ವಿಷಯಕ್ಕೆ ಹೋಗಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ವೀರೇಂದ್ರ ಹೆಗ್ಗಡೆಯವರ ವಿರುದ್ಧ ಅಪಪ್ರಚಾರದ ವಿಮೋಚನೆಗೆ ಹುಳಿಯಾರು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ.

 ಕ್ಷೇತ್ರ ಧರ್ಮಸ್ಥಳಕ್ಕೆ ಮಸಿ ಹಚ್ಚುವ ಕೆಲಸ ನಡೆಯುತ್ತಿರುವ ಬಗ್ಗೆ ಭಕ್ತರಿಂದ ಖಂಡನೆ
---------------------------------------
ಹುಳಿಯಾರು : ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ವೀರೇಂದ್ರ ಹೆಗ್ಗಡೆಯವರ ವಿರುದ್ಧ ನಡೆಸುತ್ತಿರುವ ಅಪಪ್ರಚಾರ ನಿಲ್ಲಿಸುವಂತೆ ಕೋರಿ ಹುಳಿಯಾರು ಭಾಗದ ಭಕ್ತಾದಿಗಳಿಂದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಗೆ ಅಭಿಷೇಕ ಸೇರಿದಂತೆ ವಿಶೇಷ ಪೂಜೆ ಜರುಗಿತು.

ಸಮಸ್ತ ಭಕ್ತಾದಿಗಳ ಪರವಾಗಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆಂಕೆರೆ ಸತೀಶ್, ಸಮಸ್ತ ಹಿಂದೂಗಳ ಆರಾಧ್ಯ ದೈವ ಮಂಜುನಾಥೇಶ್ವರ ನೆಲಸಿರುವ ಪುಣ್ಯಕ್ಷೇತ್ರವಾಗಿರುವ ಧರ್ಮಸ್ಥಳ ಹಾಗೂ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆಯವರ ಕುರಿತು ಇತ್ತೀಚೆಗೆ ಕೆಲವರು ಆಧಾರರಹಿತವಾಗಿ ಅಪಪ್ರಚಾರ ನಡೆಸುತ್ತಿದ್ದು, ಈ ಮೂಲಕ ಶ್ರೀಗಳ ವ್ಯಕ್ತಿತ್ವಕ್ಕೆ ಹಾಗೂ ಚಾರಿತ್ರಕ್ಕೆ ಕಳಂಕ ತರವ ಕೆಲಸ ಮಾಡುತ್ತಿದ್ದಾರೆ. ಸತತ ಅಪಪ್ರಚಾರ ಹಾಗೂ ವಿನಾಕಾರಣ ದೂಷಣೆಯಿಂದಾಗಿ ಶ್ರೀ ಕ್ಷೇತ್ರಕ್ಕೆ ಮಸಿ ಹಚ್ಚುವ ಕೆಲಸ ನಡೆಯುತ್ತಿದ್ದು ಇದು ಧರ್ಮಸ್ಥಳ ಶ್ರೀ ಕ್ಷೇತ್ರದ ಅಪಾರ ಭಕ್ತಾಧಿಗಳಿಗೆ ನೋವುಂಟು ಮಾಡಿದೆ. ಇದನ್ನು ತಾವು ಖಂಡಿಸುವುದಾಗಿ ತಿಳಿಸಿದರು.
             ಪೂಜ್ಯರು ಮಾಡಿರುವ ಸಮಾಜ ಸೇವಾ ಕೈಂಕರ್ಯ, ಹಾಗೂ ಸಾಧನೆ ಎಲ್ಲರ ಮನಸ್ಸಿನಲ್ಲೂ ಅಚ್ಚಳಿಯದೆ ಉಳಿದಿದ್ದು, ಪೂಜ್ಯರು ಸಮಸ್ತ ಕರ್ನಾಟಕದ ಹೆಮ್ಮೆಯಾಗಿದ್ದು ಪುರಾವೆ ಇಲ್ಲದೆ ಸಾಮಾಜಿಕ ಜಾಲತಾಣಗಳ ಮೂಲಕ ಪೂಜ್ಯ ಹೆಗಡೆಯವರ ವಿರುದ್ಧ ಅಪಪ್ರಚಾರ ನಡೆಸುತ್ತಿರುವುದು ತಕ್ಷಣ ನಿಲ್ಲಬೇಕು ಎಂದು ಕೆಂಕೆರೆ ಸತೀಶ್ ಆಗ್ರಹಿಸಿದರು.

                                          
ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸಜ್ಜನರಾದ ಹೆಗ್ಗಡೆಯವರ ವಿರುದ್ಧ ಕೆಲವು ದುರ್ಜನರು ಕಳಂಕ ತರುವ ಕೆಲಸ ನಡೆಸುತ್ತಿದ್ದು, ಇದರ ವಿಮೋಚನೆಗಾಗಿ ಹುಳಿಯಾರಿನ ಪುರಾಣ ಪ್ರಸಿದ್ಧ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪಟ್ಟಣದ ಭಕ್ತಾದಿಗಳಿಂದ ಅಭಿಷೇಕ ಪೂಜಾ ಕಾರ್ಯ ನಡೆಯುತ್ತಿದ್ದು, ಸ್ವಾಮಿಯ ಕೃಪಾ ಕಟಾಕ್ಷದಿಂದ ಪೂಜ್ಯರ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ದುರ್ಜನರು ಕ್ಷೀಣಿಸಲಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು-2 ಯೋಜನಾಧಿಕಾರಿ ಶ್ರೀ ರಾಮಚಂದ್ರ ಅವರು ನುಡಿದರು.
ಪಟ್ಟಣದ ರಾಮಗೋಪಾಲ್ ಸರ್ಕಲ್ ಬಳಿಯಿಂದ ಶ್ರೀ ಆಂಜನೇಯ ದೇವಸ್ಥಾನದವರೆಗೆ ಮೆರವಣಿಗೆಯಲ್ಲಿ ಬಂದ ಭಕ್ತಾಧಿಗಳು ಶ್ರೀಗಳ ಪರ ಘೋಷಣೆ ಕೂಗಿದರು
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಎಸ್ ಕಿರಣ್ ಕುಮಾರ್,ಧರ್ಮಸ್ಥಳ ಸಂಘದ ಜಿಲ್ಲಾ ನಿರ್ದೇಶಕ ದಿನೇಶ್, ಹುಳಿಯಾರು ಆಂಜನೇಯ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಬಡಗಿ ರಾಮಣ್ಣ, ಕಾರ್ಯದರ್ಶಿ ಧನಂಜಯ, ಪಟ್ಟಣ ಪಂಚಾಯಿತಿ ಸದಸ್ಯ ದಯಾನಂದ್, ಗೀತಾ ಅಶೋಕ್, ಸ್ಟುಡಿಯೋ ದುರ್ಗರಾಜು, ಯುವ ಮುಖಂಡ ಪ್ರದೀಪ್, ಒಕ್ಕೂಟದ ಅಧ್ಯಕ್ಷ ಸುವರ್ಣಮ್ಮ, ಕಿರಣ್ ಕುಮಾರ್, ವಲಯ ಮೇಲ್ವಿಚಾರಕಿ ಶ್ರೀಮತಿ ಚೈತ್ರ, ಚಿಕ್ಕಬಿದರೆ ಮೇಲ್ವಿಚಾರಕ ಗುರು, ಧರ್ಮಸ್ಥಳ ಸಂಘದ ಸಂದೀಪ್, ಪ್ರಶಾಂತ್, ಚಿದಾನಂದ್‌,ಯಾಸಿನ್,ಮಹಾಲಿಂಗಣ್ಣ,ಗಂಗಣ್ಣದೇವರಾಜ್ ವಸಂತಕುಮಾರ್, ಕುಮಾರಸ್ವಾಮಿ, ದೊಡ್ಡಬಿದರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಕವಿತಾ, ಚಿಕ್ಕಬಿದರೆ ಹಾಲಿನ ಡೈರಿ ಅಧ್ಯಕ್ಷ ಗೌರಮ್ಮ ಸೇರಿದಂತೆ ಅನೇಕ ಭಕ್ತಧಿಗಳು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.