ಹುಳಿಯಾರು : ಈ ಬಾರಿಯ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಥಳೀಯರಾದ ಕ್ಷೇತ್ರದವರಿಗೆ ಮಾತ್ರವೇ ಅವಕಾಶ ನೀಡುವಂತೆ ಕಾಂಗ್ರೆಸ್ ಪಕ್ಷದ ಹುಳಿಯಾರು ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಹುಳಿಯಾರು ಪಟ್ಟಣ ಪಂಚಾಯಿತಿ ಸದಸ್ಯ ಎಸ್. ಆರ್.ಎಸ್ ದಯಾನಂದ್ ಅವರ ನಿವಾಸದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಈಗಾಗಲೇ ಮುಂದಿನ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದ್ದು ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ. ಕಳೆದ ಎರಡು ಚುನಾವಣೆಯಿಂದಲೂ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಾನಾ ಕಾರಣಗಳಿಂದ ಹೊರಗಿನವರಿಗೆ ಟಿಕೆಟ್ ಕೊಡುವ ಸಂಸ್ಕೃತಿ ನಡೆಯುತ್ತಿದ್ದು ,ಈ ಚುನಾವಣೆಯಲ್ಲಿ ವಲಸಿಗರಿಗೆ /ಹೊರಗಿನವರಿಗೆ ಮಣೆ ಹಾಕುವ ಬದಲು ಕಾಂಗ್ರೆಸ್ ಪಕ್ಷ ಮತ್ತು ಸಿದ್ಧಾಂತಕ್ಕೆ ನಿಷ್ಟರಾಗಿರುವ, ಚುನಾವಣೆಯಲ್ಲಿ ಗೆದ್ದೇ ಗೆಲ್ಲುವ ಹೋರಾಟ ಮನೋಭಾವ ಹೊಂದಿರುವ ಸಮರ್ಥರಾದ ಸ್ಥಳೀಯ ಅಭ್ಯರ್ಥಿಗಳಿಗಷ್ಟೆ ಟಿಕೆಟ್ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕೆಂದರೆ ಕ್ಷೇತ್ರದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ ಮಾತ್ರ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಾಧ್ಯ . ಈಗಾಗಲೇ ಚಿಕ್ಕನಾಯಕನಹ...
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070