ವಿಷಯಕ್ಕೆ ಹೋಗಿ

ಹುಳಿಯಾರು ಕೆರೆ ಅಂಗಳದ ನಿವಾಸಿಗಳ ಬದುಕು ಮೂರಾಬಟ್ಟೆ

ಹುಳಿಯಾರು ಕೆರೆ ಅಂಗಳದ ನಿವಾಸಿಗಳ ಬದುಕು ಮೂರಾಬಟ್ಟೆ...

ಜಲಾವೃತಗೊಳ್ಳುತ್ತಿರುವ ಮನೆಯಿಂದಾಗಿ, ಮನೆ ಕಳೆದುಕೊಂಡು ಮುಂದೇನು ಎಂಬ ಆತಂಕದಲ್ಲಿ ನಿರಾಶ್ರಿತರು..
-------------
✍️ವರದಿ :*ನರೇಂದ್ರಬಾಬು ಹುಳಿಯಾರು*

ಹುಳಿಯಾರು:ಹುಳಿಯಾರು ಶಂಕರಾಪುರದ ಕೆರೆ ಅಂಗಳದಲ್ಲಿ ಮನೆ ಕಟ್ಟಿ ಜೀವನ ಸಾಗಿಸುತ್ತಿರುವವರಿಗೆ ಕಳೆದ ಎರಡು ದಶಕಗಳಿಂದಲೂ ಉದ್ಭವವಾಗದ ನೀರಿನ ಸಮಸ್ಯೆ ಇದೀಗ ಉಲ್ಬಣಗೊಂಡಿದ್ದು, ಮಳೆಯಿಂದಾಗಿ ಹುಳಿಯಾರು ಕೆರೆ ತುಂಬಿದಂತೆಲ್ಲ,ಕೆರೆಅಂಗಳದಲ್ಲಿರುವ ಮನೆಗಳೆಲ್ಲ ಜಲಾವೃತಗೊಳ್ಳುತ್ತಿದೆ. ದಿನೇ ದಿನೇ ಜಲಾವೃತಗೊಳ್ಳುತ್ತಿರುವ ಮನೆಗಳಲ್ಲಿ ವಾಸ ಮಾಡಲು ಸಾಧ್ಯವಾಗದೆ, ಬೇರೆ ಸ್ಥಳವು ಇಲ್ಲದೆ, ಕೆರೆ ಅಂಗಳದ ನಿವಾಸಿಗಳ ಬದುಕು ಮೂರಾ ಬಟ್ಟೆಯಾಗಿದೆ.
ವಾಸ ಮಾಡಲು ಯೋಗ್ಯವಿಲ್ಲ : ಹುಳಿಯಾರು ಶಂಕರಾಪುರದ ಕೆರೆ ಅಂಗಳದಲ್ಲಿ ಹಲವಾರು ವರ್ಷಗಳಿಂದಲೂ ಸುಮಾರು ನೂರಕ್ಕೂ ಹೆಚ್ಚು ಬಡ ಹಾಗೂ ನಿರ್ಗತಿಕ ಕುಟುಂಬಗಳು ಯಾವುದೇ ಮೂಲಭೂತ ಸೌಕರ್ಯ ಇಲ್ಲದ, ವಾಸ ಮಾಡಲು ಯೋಗ್ಯವಲ್ಲದ ಸ್ಥಳದಲ್ಲಿ,ಹೀನಾಯ ಸ್ಥಿತಿಯಲ್ಲಿ ಗುಡಿಸಲು ಹಾಗೂ ತಗಡಿನ ಶೆಡ್ಡಿನ ಮನೆ ನಿರ್ಮಾಣ ಮಾಡಿಕೊಂಡಿದ್ದು, ಅಲ್ಲಿಯೇ ವಾಸವಾಗಿದ್ದುಕೊಂಡು ಹೇರ್ ಪಿನ್, ಕೂದಲು, ಛತ್ರಿ ರಿಪೇರಿ, ಬೀಗ ರಿಪೇರಿ ಹೀಗೆ ಸಣ್ಣ ಪುಟ್ಟ ವ್ಯಾಪಾರ ಮತ್ತು ಕೂಲಿ ನಾಲಿ ಮಾಡಿಕೊಂಡು, ಅದರಿಂದ ಬರುವ ಪುಡಿಗಾಸಿನಿಂದಲೇ ಕುಟುಂಬ ಪೋಷಿಸುತ್ತಿದ್ದಾರೆ.
ಇಲ್ಲಿರುವ ಯಾರೊಬ್ಬರಿಗೂ ಸ್ವಂತ ಜಮೀನಾಗಲಿ, ಕಾಯಂ ಕೆಲಸವಾಗಲಿ, ವರಮಾನ ಬರುವ ಯಾವುದೇ ಮೂಲವೂ ಇಲ್ಲದೆ ಗುಡಿಸಿಲಿನಲ್ಲಿ ವಾಸ ಮಾಡಿಕೊಂಡೆ ಹಾಗೂ ಹೀಗೂ ಜೀವನ ದೂಕುತ್ತಿದ್ದಾರೆ.
ಶಂಕರಾಪುರ ನಿವಾಸಿಗಳೆಂದು ಪರಿಗಣಿಸಿರುವ ಇವರನ್ನು ಇಲ್ಲಿನ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದೆಯೇ ಹೊರತು ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಲ್ಲ. ಇವರ ಸಮಸ್ಯೆ ಮನಗೊಂಡಿದ್ದರು ಸಹ ಬೇರಡೆ ನಿವೇಶನ ನೀಡುವ ಕೆಲಸವಾಗಲಿ ಅಥವಾ ಯಾವುದೇ ಪರ್ಯಾಯ ವ್ಯವಸ್ಥೆಯನ್ನಾಗಲಿ ಕಲ್ಪಿಸಲಾಗಿಲ್ಲ.
ಕೆರೆಗೆ ನೀರು ಬರಲು ಅಸಾಧ್ಯ: ಹುಳಿಯಾರು ಕೆರೆ ಯಾವತ್ತೂ ನೀರೇ ಕಾಣದೆ ಬರಡು ಭೂಮಿಯಾಗಿ ಬಳ್ಳಾರಿ ಜಾಲಿಗೆ ಆಶ್ರಯವಾಗಿತ್ತು. ಇಲ್ಲಿನ ಮಣ್ಣು ಇಟ್ಟಿಗೆ ಫ್ಯಾಕ್ಟರಿಗೆ ಅನುಕೂಲವಾಗಿದ್ದರಿಂದ ಸುತ್ತಮುತ್ತ ಹಲವಾರು ಇಟ್ಟಿಗೆ ಫ್ಯಾಕ್ಟರಿಗಳು ತಲೆ ಎತ್ತಲು ಕಾರಣವಾಗಿತ್ತು. ಹುಳಿಯರು ಕೆರೆಗೆ ನೀರು ಬರಲು ಅಸಾಧ್ಯ ಎನ್ನುವ ವಾತಾವರಣದಲ್ಲಿ ಮಾಜಿ ಹಾಲಿ ಜನಪ್ರತಿನಿಧಿಗಳ ನೀರು ಹರಿಸಲೇಬೇಕೆನ್ನುವ ಸಂಕಲ್ಪದಿಂದಾಗಿ ಹೇಮಾವತಿ ನೀರು ಹುಳಿಯಾರಿಗೆ ಕೆರೆಗೆ ಹರಿಯಲು ಕಾರಣವಾಯಿತು. ಕಳೆದ ವರ್ಷ ಹಾಗೂ ಹೀಗೂ ಹೇಮಾವತಿ ನೀರು ಹರಿಸಿದ ಪ್ರಯುಕ್ತ ಹುಳಿಯಾರು ಕೆರೆ ನೀರು ಕಂಡಂತಾಗಿತ್ತು. ಇದಕ್ಕೆ ಪೂರಕವಾಗಿ ಕಳದೊಂದು ತಿಂಗಳಿನಿಂದಲೂ ಹುಳಿಯಾರು ಸುತ್ತಮುತ್ತ ಉತ್ತಮ ಮಳೆಯಾಗುತ್ತಿದ್ದು, ಕಳೆದ ಎರಡು ದಶಕಗಳಿಂದಲೂ ಬರಡಾಗಿದ್ದ ಹುಳಿಯಾರು ಕೆರೆಗೆ ನೀರು ಬರಲು ಕಾರಣವಾಯಿತು.
ಹೀಗೇ ನೀರೆ ಕಾಣದಿದ್ದ ಕೆರೆಯ ಅಂಗಳದಲ್ಲಿ ಬಡಬಗ್ಗರು-ನಿರಾಶ್ರಿತರು ಜೋಪಡಿ ಹಾಕಿಕೊಳ್ಳುವ ಮೂಲಕ ತಮ್ಮ ಬದುಕು ಕಟ್ಟಿಕೊಳ್ಳಲು ಮುಂದಾಗಿ ದಶಕಗಳೇ ಕಳೆದಿದ್ದು, ಇದೀಗ ನೀರಿನ ಸಮಸ್ಯೆಯಿಂದಾಗಿ ಕಂಗಾಲಾಗಿ ನಿರಾಶ್ರಿತರಾಗಿದ್ದಾರೆ.

ಮನೆಗಳು ಒಂದೊಂದಾಗಿ ಜಲಾವೃತ :ದಿನೇ ದಿನೇ ನೀರಿನ ಮಟ್ಟ ಏರಿಕೆಯಾಗಿ, ಮನೆಗಳು ಒಂದೊಂದಾಗಿ ಜಲಾವೃತಗೊಳ್ಳುತ್ತಿದೆ. ಮಣ್ಣಿನ ಗೋಡೆಗಳು ಕುಸಿಯುತ್ತಿವೆ. ಮನೆಯಿದ್ದೂ ನಿರಾಶ್ರಿತರಾದ ಇವರಿಗೆ ಪರ್ಯಾಯ ವ್ಯವಸ್ಥೆ ಮಾಡಲು ಸರ್ಕಾರ ಮೀನಾ ಮೇಷ ಏಣಿಸಿದ್ದರಿಂದ ಬದುಕು ನರಕ ಸದೃಶ್ಯವಾಗಿದೆ.
ಇದೀಗ ಪರ್ಯಾಯ ವ್ಯವಸ್ಥೆಗೆ ತಾಲೂಕು ಆಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗಳು ಮುಂದಾಗಿದ್ದರೂ ಸಹ,ಧಿಡೀರ್ ವಸತಿ ಸೌಲಭ್ಯ ಕಲ್ಪಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ದಾರಿ ಕಾಣದ ನಿರಾಶ್ರಿತರು ಹೋರಾಟದ ಹಾದಿ ಹಿಡಿದಿದ್ದಾರೆ.

ಕಳೆದ 18 ದಿನಗಳಿಂದಲೂ ನಾಡಕಚೇರಿ ಮುಂದೆ ಧರಣಿ ಕೂತಿದ್ದಾರೆ. ಅಧಿಕಾರಿಗಳು ಇವರಿಗೆ ವಸತಿ ಸೌಕರ್ಯ ಕಲ್ಪಿಸಲು ಶ್ರಮಿಸುತ್ತಿದ್ದರು ಸಹ ಎಲ್ಲರಿಗೂ ಪುನರ್ ವಸತಿ ಕಲ್ಪಿಸುವುದು ಅಸಾಧ್ಯವಾಗಿದೆ. ಈಗಷ್ಟೇ ನಿದ್ದೆಯಿಂದ ಎಚ್ಚೆತ್ತಿರುವ ಪಟ್ಟಣ ಪಂಚಾಯಿತಿ ಇಲ್ಲಿನ ವಸತಿರಹಿತರ ಸಮೀಕ್ಷೆ ನಡೆಸಿ ಪಟ್ಟಿ ತಯಾರು ಮಾಡಿದೆ. ಹುಳಿಯಾರು ಸಮೀಪದ ಗೌಡಗೆರೆ ಸರ್ವೇ ನಂಬರ್ ನಲ್ಲಿ ನಿವೇಶನ ಗುರುತಿಸಿ ಅಲ್ಲಿ ವಸತಿ ಸೌಕರ್ಯ ಕಲ್ಪಿಸಿಕೊಡುವ ವ್ಯವಸ್ಥೆ ಮಾಡಲಾಗುತ್ತಿದೆ.ಆದರೆ ಮೊದಲ ಹಂತದಲ್ಲಿ ಸದ್ಯಕ್ಕೆ 34 ಜನ ಅಲೆಮಾರಿಗಳಿಗೆ  ಮಾತ್ರ ನಿವೇಶನ ಕಲ್ಪಿಸುವ ವ್ಯವಸ್ಥೆ ಮಾಡಲಾಗುತ್ತಿರುವುದರಿಂದ ಉಳಿದ ನೂರಕ್ಕೂ ಹೆಚ್ಚು ಜನರಿಗೆ ಮುಂದೇನು ಎಂಬ ಆತಂಕ ಕಾಡುತ್ತಿದೆ. ಸರ್ಕಾರ ಕೆಲವರಿಗೆ ಮಾತ್ರ ಸೂರು ಕಲ್ಪಿಸುತ್ತಿದ್ದು ಮನೆ ಕಳೆದುಕೊಂಡು ನಿರಾಶ್ರಿತರಾಗಿರುವ  ನಮ್ಮೆಲ್ಲರಿಗೂ ಸೂರಿನ ವ್ಯವಸ್ಥೆ ಮಾಡಲಿ.ಬರೀ ಕಾನೂನು ರೀತ್ಯ ಮಾತನಾಡುವ ಬದಲು ಮಾನವೀಯತೆ ದೃಷ್ಟಿಯಿಂದ ನೋಡಿ, ನಮ್ಮ ಸಂಕಷ್ಟದ ಸಮಯದಲ್ಲಿ ಒತ್ತಾಸೆಯಾಗಿ ನಿಲ್ಲಲಿ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ
--------------------------
ಕೆರೆ ತುಂಬುತ್ತಿರುವ ಕಾರಣದಿಂದ ಶಂಕರಪುರದ ಕೆರೆ ಅಂಗಳದಲ್ಲಿನ ನಿರಾಶ್ರಿತರಿಗೆ ಸಮಸ್ಯೆಯಾಗಿದೆ. ವಿಸ್ತಾರವಾಗಿದ್ದ ಕೆರೆಯನ್ನು ಬಸ್ ನಿಲ್ದಾಣ-ಟ್ಯಾಕ್ಸಿ ಸ್ಟಾಂಡ್ ಬಳಿ ಹತ್ತಾರು ಅಡಿ ಎತ್ತರಕ್ಕೆ ಲೋಡುಗಟ್ಟಲೆ ಮಣ್ಣು ತುಂಬಿದ್ದರಿಂದ, ಹಿನ್ನಿರು ಹೆಚ್ಚಾಗಿ ಶಂಕರಪುರದ ರಸ್ತೆಯ ಮೇಲೆಲ್ಲ ನಿಲ್ಲಲ್ಲು ಕಾರಣವಾಗಿ ಸಮಸ್ಯೆಯಾಗಿದೆ.: ಏಜೆಂಟ್ ಕುಮಾರ್ ,ಮಾಜಿ ತಾಲೂಕು ಪಂಚಾಯತಿ ಸದಸ್ಯ

-------------------------
ಕೆರೆ ಅಂಗಳದಲ್ಲಿನ ವಸತಿರಹಿತರಿಗೆ ಸ್ಪಂದಿಸಬೇಕಾಗಿರುವುದು ಸರಕಾರದ ಆದ್ಯ ಕರ್ತವ್ಯ. ಅಧಿಕಾರಿಗಳಿಗೆ ಕಳೆದೆರಡು ವರ್ಷಗಳಿಂದಲೂ ಸಮಸ್ಯೆ ಪರಿಹರಿಸುವಂತೆ ಮನವಿ ಮಾಡುತ್ತಿದ್ದರು ಸಹ ನಿರ್ಲಕ್ಷ್ಯ ಧೋರಣೆಯಿಂದಾಗಿ ಸಮಸ್ಯೆ ಉಲ್ಬಣಗೊಂಡಿದೆ. ಜಲಾವೃತಗೊಳ್ಳುತ್ತಿರುವ ಮನೆಯವರು, ಅನಿವಾರ್ಯವಾಗಿ ಸ್ಥಳಾಂತರವಾಗುವಂತಾಗಿದೆ.ನಮ್ಮಗಳ ಸ್ಥಿತಿಯನ್ನು ಸರಕಾರ ಕೂಡಲೇ ಗಮನಹರಿಸಿ ಬಗೆಹರಿಸಬೇಕು: ಜಯಲಕ್ಷ್ಮಮ್ಮ, ಅಧ್ಯಕ್ಷರು-ಸೃಜನ ಮಹಿಳಾ ವೇದಿಕೆv



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.