ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಫೆಬ್ರವರಿ, 2023 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇತಿಹಾಸದ ಪಾತ್ರ

ಹುಳಿಯಾರು :ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಇತಿಹಾಸದ ಪಾತ್ರ ಎಂಬ ವಿಷಯ ಕುರಿತು ಹುಳಿಯಾರಿನ ಬಿ.ಎಂ.ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶೇಷ ಉಪನ್ಯಾಸವನ್ನು ಆಯೋಜಿಸಲಾಗಿತ್ತು.  ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಪಾವಗಡದ ವೈ.ಈ.ಆರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊ. ಲಿಂಗರಾಜು.ಪಿ ಮಾತನಾಡಿ  "ವಿದ್ಯಾಭ್ಯಾಸಕ್ಕೆ ಸಾಮಾನ್ಯವಾಗಿ ಹಲವು ತೊಡಕುಗಳು  ಎದುರಾಗುತ್ತವೆ, ಆದರೆ ಛಲ ಹೊಂದಿದ್ದರೆ ಏನು  ಬೇಕಾದರೂ ಸಾಧಿಸಬಹುದು" ಎಂದರು. ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸುವವರು ಕಡ್ಡಾಯವಾಗಿ ಅನುಸರಿಸಬೇಕಾದ ಅಂಶಗಳನ್ನು ತಿಳಿಸಿದರು. "ಮೊದಲು ನಾವು ತಯಾರಾಗಬೇಕಾದ ಪರೀಕ್ಷೆಯನ್ನು  ಗುರುತು ಮಾಡಿಕೊಳ್ಳಬೇಕು, ನಂತರ ಪಠ್ಯಕ್ರಮವನ್ನು ಅಧ್ಯಯನ ಮಾಡಬೇಕು.ಅನಂತರದಲ್ಲಿ ಅಧ್ಯಯನ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಳ್ಳುವುದು, ಹಳೆಯ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸುವುದು, ಮಾದರಿ ಪ್ರಶ್ನೆ ಪತ್ರಿಕೆಗಳನ್ನು ತಯಾರು ಮಾಡಿಕೊಳ್ಳುವುದು, ಓದಿದ್ದನ್ನು ಪುನರ್ ಅವಲೋಕನ ಮಾಡುವುದು ಹಾಗೂ ಸ್ವಯಂ ಮೌಲ್ಯಮಾಪನ ಅತ್ಯಗತ್ಯ ಎಂದರು. ಓದಿದ್ದನ್ನು ಕ್ರಮಬದ್ಧಗೊಳಿಸಲು A4 ಶೀಟ್ ಗಳಲ್ಲಿ ಕೀ ನೋಟ್ಸ್ ಮಾಡುವ ಮೂಲಕ ಒಂದು ಫೈಲ್ ತಯಾರು ಮಾಡಿಕೊಳ್ಳುವುದು ಅತ್ಯಗತ್ಯ ಎಂದರಲ್ಲದೇ ಇನ್ನೂ ಅನೇಕ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್

ABVP ಹುಳಿಯಾರು ವತಿಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಉಪತಹಸಿಲ್ದಾರ್ ಮುಖಾಂತರ ಮನವಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹುಳಿಯಾರು ವತಿಯಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯು ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಮತ್ತು ಸೋರಿಕೆ ಮಾಡಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಉಪತಹಶೀಲ್ದಾರ್ ಹುಳಿಯಾರು ಇವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಹಾಗೂ ಉಪನಿರ್ದೇಶಕರು ತುಮಕೂರು ಇವರಿಗೆ ಮನವಿ ಸಲ್ಲಿಸಲಾಯಿತು. ಪ್ರಥಮ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧಿಸಿದಂತೆ ಬಹುತೇಕ ಎಲ್ಲಾ ಪರೀಕ್ಷೆಗಳನ್ನು ನಿರ್ಲಕ್ಷಯುತವಾಗಿ ಮಾಡುತ್ತಿರುವುದು ಸರ್ಕಾರ ಮತ್ತು ಶಿಕ್ಷಣ ಸಂಸ್ಥೆಗಳ ಬೇಜವಾಬ್ದಾರಿಯನ್ನು ತೋರಿಸುತ್ತಿದೆ. ಆದ್ದರಿಂದಾಗಿ ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟ ಕಳೆದುಕೊಳ್ಳುತ್ತಿದ್ದಾರೆ. ಇದರಿಂದಾಗಿ ವರ್ಷ ಪೂರ್ತಿ ಕಷ್ಟಪಟ್ಟು ಓದುವಂತಹ ವಿದ್ಯಾರ್ಥಿಗಳಲ್ಲಿ ದುಃಖ ಮತ್ತು ಭಯದ ವಾತಾವರಣ ಮನೆ ಮಾಡಿದೆ.ಹೀಗಾಗಿ ಮುಂದೆ ನಡೆಯುವ ಎಲ್ಲಾ ಪ್ರಶ್ನೆ ಪತ್ರಿಕೆಗಳನ್ನು ಬದಲಾವಣೆ ಮಾಡಿ ಮುಂದೆ ನಡೆಯುವ ಎಲ್ಲಾ ಪರೀಕ್ಷೆಯನ್ನು ಯಾವೊಂದೂ ವಿದ್ಯಾರ್ಥಿಗೂ ಅನ್ಯಾಯವಾಗದಂತೆ, ಈ ರೀತಿಯ ಕಾನೂನುಬಾಹೀರ ಚಟುವಟಿಕೆಯಲ್ಲಿ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡ ಎಲ್ಲಾ ಅಧಿಕಾರಿಗಳ ಮೇಲೆ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕೆಂದು  ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಸಂಚಾಲಕ ಎಚ್.ಆರ್ ಗುರುಪ್ರಸಾದ್, ಚಿಕ್ಕನಾಯಕನಹಳ್ಳಿ ಮಾಧ್ಯಮ ಪ್ರಮುಖ್ ದೀಪಕ್.ಕೆ‌, ಸಿದ್ದ