ವಿಷಯಕ್ಕೆ ಹೋಗಿ

ಮಾಜಿ ಶಾಸಕರ ಭರವಸೆ :ಪ್ರತಿಭಟನೆ ಹಿಂತೆಗೆದುಕೊಂಡ ಕೆರೆ ಅಂಗಳದ ನಿರಾಶ್ರಿತರು

ಮಾಜಿ ಶಾಸಕರ ಭರವಸೆ :ಪ್ರತಿಭಟನೆ ಹಿಂತೆಗೆದುಕೊಂಡ ನಿರಾಶ್ರಿತರು
-----------------------
ನಿರಾಶ್ರಿತರಿಗೆ ಸ್ಪಂದಿಸಿದ ತಹಸಿಲ್ದಾರ್
--------------------------
ನಿರಾಶ್ರಿತರಿಗಾಗಿ ಗಂಜಿ ಕೇಂದ್ರ ತೆರೆದ ತಾಲೂಕು ಆಡಳಿತ
-----------------
ಹುಳಿಯಾರು:ಹುಳಿಯರು ಅಮಾನಿಕೆರೆ ದಡದಲ್ಲಿ ಕಳೆದ ಮೂರ್ನಾಲ್ಕು ದಶಕಗಳಿಂದಗಳಿಂದಲೂ ವಾಸವಿರುವ ಅಲೆಮಾರಿ ನಿರ್ಗತಿಕ ನಿವಾಸಿಗಳ ಗುಡಿಸಿಲುಗಳು ಇದೀಗ ಕೆರೆ ತುಂಬುತ್ತಿರುವ ಹಿನ್ನೆಲೆಯಲ್ಲಿ ಜಲಾವೃತಗೊಳ್ಳುತ್ತಿದ್ದು 120ಕ್ಕೂ ಹೆಚ್ಚು ಕುಟುಂಬಗಳು ಬೀದಿ ಪಾಲಾಗಲಿದ್ದು ತಮಗೆ ಶಾಶ್ವತ ಪುನರ್ ವಸತಿ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಕಳೆದ ಎರಡು ದಿನಗಳಿಂದಲೂ ಪಟ್ಟಣ ಪಂಚಾಯ್ತಿ ಕಛೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದು ,ಇಂದು ಶುಕ್ರವಾರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಸಿ.ಬಿ.ಸುರೇಶ್ ಬಾಬು ತಹಸಿಲ್ದಾರ್ ಅವರೊಂದಿಗೆ ಚರ್ಚಿಸಿ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು.
ಹುಳಿಯಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಶಂಕರಾಪುರ ಬಡಾವಣೆಯಲ್ಲಿನ ಅಮಾನಿಕೆರೆ ಅಂಗಳದಲ್ಲಿ ಅಲೆಮಾರಿಗಳು,ಹಕ್ಕಿಪಿಕ್ಕಿ ಜನಾಂಗದವರು,ನಿರ್ಗತಿಕರು,ಕೂಲಿ ಕಾರ್ಮಿಕರು, ಅಲ್ಪಸಂಖ್ಯಾತರು, ಕಡುಬಡವರು ಕಳೆದ 30-40 ವರ್ಷಗಳಿಂದಲೂ ಜೋಪಡಿ ಕಟ್ಟಿಕೊಂಡು ವಾಸಿಸುತ್ತಿದ್ದು, ಇದೀಗ ಕೆರೆ ತುಂಬುತ್ತಿರುವ ಹಿನ್ನೆಲೆಯಲ್ಲಿ ಗುಡಿಸಲಗಳು ಜಲಾವೃತಗೊಳ್ಳುತ್ತಿದ್ದು ತಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ, ಹಾಗೂ ಈ ಹಿಂದೆ ಇದ್ದಂತಹ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅವರು ನಿವೇಶನ ನೀಡಿ ಮನೆ ಕಟ್ಟಿಸಿ ಕೊಡುವ ಭರವಸೆ ನೀಡಿದ್ದನ್ನು ಈಗಲಾದರೂ ಈಡೇರಿಸುವಂತೆ ಒತ್ತಾಯಿಸಿ ಅಲ್ಲಿನ ಸುಮಾರು ನೂರಕ್ಕೂ ಹೆಚ್ಚು ನಿವಾಸಿಗಳು ಹುಳಿಯಾರು ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಬುಧವಾರ ಸಂಜೆಯಿಂದಲೂ ಧರಣಿ ಕೂತಿದ್ದರು.
ತಹಸೀಲ್ದಾರ್ ತೇಜಸ್ವಿನಿ ಅವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನೆಕಾರರ ಅಹವಾಲು ಆಲಿಸಿ,ಪರ್ಯಾಯ ಸ್ಥಳ ಪರಿಶೀಲಿಸಿ ತಾತ್ಕಾಲಿಕವಾಗಿ ಗಂಜಿ ಕೇಂದ್ರ ತೆರೆದಿದ್ದರು. ಇಂದು ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಸಿ.ಬಿ.ಸುರೇಶ್ ಬಾಬು ಧರಣಿನಿರತರ ಸಮಸ್ಯೆ ಆಲಿಸಿ ಶೀಘ್ರ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ತಹಸಿಲ್ದಾರ್ ಅವರಿಗೆ ಸೂಚಿಸಿದರು.
ಸಧ್ಯ 156 ಮಂದಿಯ ಪಟ್ಟೆ ಕೈಸೇರಿದ್ದು, ಈ ಹಿಂದೆ ಪಂಚಾಯಿತಿಯಲ್ಲಿ 102 ಮಂದಿ ನಿವಾಸಿಗಳ ಪಟ್ಟಿ ಇದ್ದು,ಸ್ಥಳ ಪರಿಶೀಲನೆ ನಡೆಸಿ ಮೊದಲು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸಿ ಪರಿಶೀಲಿಸುವುದಾಗಿ ಸ್ಥಳದಲ್ಲಿದ್ದ ತಹಸಿಲ್ದಾರ್ ತಿಳಿಸಿದರು. ಎಷ್ಟು ಜನಕ್ಕೆ ನಿವೇಶನದ ಅವಶ್ಯಕತೆ ಇದೆ, ಎಷ್ಟು ಜಾಗ ಬೇಕಾಗುವುದೆಂದು ತಿಳಿದು ಸೂಕ್ತ ಸರ್ಕಾರಿ ಜಾಗದ ಸ್ಥಳ ಆಯ್ಕೆ ಮಾಡಿ ಮಂಜೂರಾತಿಗಾಗಿ ಕಳಿಸಿ ಕೊಡುವುದಾಗಿ ತಿಳಿಸಿದರು. ನಂತರ ನಡೆದ ಚರ್ಚೆಯಲ್ಲಿ ಮಾಜಿ ಶಾಸಕರು ಹಾಗೂ ತಹಸಿಲ್ದಾರ್ ಅವರು ನೀಡಿದ ಭರವಸೆಯನ್ನು ಒಪ್ಪಿದ ಪ್ರತಿಭಟನೆಕಾರರು ತಮ್ಮ ಪ್ರತಿಭಟನೆ ಅಂತ್ಯಗೊಳಿಸಿದರು
ಈ ವೇಳೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಿರಣ್ ಕುಮಾರ್,ಉಪಾಧ್ಯಕ್ಷೆ ಶೃತಿ ಸನತ್, ಮುಖ್ಯಾಧಿಕಾರಿ ಭೂತಪ್ಪ, ಜಯ ಕರ್ನಾಟಕ ಜನಪರ ವೇದಿಕೆ ತಾಲೂಕು ಅಧ್ಯಕ್ಷ ಹಾಗೂ ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ರಾಘವೇಂದ್ರ,ಪಟ್ಟಣ ಪಂಚಾಯ್ತಿ ಸದಸ್ಯರಾದ ದಯಾನಂದ್,ಮಂಜಾ ನಾಯ್ಕ,ಮಹಮ್ಮದ್ ಜುಬೇರ್,ಅಬೂಬಕರ್ ಸಿದ್ದೀಕ್,ಚಂದ್ರಶೇಖರ್,ವೇದಿಕೆಯ ಸಾದತ್,ಗಣೇಶ್,ನಾಗರಾಜು,ಶ್ರೀಧರ್ ಮೊದಲಾದವರಿದ್ದರು.
-----------
ತಾಲೂಕು ಆಡಳಿತದಿಂದ ಸೂಕ್ತ ಜಾಗ ಗುರುತಿಸಬೇಕು,ಅರ್ಹ ಫಲಾನುಭವಿಗಳ ಪಟ್ಟಿ ಮಾಡಿ,ಆಶ್ರಯ ಸಮಿತಿ ಮುಂದಿಟ್ಟು ಹಕ್ಕು ಪತ್ರ ಕೊಡಿಸಿ. ಮುಂದೆ ಪ್ರವಾಹ ನಿಧಿಯಿಂದ ಎಲ್ಲರಿಗೂ ಒಟ್ಟಿಗೆ ನಿವೇಶನ ಕಲ್ಪಿಸುವ ವ್ಯವಸ್ಥೆಯನ್ನು ಸಚಿವರು ಮಾಡುತ್ತಾರೆ :ಸಿ.ಬಿ.ಸುರೇಶ್ ಬಾಬು,ಮಾಜಿ ಶಾಸಕರು
--------------
ತಾಲೂಕು ಆಡಳಿತ ಅಲೆಮಾರಿಗಳ ನಿರಾಶ್ರಿತರ ಬಗ್ಗೆ ನಿರ್ಲಕ್ಷ ವಹಿಸದೆ ನಿವೇಶನರಹಿತರ ಪಟ್ಟಿಮಾಡಿ ಅರ್ಹ ಫಲಾನುಭವಿಗಳಿಗೆ ಅತಿ ತುರ್ತಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು : ರಾಘವೇಂದ್ರ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ
------------------
ನಿರಾಶ್ರಿತರ, ವಸತಿ ರಹಿತರ ಪಟ್ಟಿಯನ್ನು ಪಟ್ಟಣ ಪಂಚಾಯಿತಿ ವತಿಯಿಂದ ತಯಾರು ಮಾಡಿಸಿ, ಅರ್ಹರನ್ನು ಗುರುತಿಸಿ,ಸೂಕ್ತ ಜಾಗ ಪರಿಶೀಲಿಸಿ ಸರ್ಕಾರಕ್ಕೆ ಕಳುಹಿಸಿ ಕೊಡುವೆ. ಈಗಾಗಲೇ ತುರ್ತಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು ಪ್ರತಿಭಟನೆಕಾರರು ತಮ್ಮ ಪ್ರತಿಭಟನೆ ಕೈ ಬಿಟ್ಟು ತಾಲೂಕು ಆಡಳಿತದೊಂದಿಗೆ ಸಹಕರಿಸಿ:ತೇಜಸ್ವಿನಿ,ತಹಸೀಲ್ದಾರ್ 
--------------


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.