ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಏಪ್ರಿಲ್, 2023 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಕಂಕಾಳೇಶ್ವರಿ-ತುಳಜಾಭವಾನಿ ಅಮ್ಮನವರ ದೇವಾಲಯದ 6ನೇ ವರ್ಷದ ವಾರ್ಷಿಕೋತ್ಸವ

ಹುಳಿಯಾರು :ಪಟ್ಟಣದ ಕೋಡಿಪಾಳ್ಯದ ಧ್ಯಾನಗರಿಯಲ್ಲಿರುವ ಶ್ರೀ ಮಾತಾ ಚಾರಿಟಬಲ್ ಟ್ರಸ್ಟ್ ನ ಕಂಕಳೇಶ್ವರಿ ತುಳಜಾಭವಾನಿ ಹಾಗೂ ಮಾರಿಕಾಂಬ ಅಮ್ಮನವರ ದೇವಾಲಯದ 6ನೇ ವರ್ಷದ ವಾರ್ಷಿಕ ಮಹೋತ್ಸವ ಇದೇ ಏ.29 ರ ಶನಿವಾರ ಹಾಗೂ 30ರ ಭಾನುವಾರ ಹಮ್ಮಿಕೊಳ್ಳಲಾಗಿದೆ. ಈ ನಿಮಿತ್ತ ಧ್ಯಾನ ನಗರಿಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಸಮಾರಂಭ ಹಾಗೂ ಸಂಸ್ಕೃತಿಕ ಕಾರ್ಯಕ್ರಮದ ಬಗ್ಗೆ ವಿವರ ನೀಡಿದ ಶ್ರೀಮಾತಾ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಗಂಗಾಧರ್ ಮಾತನಾಡಿ ಶನಿವಾರ ಸಂಜೆ 5:00 ಗಂಟೆಗೆ ನಾಂದಿ,ಗಣಪತಿ- ನವಗ್ರಹ-ಅನಂತಪದ್ಮನಾಭ ದೇವರ ಕಲಶ ಸ್ಥಾಪನೆ ಹಾಗೂ ಹೋಮ, ಪೂರ್ಣಾಹುತಿ ನಡೆಯಲಿದೆ. 30ರ ಭಾನುವಾರ ಬೆಳಿಗ್ಗೆ 7:30ಕ್ಕೆ ಪ್ರಧಾನ ಕಲಾ ತತ್ವ ಹೋಮ, ಪ್ರಧಾನ ಪೂರ್ಣಾಹುತಿ, ಮಹಾಭಿಷೇಕ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಮಾಡಲಾಗುವುದು. ಅದೇ ದಿನ ಭಾನುವಾರ ಸಂಜೆ 6:30ಕ್ಕೆ ಶ್ರೀಮತಿ ಶುಭ ಧನಂಜಯ ಅವರ ತಂಡದಿಂದ "ಭವಾನಿ ದಯಾ ನೀ" ಸಮೂಹ ದೇವಿ ಪ್ರಾರ್ಥನಾ ನೃತ್ಯರೂಪಕ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರಂಗಕರ್ಮಿ ಶ್ರೀನಿವಾಸ್ ಜಿ.ಕಪ್ಪಣ್ಣ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದರು. ಈ ಮುಂಚೆ ಆಯೋಜಿಸಲಾಗಿದ್ದ ಪ್ರಸಿದ್ಧ ಗಾಯಕಿ ಮಂಗಳಿಬಾಯಿ ಅವರ ಕಾರ್ಯಕ್ರಮವನ್ನು ಚುನಾವಣಾ ಸಮಯದ ಹಿನ್ನೆಲೆಯಲ್ಲಿ ಬದಲಾವಣೆ ಮಾಡಲಾಗಿದ್ದು ಮುಂದಿನ ನವರಾತ್ರಿ ಸಮಯದಲ್ಲಿ ಆಯೋಜಿಸಲಾಗುವುದು ಎಂದರ

*ಹುಳಿಯಾರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 95.39 ಶೇಕಡವಾರು ಫಲಿತಾಂಶ*

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ, ಹುಳಿಯಾರು ಕೆಂಕೆರೆ ಪದವಿ ಪೂರ್ವ ಕಾಲೇಜಿನ ಮೂರು ವಿಭಾಗಗಳ ಒಟ್ಟು 282 ವಿದ್ಯಾರ್ಥಿಗಳ ಪೈಕಿ 269 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡವಾರು ಫಲಿತಾಂಶ 95.39 ಲಭ್ಯವಾಗಿದೆ. ವಿಜ್ಞಾನ ವಿಭಾಗದ 83 ವಿದ್ಯಾರ್ಥಿಗಳ ಪೈಕಿ 81 ಮಂದಿ ಉತ್ತೀರ್ಣರಾಗಿದ್ದು, 22 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 57 ವಿದ್ಯಾರ್ಥಿಗಳ ಪ್ರಥಮ ದರ್ಜೆಯಲ್ಲಿ ಹಾಗೂ 2 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಹೆಗ್ಗೆರೆಯ ವಿದ್ಯಾರ್ಥಿನಿ ಲಕ್ಷ್ಮಿ 559 ಅಂಕಗಳಿಸುವ ಮೂಲಕ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ವಾಣಿಜ್ಯ ವಿಭಾಗದ 90 ವಿದ್ಯಾರ್ಥಿಗಳ ಪೈಕಿ 88 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು,10 ಮಂದಿ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 54 ವಿದ್ಯಾರ್ಥಿಗಳು ಪ್ರಥಮ ದರ್ಜೆ, 19 ವಿದ್ಯಾರ್ಥಿಗಳು ದ್ವಿತೀಯ ದರ್ಜೆ, 5 ಮಂದಿ ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಗಣೇಶ್ ಕೆ.ಆರ್. 557 ಅಂಕಗಳಿಸುವ ಮೂಲಕ ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕಲಾವಿಭಾಗದ 109 ವಿದ್ಯಾರ್ಥಿಗಳ ಪೈಕಿ 100 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 17 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್,62 ವಿದ್ಯಾರ್ಥಿಗಳು ಪ್ರಥಮ ದರ್ಜೆ, 13 ವಿದ್ಯಾರ್ಥಿಗಳು ದ್ವಿತೀಯ ದರ್ಜೆ, 8 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರ

ಹುಳಿಯಾರಿನ ವಿದ್ಯಾವಾರಿಧಿ ಇಂಡಿಪೆಂಡೆಂಟ್ ಪದವಿಪೂರ್ವ ಕಾಲೇಜಿಗೆ ಶೇಕಡ 100 ಫಲಿತಾಂಶ

ಹುಳಿಯಾರಿನ ವಿದ್ಯಾವಾರಿಧಿ ಇಂಡಿಪೆಂಡೆಂಟ್ ಪದವಿ ಪೂರ್ವ ಕಾಲೇಜು  2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಶೇ 100% ಫಲಿತಾಂಶ ಪಡೆದಿದ್ದು, ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರಿ ಗಾನವಿ ಹಾಗೂ ಕುಮಾರಿ ಸೃಷ್ಟಿ ಸಮನಾಗಿ 600 ಕ್ಕೆ 574 ಅಂಕಗಳನ್ನು ಪಡೆದು ಕಾಲೇಜಿಗೆ ಹಾಗೂ ತಾಲೂಕಿಗೆ ಪ್ರಥಮ ಸ್ಥಾನದಲ್ಲಿ ತೆರ್ಗಡೆ ಹೊಂದಿರುತ್ತಾರೆ . ಕಾಲೇಜಿನಲ್ಲಿ  49 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಪಡೆದಿದ್ದು, 23 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ . ಸದರಿ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಕೆ.ಎಸ್. ಕಿರಣ್ ಕುಮಾರ್‌ರವರು ಹಾಗೂ ಕಾರ್ಯದರ್ಶಿಗಳಾದ ಶ್ರೀಮತಿ ಬಿ.ಕವಿತಾ ಕಿರಣ್ ಕುಮಾರ್‌ರವರು,ಪ್ರಾಂಶುಪಾಲರು, ಉಪನ್ಯಾಸಕ ಮಿತ್ರರೂ ಶುಭ ಹಾರೈಸಿದ್ದಾರೆ.

ಹುಳಿಯಾರು: ವಿಶೇಷ ಚೇತನರಿಂದ ಮತದಾನ ಜಾಗೃತಿ ಅಭಿಯಾನ

ಹುಳಿಯಾರು : ಜಿಲ್ಲಾ ಸ್ವೀಪ್ ಸಮಿತಿ, ವಿಕಲಚೇತನರ ಕಲ್ಯಾಣ ಇಲಾಖೆ ಹಾಗೂ ಹುಳಿಯಾರು ಪಟ್ಟಣ ಪಂಚಾಯಿತಿ ಸಹಯೋಗದಲ್ಲಿ ಸುಮಾರು 30ಕ್ಕೂ ಹೆಚ್ಚು ವಿಶೇಷ ಚೇತನರಿಂದ ತ್ರಿಚಕ್ರ ವಾಹನಗಳಲ್ಲಿ ಪಟ್ಟಣದ  ವಾರ್ಡ್ಗಳಲ್ಲಿ ಹಾಗೂ ಪ್ರಮುಖ ರಸ್ತೆಗಳಲ್ಲಿ ಜಾಥ ನಡೆಸುವುದರ ಮುಖಾಂತರ ಮತದಾನ ಜಾಗೃತಿ ಮೂಡಿಸಲಾಯಿತು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸ್ಥಳದಿಂದ ಆರಂಭವಾದ ಅಭಿಯಾನಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಭೂತಪ್ಪ ಚಾಲನೆ ನೀಡಿ ಮಾತನಾಡಿದರು.ಮತದಾನದ ಪ್ರಮಾಣವನ್ನು ಉತ್ತೇಜಿಸುವ ಹಾಗೂ ಸಮಾಜದ ವಿವಿಧ ವರ್ಗಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಸಲುವಾಗಿ ಜಾಗೃತಿ ಅಭಿಯಾನ ಹಮ್ಮಿಕೊಂಡಿರುವುದಾಗಿ ತಿಳಿಸಿದರು.ಪ್ರತಿಯೊಬ್ಬ ಅರ್ಹ ಮತದಾರರು ಮತ ಚಲಾವಣೆ ಮಾಡುವ ಮೂಲಕ ತಮ್ಮ ಸಂವಿಧಾನಬದ್ಧ ಹಕ್ಕು ಚಲಾಯಿಸಬೇಕು ಎಂದು ತಿಳಿಸಿದರು. ಮತದಾನದ ಮಹತ್ವ ಕುರಿತು ಘೋಷಣೆ ಕೂಗುತ್ತಾ ಸಾಗಿದ ಮೆರವಣಿಗೆ ರಾಮ್ ಗೋಪಾಲ್ ಸರ್ಕಲ್, ಬಿಹಚ್ ರಸ್ತೆ, ರಾಜಕುಮಾರ್ ರಸ್ತೆ ,ಕನಕದಾಸ ಸರ್ಕಲ್, ಬಸ್ ಸ್ಟ್ಯಾಂಡ್ ,ವಿವೇಕಾನಂದ ರಸ್ತೆ ,ಪೇಟೆಬೀದಿ ಮೂಲಕ ಸಾಗಿ ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಮುಕ್ತಾಯಗೊಂಡಿತು. ಈ ವೇಳೆ ಪಟ್ಟಣ ಪಂಚಾಯಿತಿ ಇಂಜಿನಿಯರ್ ಮಂಜುನಾಥ್, ಬೂತ್ ಮಟ್ಟದ ಅಧಿಕಾರಿಗಳಾದ ಆನಂದ್, ಪೂರ್ಣಮ್ಮ, ರಾಜಣ್ಣ,ಸರಸ್ವತಮ್ಮ, ಮಂಜುಳಾ, ರಾಘವೇಂದ್ರ ಸೇರಿದಂತೆ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಜಾಥಾದಲ್ಲಿ ಪಾಲ್ಗೊ

ಸುಜ್ಞಾನನಿಧಿ ವಿದ್ಯಾರ್ಥಿವೇತನ ಮಂಜೂರಾತಿ ಪತ್ರ ವಿತರಣೆ

ಚಿಕ್ಕನಾಯಕನಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಯೋಜಿತ ಸ್ವಸಹಾಯ ಸಂಘಗಳ ಸದಸ್ಯರ ಮಕ್ಕಳಿಗೆ ಯೋಜನೆಯಿಂದ  ಮಂಜೂರುಗೊಂಡ  * ಸುಜ್ಞಾನನಿಧಿ ವಿದ್ಯಾರ್ಥಿ ವೇತನ* ಮಂಜೂರಾತಿ ಪತ್ರವನ್ನು ವಿತರಣೆ ಮಾಡಲಾಯಿತು.  ಚಿಕ್ಕನಾಯಕನಹಳ್ಳಿ ಪಟ್ಟಣದ ಯೋಜನಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 52 ಮಂದಿ ವಿದ್ಯಾರ್ಥಿಗಳಿಗೆ ಮಂಜೂರಾತಿ ಪತ್ರವನ್ನು ಜಿಲ್ಲಾ ನಿರ್ದೇಶಕರಾದ ಶ್ರೀ ದಿನೇಶ್ ಡಿ.ವಿತರಣೆ ಮಾಡಿದರು.  ನಂತರ ಮಾತನಾಡಿದ ಅವರು "ಯೋಜನೆಯು ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದ್ದು, ನಮ್ಮ ಸಂಘಗಳ ಸದಸ್ಯರ ಮಕ್ಕಳು ಶಿಕ್ಷಣ ವಂಚಿತರಾಗಬಾರದು ಎಂಬ ಉದ್ದೇಶದಿಂದ ಶ್ರೀ  ಡಾ||ವೀರೇಂದ್ರ  ಹೆಗ್ಗಡೆಯವರು ಈ ಕಾರ್ಯಕ್ರಮ ಮಾಡಿದ್ದು, ನಮ್ಮ ಸಂಘಗಳ ಸದಸ್ಯರು ಇದರ ಸದುಪಯೋಗ ಪಡಿಸಿಕೊಳ್ಳಬೇಕು." ಎಂದು ಹೇಳಿದರು.  ಜಿಲ್ಲಾ ಜನ ಜಾಗೃತಿವೇದಿಕೆಯ ಸದಸ್ಯರಾದ ಶ್ರೀ ಪ್ರಕಾಶ್ ರವರು ಶುಭ ಹಾರೈಸಿದರು.  ಯೋಜನೆಯ ತಾಲೂಕು ಯೋಜನಾಧಿಕಾರಿ ಪ್ರೇಮಾನಂದ ಯಲ್. ಬಿ . ಯವರು ಸ್ವಾಗತ ಮಾಡಿದರು. ಕೃಷಿ ಮೇಲ್ವಿಚಾರಕರಾದ ಯೋಗೀಶ್ ರವರು ಕಾರ್ಯಕ್ರಮ ನಿರೂಪಣೆ ಮಾಡಿದರು.ಹಣಕಾಸು ಪ್ರಬಂಧಕರಾದ ತೀರ್ಥ ಪ್ರಸಾದ್, ಆಡಳಿತ ಪ್ರಬಂಧಕರಾದ ಪುನೀತ್ ರವರು ಸಹಕರಿಸಿದರು. ವಿದ್ಯಾರ್ಥಿಗಳು,  ಹೆತ್ತವರು,ಪೋಷಕರು ಉಪಸ್ಥಿತರಿದ್ದರು.