ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜೂನ್, 2023 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ವಿದ್ಯಾರ್ಥಿಗಳಿಗೆ ಸೂಕ್ತ ಬಸ್ಸಿನ ವ್ಯವಸ್ಥೆ ಕಲ್ಪಿಸಿಕೊಡುವ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹುಳಿಯಾರು ಘಟಕದಿಂದ ಮನವಿ

ಹುಳಿಯಾರು:ಸರ್ಕಾರದ ಯೋಜನೆಯಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು ಇದರಿಂದಾಗಿ ಗ್ರಾಮೀಣ ಪ್ರದೇಶದಿಂದ ಪಟ್ಟಣಕ್ಕೆ ಬರುವ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ಸಿನ ವ್ಯವಸ್ಥೆ ಕಲ್ಪಿಸಿಕೊಡುವ ಕುರಿತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹುಳಿಯಾರು ಘಟಕದಿಂದ ಮೂರು ಘಟಕದ ಕೆಎಸ್ಆರ್ಟಿಸಿ ಡಿಪೋ ಅಧಿಕಾರಿಗಳಿಗೆ ಹುಳಿಯರು ನಾಡಕಚೇರಿಯ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು . ಮನವಿಯಲ್ಲಿ ಏನಿದೆ ? : ಇದೇ ಜೂನ್ ತಿಂಗಳಿನಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗಿರುವುದರಿಂದ ಎಲ್ಲಾ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹಾಜರಾಗಬೇಕಾಗುತ್ತಿದೆ. ವಿದ್ಯಾರ್ಥಿಗಳು ಹಳ್ಳಿಯಿಂದ ಪಟ್ಟಣದ ಕಾಲೇಜುಗಳಿಗೆ ವಿದ್ಯಾಭ್ಯಾಸ ಮಾಡಲು ಬರುವತಂಹ ವಿದ್ಯಾರ್ಥಿಗಳಿಗೆ ಬಸ್ಸಿನ ಸಮಸ್ಯೆ ಉಂಟಾಗಿದೆ. ಏಕೆಂದರೇ ಕರ್ನಾಟಕದಲ್ಲಿ ನೂತನ ಸರ್ಕಾರವು "ಶಕ್ತಿ ಯೋಜನೆ" ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅಂತ ಘೋಷಿಸಿರುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವ ಕಾರಣದಿಂದಾಗಿ ಶಾಲಾ- ಕಾಲೇಜುಗಳಿಗೆ ಬರುವಂತಹ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ. ಸರಿಯಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಪರೀಕ್ಷೆಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಕಷ್ಟದ ಪರಿಸ್ಥಿತಿಯನ್ನುಂಟು ಮಾಡಿದೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಸಮರ್ಪಕವಾಗಿ ಎಷ್ಟು ಸಂಖ್ಯೆಯಲ್ಲಿ ಬಸ್ಸಿನ ಸಂಖ್ಯೆ ಬೇಕೂ ಅಷ್ಟು ಸಂಖ್ಯೆಯಲ್ಲಿ ಬಸ್ಸ

ಹುಳಿಯಾರು ಹೋಬಳಿಯ ತಮ್ಮಡಿಹಳ್ಳಿ ಬಿಳಿಕಲ್ಲುಗೊಲ್ಲರಹಟ್ಟಿ ಯಲ್ಲಿ ಬೀಳ್ಕೊಡುಗೆ ಸಮಾರಂಭ

ಹುಳಿಯಾರು: ಇಮಾಕ್ಯೂಲೇಟ್(ಮೇರಿ )ಮೇಡಂ ಅವರಿಗೆ ಬೀಳ್ಕೊಡುಗೆ ಹಾಗೂ *ಗಾಯಿತ್ರಿದೇವಿ* ಯವರಿಗೆ ವಯೋ ನಿವೃತ್ತಿ ಕಾರ್ಯಕ್ರಮವನ್ನು ಗ್ರಾಮದ ಯುವಕರು, ಗ್ರಾಮಸ್ಥರು, sdmc ಅಧ್ಯಕ್ಷರು,ಶಾಲಾ ಶಿಕ್ಷಕರು, crp ಯವರು  ಜೊತೆಗೂಡಿ ತಮ್ಮಡಿಹಳ್ಳಿ ಬಿಳಿಕಲ್ಲುಗೊಲ್ಲರಹಟ್ಟಿಯ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು,ಶಾಲಾ ಶಿಕ್ಷಕರನ್ನು ಗೌರವಾನ್ವಿತವಾಗಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ * ಹುಳಿಯಾರು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ತಮ್ಮಡಿಹಳ್ಳಿ ದೇವರಾಜ್ * ಮಾತನಾಡಿ ಗಾಯತ್ರೀ ದೇವಿಯವರು ಬಿಳಿಕಲ್ಲು ಗೊಲ್ಲರಹಟ್ಟಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಕ್ಕಳಿಗೆ ಅತಿ ಹೆಚ್ಚು ಪ್ರೀತಿ ವಿಶ್ವಾಸ ತೋರಿ, ಒಳ್ಳೆಯ ವಿದ್ಯಾಭ್ಯಾಸ ಕಲಿಸಿ ಸಾರ್ಥಕ ಸೇವೆ ಸಲ್ಲಿಸಿದ್ದಾರೆ. ಹಾಗೆಯೇ*ಮೇರಿ ಮೇಡಂ* ಇವರು ತಮ್ಮ ಸೃಜನಶೀಲತೆ ಪ್ರಾಮಾಣಿಕತೆ, ಸರಳತೆ ಹೊಂದಾಣಿಕೆ, ದೂರದೃಷ್ಟಿ, ಏಕಾಗ್ರತೆ, ವೃತ್ತಿಪರತೆ ವೃತ್ತಿಶ್ರೇಷ್ಟತೆಗಳಿಂದ ಎಲ್ಲರ ಮನಸೆಳೆದವರು. ಇವರ ಕಾರ್ಯವೈಖರಿ ಪಾದರಸದಷ್ಟೆ ಆಕರ್ಷಕ.ತಮ್ಮ ಸೇವಾವಧಿಯಲ್ಲಿ ಸುಮಾರು ಹತ್ತು ಹಲವು ಕೆಲಸ ಮಾಡಿ ಆಡಳಿತ ವರ್ಗದಿಂದ ಹಿಡಿದು ವಿದ್ಯಾರ್ಥಿ ಪೋಷಕ ವರ್ಗದವರೆಗೆ ಎಲ್ಲರ ಪ್ರೀತಿ, ವಿಶ್ವಾಸ, ಸ್ನೇಹ, ನಂಬಿಕೆಗಳಿಗೆ ಪಾತ್ರರಾಗಿರುವ ಹೆಗ್ಗಳಿಕೆ ಇವರದು ಎಂದರು. ಮುಖ್ಯ ಶಿಕ್ಷಕರಾದ N B ಬಸವರಾಜ್ ಮಾತನಾಡಿ ತಮ್ಮ ನಿಸ್ವಾರ್ಥ ಸೇವೆಯಿಂದ, ಶ್ರದ್ದೆ ಭಕ