ತುಮಕೂರು ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನಿಂದ ಮತ್ತಿಘಟ್ಟದ ಎಳ್ಳೇನಹಳ್ಳಿಯಲ್ಲಿ ವಿಕಸಿತ್ ಭಾರತ್ ಸಂಪರ್ಕ ಯಾತ್ರೆ ಅರಿವು ಕಾರ್ಯಾಗಾರ
ಹುಳಿಯಾರು : ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಎಂಬುದು ಸರ್ಕಾರದ ಯೋಜನೆಗಳನ್ನು ಬ್ಯಾಂಕುಗಳ ಮುಖಾಂತರ ಜನರಿಗೆ ತಲುಪಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದು ಸೇತುವೆಯಂತೆ ಕೆಲಸ ಮಾಡುತ್ತಿದೆ ಎಂದು ತುಮಕೂರಿನ ಲೀಡ್ ಬ್ಯಾಂಕ್ ಡಿಸ್ಟ್ರಿಕ್ಟ್ ಮ್ಯಾನೇಜರ್ ಪ್ರಕಾಶ್ ತಿಳಿಸಿದರು. ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತಿಘಟ್ಟ ಶಾಖೆ ಹಾಗೂ ಆರ್ಥಿಕ ಸಾಕ್ಷರತಾ ಕೇಂದ್ರ ಚಿಕ್ಕನಾಯಕನಹಳ್ಳಿ ಇವರ ಜಂಟಿ ಆಶ್ರಯದಲ್ಲಿ ಮತ್ತಿಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಳ್ಳೇನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ವಿಕಸಿತ್ ಭಾರತ್ ಸಂಪರ್ಕ ಅಭಿಯಾನ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು ವಿಕಸಿತ್ ಭಾರತ್ ಸಂಪರ್ಕ ಯಾತ್ರೆ ಅಂಗವಾಗಿ ಕೇಂದ್ರ ಸರ್ಕಾರವು ನಿರ್ದೇಶಕ ವಾಹನಗಳ ಮೂಲಕ ಸರ್ಕಾರದ ಅನೇಕ ಯೋಜನೆಗಳ ಪ್ರಯೋಜನಗಳನ್ನು ಜನರಿಗೆ, ಅದರಲ್ಲೂ ಗ್ರಾಮೀಣ ಭಾಗದವರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಜನವರಿ 26-1- 2024 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂಬ ಮಾಹಿತಿ ನೀಡಿದರು. ಮತ್ತಿಘಟ್ಟ ಕರ್ನಾಟಕ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕರಾದ G.S.ಶ್ರೀ ಹರ್ಷ ಮಾತನಾಡಿ ನಮ್ಮ ಬ್ಯಾಂಕು 25,000/-ಗಳವರೆಗೆ ಕಾಗದ ರಹಿತವಾಗಿ ವ್...