ಚಿಕ್ಕನಾಯಕನಹಳ್ಳಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಯೋಜಿತ ಸ್ವಸಹಾಯ ಸಂಘಗಳ ಸದಸ್ಯರ ಮಕ್ಕಳಿಗೆ ಯೋಜನೆಯಿಂದ ಮಂಜೂರುಗೊಂಡ *ಸುಜ್ಞಾನನಿಧಿ ವಿದ್ಯಾರ್ಥಿ ವೇತನ* ಮಂಜೂರಾತಿ ಪತ್ರವನ್ನು ವಿತರಣೆ ಮಾಡಲಾಯಿತು.
ಚಿಕ್ಕನಾಯಕನಹಳ್ಳಿ ಪಟ್ಟಣದ ಯೋಜನಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 52 ಮಂದಿ ವಿದ್ಯಾರ್ಥಿಗಳಿಗೆ ಮಂಜೂರಾತಿ ಪತ್ರವನ್ನು ಜಿಲ್ಲಾ ನಿರ್ದೇಶಕರಾದ ಶ್ರೀ ದಿನೇಶ್ ಡಿ.ವಿತರಣೆ ಮಾಡಿದರು.
ನಂತರ ಮಾತನಾಡಿದ ಅವರು "ಯೋಜನೆಯು ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದ್ದು, ನಮ್ಮ ಸಂಘಗಳ ಸದಸ್ಯರ ಮಕ್ಕಳು ಶಿಕ್ಷಣ ವಂಚಿತರಾಗಬಾರದು ಎಂಬ ಉದ್ದೇಶದಿಂದ ಶ್ರೀ ಡಾ||ವೀರೇಂದ್ರ ಹೆಗ್ಗಡೆಯವರು ಈ ಕಾರ್ಯಕ್ರಮ ಮಾಡಿದ್ದು, ನಮ್ಮ ಸಂಘಗಳ ಸದಸ್ಯರು ಇದರ ಸದುಪಯೋಗ ಪಡಿಸಿಕೊಳ್ಳಬೇಕು." ಎಂದು ಹೇಳಿದರು.
ಜಿಲ್ಲಾ ಜನ ಜಾಗೃತಿವೇದಿಕೆಯ ಸದಸ್ಯರಾದ ಶ್ರೀ ಪ್ರಕಾಶ್ ರವರು ಶುಭ ಹಾರೈಸಿದರು.
ಯೋಜನೆಯ ತಾಲೂಕು ಯೋಜನಾಧಿಕಾರಿ ಪ್ರೇಮಾನಂದ ಯಲ್. ಬಿ. ಯವರು ಸ್ವಾಗತ ಮಾಡಿದರು.
ಕೃಷಿ ಮೇಲ್ವಿಚಾರಕರಾದ ಯೋಗೀಶ್ ರವರು ಕಾರ್ಯಕ್ರಮ ನಿರೂಪಣೆ ಮಾಡಿದರು.ಹಣಕಾಸು ಪ್ರಬಂಧಕರಾದ ತೀರ್ಥ ಪ್ರಸಾದ್, ಆಡಳಿತ ಪ್ರಬಂಧಕರಾದ ಪುನೀತ್ ರವರು ಸಹಕರಿಸಿದರು. ವಿದ್ಯಾರ್ಥಿಗಳು, ಹೆತ್ತವರು,ಪೋಷಕರು ಉಪಸ್ಥಿತರಿದ್ದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ