ವಿಷಯಕ್ಕೆ ಹೋಗಿ

ಹುಳಿಯಾರು ಹೋಬಳಿಯ ತಮ್ಮಡಿಹಳ್ಳಿ ಬಿಳಿಕಲ್ಲುಗೊಲ್ಲರಹಟ್ಟಿ ಯಲ್ಲಿ ಬೀಳ್ಕೊಡುಗೆ ಸಮಾರಂಭ

ಹುಳಿಯಾರು: ಇಮಾಕ್ಯೂಲೇಟ್(ಮೇರಿ )ಮೇಡಂ ಅವರಿಗೆ ಬೀಳ್ಕೊಡುಗೆ ಹಾಗೂ *ಗಾಯಿತ್ರಿದೇವಿ* ಯವರಿಗೆ ವಯೋ ನಿವೃತ್ತಿ ಕಾರ್ಯಕ್ರಮವನ್ನು ಗ್ರಾಮದ ಯುವಕರು, ಗ್ರಾಮಸ್ಥರು, sdmc ಅಧ್ಯಕ್ಷರು,ಶಾಲಾ ಶಿಕ್ಷಕರು, crp ಯವರು  ಜೊತೆಗೂಡಿ ತಮ್ಮಡಿಹಳ್ಳಿ ಬಿಳಿಕಲ್ಲುಗೊಲ್ಲರಹಟ್ಟಿಯ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು,ಶಾಲಾ ಶಿಕ್ಷಕರನ್ನು ಗೌರವಾನ್ವಿತವಾಗಿ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ *ಹುಳಿಯಾರು ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ತಮ್ಮಡಿಹಳ್ಳಿ ದೇವರಾಜ್* ಮಾತನಾಡಿ ಗಾಯತ್ರೀ ದೇವಿಯವರು ಬಿಳಿಕಲ್ಲು ಗೊಲ್ಲರಹಟ್ಟಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಕ್ಕಳಿಗೆ ಅತಿ ಹೆಚ್ಚು ಪ್ರೀತಿ ವಿಶ್ವಾಸ ತೋರಿ, ಒಳ್ಳೆಯ ವಿದ್ಯಾಭ್ಯಾಸ ಕಲಿಸಿ ಸಾರ್ಥಕ ಸೇವೆ ಸಲ್ಲಿಸಿದ್ದಾರೆ.
ಹಾಗೆಯೇ*ಮೇರಿ ಮೇಡಂ* ಇವರು ತಮ್ಮ ಸೃಜನಶೀಲತೆ ಪ್ರಾಮಾಣಿಕತೆ, ಸರಳತೆ ಹೊಂದಾಣಿಕೆ, ದೂರದೃಷ್ಟಿ, ಏಕಾಗ್ರತೆ, ವೃತ್ತಿಪರತೆ ವೃತ್ತಿಶ್ರೇಷ್ಟತೆಗಳಿಂದ ಎಲ್ಲರ ಮನಸೆಳೆದವರು. ಇವರ ಕಾರ್ಯವೈಖರಿ ಪಾದರಸದಷ್ಟೆ ಆಕರ್ಷಕ.ತಮ್ಮ ಸೇವಾವಧಿಯಲ್ಲಿ ಸುಮಾರು ಹತ್ತು ಹಲವು ಕೆಲಸ ಮಾಡಿ ಆಡಳಿತ ವರ್ಗದಿಂದ ಹಿಡಿದು ವಿದ್ಯಾರ್ಥಿ ಪೋಷಕ ವರ್ಗದವರೆಗೆ ಎಲ್ಲರ ಪ್ರೀತಿ, ವಿಶ್ವಾಸ, ಸ್ನೇಹ, ನಂಬಿಕೆಗಳಿಗೆ ಪಾತ್ರರಾಗಿರುವ ಹೆಗ್ಗಳಿಕೆ ಇವರದು ಎಂದರು.
ಮುಖ್ಯ ಶಿಕ್ಷಕರಾದ N B ಬಸವರಾಜ್ ಮಾತನಾಡಿ ತಮ್ಮ ನಿಸ್ವಾರ್ಥ ಸೇವೆಯಿಂದ, ಶ್ರದ್ದೆ ಭಕ್ತಿಯಿಂದ ತನ್ನ ಬದುಕಿನ ಕರ್ತವ್ಯದ ಪಯಣವನ್ನು ಮಧುರವಾಗಿ ಕಳೆದ ಕೀರ್ತಿಗೆ ಇವರುಗಳು  ಭಾಜನರು ಎಂದರು. 

ಇವರ ಅಮೋಘವಾದ ಸೇವೆಯನ್ನು ಪರಿಗಣಿಸಿ  ಊರಿನ ಜನ, ಶಾಲೆಯ ಮುಖ್ಯ ಶಿಕ್ಷಕರು ಇವರನ್ನು ಶಾಲು ಹೊದಿಸಿ ಹಾರ ಹಾಕಿ ಫಲಪುಷ್ವ ಹಾಗೂ ಉಡುಗೊರೆಗಳನ್ನು ನೀಡಿ ಸನ್ಮಾನಿಸಿ ಗೌರವಿಸಿದರು. ಗ್ರಾಮಸ್ಥರು ಊರಿನ ಯುವಕರು sdmc ಅಧ್ಯಕ್ಷರು  ಸಮಾರಂಭಕ್ಕೆ ಸಾಕ್ಷಿಯಾದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.