ವಿಷಯಕ್ಕೆ ಹೋಗಿ

ಮಾಜಿ ಶಾಸಕರ ಭರವಸೆ :ಪ್ರತಿಭಟನೆ ಹಿಂತೆಗೆದುಕೊಂಡ ಕೆರೆ ಅಂಗಳದ ನಿರಾಶ್ರಿತರು

ಮಾಜಿ ಶಾಸಕರ ಭರವಸೆ :ಪ್ರತಿಭಟನೆ ಹಿಂತೆಗೆದುಕೊಂಡ ನಿರಾಶ್ರಿತರು
-----------------------
ನಿರಾಶ್ರಿತರಿಗೆ ಸ್ಪಂದಿಸಿದ ತಹಸಿಲ್ದಾರ್
--------------------------
ನಿರಾಶ್ರಿತರಿಗಾಗಿ ಗಂಜಿ ಕೇಂದ್ರ ತೆರೆದ ತಾಲೂಕು ಆಡಳಿತ
-----------------
ಹುಳಿಯಾರು:ಹುಳಿಯರು ಅಮಾನಿಕೆರೆ ದಡದಲ್ಲಿ ಕಳೆದ ಮೂರ್ನಾಲ್ಕು ದಶಕಗಳಿಂದಗಳಿಂದಲೂ ವಾಸವಿರುವ ಅಲೆಮಾರಿ ನಿರ್ಗತಿಕ ನಿವಾಸಿಗಳ ಗುಡಿಸಿಲುಗಳು ಇದೀಗ ಕೆರೆ ತುಂಬುತ್ತಿರುವ ಹಿನ್ನೆಲೆಯಲ್ಲಿ ಜಲಾವೃತಗೊಳ್ಳುತ್ತಿದ್ದು 120ಕ್ಕೂ ಹೆಚ್ಚು ಕುಟುಂಬಗಳು ಬೀದಿ ಪಾಲಾಗಲಿದ್ದು ತಮಗೆ ಶಾಶ್ವತ ಪುನರ್ ವಸತಿ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಕಳೆದ ಎರಡು ದಿನಗಳಿಂದಲೂ ಪಟ್ಟಣ ಪಂಚಾಯ್ತಿ ಕಛೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದು ,ಇಂದು ಶುಕ್ರವಾರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಸಿ.ಬಿ.ಸುರೇಶ್ ಬಾಬು ತಹಸಿಲ್ದಾರ್ ಅವರೊಂದಿಗೆ ಚರ್ಚಿಸಿ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು.
ಹುಳಿಯಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಶಂಕರಾಪುರ ಬಡಾವಣೆಯಲ್ಲಿನ ಅಮಾನಿಕೆರೆ ಅಂಗಳದಲ್ಲಿ ಅಲೆಮಾರಿಗಳು,ಹಕ್ಕಿಪಿಕ್ಕಿ ಜನಾಂಗದವರು,ನಿರ್ಗತಿಕರು,ಕೂಲಿ ಕಾರ್ಮಿಕರು, ಅಲ್ಪಸಂಖ್ಯಾತರು, ಕಡುಬಡವರು ಕಳೆದ 30-40 ವರ್ಷಗಳಿಂದಲೂ ಜೋಪಡಿ ಕಟ್ಟಿಕೊಂಡು ವಾಸಿಸುತ್ತಿದ್ದು, ಇದೀಗ ಕೆರೆ ತುಂಬುತ್ತಿರುವ ಹಿನ್ನೆಲೆಯಲ್ಲಿ ಗುಡಿಸಲಗಳು ಜಲಾವೃತಗೊಳ್ಳುತ್ತಿದ್ದು ತಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ, ಹಾಗೂ ಈ ಹಿಂದೆ ಇದ್ದಂತಹ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಅವರು ನಿವೇಶನ ನೀಡಿ ಮನೆ ಕಟ್ಟಿಸಿ ಕೊಡುವ ಭರವಸೆ ನೀಡಿದ್ದನ್ನು ಈಗಲಾದರೂ ಈಡೇರಿಸುವಂತೆ ಒತ್ತಾಯಿಸಿ ಅಲ್ಲಿನ ಸುಮಾರು ನೂರಕ್ಕೂ ಹೆಚ್ಚು ನಿವಾಸಿಗಳು ಹುಳಿಯಾರು ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಬುಧವಾರ ಸಂಜೆಯಿಂದಲೂ ಧರಣಿ ಕೂತಿದ್ದರು.
ತಹಸೀಲ್ದಾರ್ ತೇಜಸ್ವಿನಿ ಅವರು ಸ್ಥಳಕ್ಕೆ ಆಗಮಿಸಿ ಪ್ರತಿಭಟನೆಕಾರರ ಅಹವಾಲು ಆಲಿಸಿ,ಪರ್ಯಾಯ ಸ್ಥಳ ಪರಿಶೀಲಿಸಿ ತಾತ್ಕಾಲಿಕವಾಗಿ ಗಂಜಿ ಕೇಂದ್ರ ತೆರೆದಿದ್ದರು. ಇಂದು ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಸಿ.ಬಿ.ಸುರೇಶ್ ಬಾಬು ಧರಣಿನಿರತರ ಸಮಸ್ಯೆ ಆಲಿಸಿ ಶೀಘ್ರ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ತಹಸಿಲ್ದಾರ್ ಅವರಿಗೆ ಸೂಚಿಸಿದರು.
ಸಧ್ಯ 156 ಮಂದಿಯ ಪಟ್ಟೆ ಕೈಸೇರಿದ್ದು, ಈ ಹಿಂದೆ ಪಂಚಾಯಿತಿಯಲ್ಲಿ 102 ಮಂದಿ ನಿವಾಸಿಗಳ ಪಟ್ಟಿ ಇದ್ದು,ಸ್ಥಳ ಪರಿಶೀಲನೆ ನಡೆಸಿ ಮೊದಲು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸಿ ಪರಿಶೀಲಿಸುವುದಾಗಿ ಸ್ಥಳದಲ್ಲಿದ್ದ ತಹಸಿಲ್ದಾರ್ ತಿಳಿಸಿದರು. ಎಷ್ಟು ಜನಕ್ಕೆ ನಿವೇಶನದ ಅವಶ್ಯಕತೆ ಇದೆ, ಎಷ್ಟು ಜಾಗ ಬೇಕಾಗುವುದೆಂದು ತಿಳಿದು ಸೂಕ್ತ ಸರ್ಕಾರಿ ಜಾಗದ ಸ್ಥಳ ಆಯ್ಕೆ ಮಾಡಿ ಮಂಜೂರಾತಿಗಾಗಿ ಕಳಿಸಿ ಕೊಡುವುದಾಗಿ ತಿಳಿಸಿದರು. ನಂತರ ನಡೆದ ಚರ್ಚೆಯಲ್ಲಿ ಮಾಜಿ ಶಾಸಕರು ಹಾಗೂ ತಹಸಿಲ್ದಾರ್ ಅವರು ನೀಡಿದ ಭರವಸೆಯನ್ನು ಒಪ್ಪಿದ ಪ್ರತಿಭಟನೆಕಾರರು ತಮ್ಮ ಪ್ರತಿಭಟನೆ ಅಂತ್ಯಗೊಳಿಸಿದರು
ಈ ವೇಳೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಿರಣ್ ಕುಮಾರ್,ಉಪಾಧ್ಯಕ್ಷೆ ಶೃತಿ ಸನತ್, ಮುಖ್ಯಾಧಿಕಾರಿ ಭೂತಪ್ಪ, ಜಯ ಕರ್ನಾಟಕ ಜನಪರ ವೇದಿಕೆ ತಾಲೂಕು ಅಧ್ಯಕ್ಷ ಹಾಗೂ ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ರಾಘವೇಂದ್ರ,ಪಟ್ಟಣ ಪಂಚಾಯ್ತಿ ಸದಸ್ಯರಾದ ದಯಾನಂದ್,ಮಂಜಾ ನಾಯ್ಕ,ಮಹಮ್ಮದ್ ಜುಬೇರ್,ಅಬೂಬಕರ್ ಸಿದ್ದೀಕ್,ಚಂದ್ರಶೇಖರ್,ವೇದಿಕೆಯ ಸಾದತ್,ಗಣೇಶ್,ನಾಗರಾಜು,ಶ್ರೀಧರ್ ಮೊದಲಾದವರಿದ್ದರು.
-----------
ತಾಲೂಕು ಆಡಳಿತದಿಂದ ಸೂಕ್ತ ಜಾಗ ಗುರುತಿಸಬೇಕು,ಅರ್ಹ ಫಲಾನುಭವಿಗಳ ಪಟ್ಟಿ ಮಾಡಿ,ಆಶ್ರಯ ಸಮಿತಿ ಮುಂದಿಟ್ಟು ಹಕ್ಕು ಪತ್ರ ಕೊಡಿಸಿ. ಮುಂದೆ ಪ್ರವಾಹ ನಿಧಿಯಿಂದ ಎಲ್ಲರಿಗೂ ಒಟ್ಟಿಗೆ ನಿವೇಶನ ಕಲ್ಪಿಸುವ ವ್ಯವಸ್ಥೆಯನ್ನು ಸಚಿವರು ಮಾಡುತ್ತಾರೆ :ಸಿ.ಬಿ.ಸುರೇಶ್ ಬಾಬು,ಮಾಜಿ ಶಾಸಕರು
--------------
ತಾಲೂಕು ಆಡಳಿತ ಅಲೆಮಾರಿಗಳ ನಿರಾಶ್ರಿತರ ಬಗ್ಗೆ ನಿರ್ಲಕ್ಷ ವಹಿಸದೆ ನಿವೇಶನರಹಿತರ ಪಟ್ಟಿಮಾಡಿ ಅರ್ಹ ಫಲಾನುಭವಿಗಳಿಗೆ ಅತಿ ತುರ್ತಾಗಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು : ರಾಘವೇಂದ್ರ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ
------------------
ನಿರಾಶ್ರಿತರ, ವಸತಿ ರಹಿತರ ಪಟ್ಟಿಯನ್ನು ಪಟ್ಟಣ ಪಂಚಾಯಿತಿ ವತಿಯಿಂದ ತಯಾರು ಮಾಡಿಸಿ, ಅರ್ಹರನ್ನು ಗುರುತಿಸಿ,ಸೂಕ್ತ ಜಾಗ ಪರಿಶೀಲಿಸಿ ಸರ್ಕಾರಕ್ಕೆ ಕಳುಹಿಸಿ ಕೊಡುವೆ. ಈಗಾಗಲೇ ತುರ್ತಾಗಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು ಪ್ರತಿಭಟನೆಕಾರರು ತಮ್ಮ ಪ್ರತಿಭಟನೆ ಕೈ ಬಿಟ್ಟು ತಾಲೂಕು ಆಡಳಿತದೊಂದಿಗೆ ಸಹಕರಿಸಿ:ತೇಜಸ್ವಿನಿ,ತಹಸೀಲ್ದಾರ್ 
--------------


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...