಿ ಶಿವಪ್ರಕಾಶ್, ಕಿರಣ್ ಕುಮಾರ್ ಅಭಿಮಾನಿ ಬಳಗದ ಅಧ್ಯಕ್ಷ ಎಂಎಂ ಜಗದೀಶ್ ,ನಿವೃತ್ತ ಜಿಲ್ಲಾಧಿಕಾರಿ ಶ್ರೀರಂಗಯ್ಯ, ಶಂಕ್ರಣ್ಣ, ಮಧುಗಿರಿ ಮಂಜುನಾಥ್, ನಿಟ್ಟೂರು ಪ್ರಕಾಶ್, ಮೈಸೂರಪ್ಪ, ರಮೇಶ್, ತಿಮ್ಮರಾಯಪ್ಪ,ಬೆಳ್ಳಾರ,ಈರಣ್ಣ,ರಾಮಣ್ಣ, ಶಿವಣ್ಣ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಧಾರ್ಮಕ ಸಮಾರಂಭಕ್ಕೂ ಮುನ್ನ ಅಭಿಮಾನಿ ಬಳಗದಿಂದ ಬೈಕ್ ರ‍್ಯಾಲಿ,ಸಾಂಸ್ಕೃತಿಕ ತಂಡಗಳಿಂದ ವೀರಗಾಸೆ ಡೊಳ್ಳು ಕುಣಿತದೊಂದಿಗೆ ಮಠಾಧೀಶರ ಹಾಗೂ ಕಿರಣ್ ಕುಮಾರ್ ಅವರ ರಾಜಬೀದಿ ಮೆರವಣಿಗೆ ನಡೆಯಿತು. ಹುಳಿಯಾರಿನ ರಾಮ ಗೋಪಾಲ್ ಸರ್ಕಲ್ ಬಳಿ ಕ್ರೇನ್ ಮೂಲಕ ಹಾಕಲಾದ ಸೇಬಿನ ಹಾರ ಗಮನ ಸೆಳೆಯಿತು.
----------------------------------
ತಾಲೂಕಿನ ಬಹುತೇಕ ಕಾಮಗಾರಿಗಳು ಕಳಪೆ‌ : ಕಿರಣ್ ಕುಮಾರ್
ಹುಳಿಯಾರು: ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದ್ದ ಧಾರ್ಮಿಕ ಸಮಾರಂಭದಲ್ಲಿ ಅಭಿಮಾನಿಗಳ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ 2023ರ ಚುನಾವಣೆಯಲ್ಲಿ ನಾನು ಅಭ್ಯರ್ಥಿಯಾಗಿ ಕಣದಲ್ಲಿರುವುದು ನಿಶ್ಚಿತ.ನಿಮ್ಮೆಲ್ಲರ ಶುಭ ಹಾರೈಕೆಯಿಂದ ಚುನಾವಣೆಯಲ್ಲಿ ನನ್ನ ಗೆಲುವು ಸಹ ನಿಶ್ಚಿತ. ಅಧಿಕಾರ ಇಲ್ಲದಿದ್ದಾಗ ನೀರಾವರಿಗೆ ಹೋರಾಟ ಮಾಡಿ ನೀರು ಹರಿಸುವ ಕಾರ್ಯ ಮಾಡಿದ್ದೆ. ಆಗ ನೀರಾವರಿಗೆ ಸ್ವಾಮೀಜಿಗಳು ಹಾಗೂ ಸಂಘಟನೆಯೊಂದಿಗೆ ಹೋರಾಟ ಮಾಡಿದ್ದ ನನ್ನನ್ನು ಕೀಳಾಗಿ ದೂಷಣೆ ಮಾಡಿ,ಗೇಲಿಯಾಗಿ ಮಾತನಾಡಿದ ವ್ಯಕ್ತಿ ಇದೀಗ ನಮ್ಮ ಯೋಜನೆಗಳ ಫಲ ಅನುಭವಿಸಿ ತಾನೇ ನೀರಾವರಿ ಹರಿಕಾರ ಎಂದು ಬಿಂಬಿಸಿಕೊಳ್ಳ ಹೊರಟಿರುವುದು ನಾಚಿಕೆಗೇಡಿತನ.ನೀರಾವರಿ ಯೋಜನೆ ತರುವುದಾಗಿ ಎಲ್ಲಿಯೂ ಮಾತನಾಡದ ಅವರು ಆತ್ಮವಲೋಕನ ಮಾಡಿಕೊಳ್ಳಬೇಕು ಎಂದು ಎಲ್ಲೂ ಹೆಸರು ಪ್ರಸ್ತಾಪ ಮಾಡದೆ ಸಚಿವರನ್ನು ಕುಟುಕಿದರು.  ಹುಳಿಯಾರು ತಾಲೂಕು ಮಾಡುವುದು ನನ್ನ ಆಶಯವಾಗಿದೆ. ಇದಕ್ಕೆ ನಿಮ್ಮೆಲ್ಲರ ಸಹಕಾರ ಅಗತ್ಯ ಎಂದರು.ಪರ್ಸೆಂಟೇಜ್ ಆಸೆಗಾಗಿ ನಾನು ಯಾವುದೇ ಅಭಿವೃದ್ಧಿ ಮಾಡಲು ಹೊರಟಿಲ್ಲ ತಾಲೂಕಿನಲ್ಲಿ ಆಗಿರುವ ರಸ್ತೆ ಕಾಮಗಾರಿ, ಪೈಪ್ಲೈನ್ ಕಾಮಗಾರಿ, ಹೆದ್ದಾರಿ ಕಾಮಗಾರಿ ಎಲ್ಲಾ ಕಳಪೆಯಾಗಿದ್ದು ಇದನ್ನು ಪ್ರಶ್ನಿಸುವ ನೈತಿಕತೆ ಸಚಿವರು ಕಳೆದುಕೊಂಡಿದ್ದಾರೆ ಎಂದು ಟೀಕಿಸಿದರು.



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...