ವಿಷಯಕ್ಕೆ ಹೋಗಿ

ತಿಮ್ಮನಹಳ್ಳಿಯಲ್ಲಿ ಸಾಮೂಹಿಕ ಶ್ರೀ ಲಕ್ಷ್ಮಿ ಪೂಜಾ ಕಾರ್ಯಕ್ರಮ

"ಮಹಿಳೆಯರು ತಮ್ಮ ಸ್ವಾವಲಂಬಿ ಬದುಕು ನಡೆಸಲು ಉಳಿತಾಯ ಮನೋಭಾವನೆ ಮೂಡಿಸಿದ್ದೆ ಧರ್ಮಸ್ಥಳ ಸಂಸ್ಥೆ " ಎಂದು ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನದ ಜಗದ್ಗುರು ಡಾ. ಶಾಂತವೀರ ಮಹಾಸ್ವಾಮಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. 

                  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟಗಳು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ತಿಮ್ಮನಹಳ್ಳಿಯಲ್ಲಿ ನಡೆದ ಶ್ರೀಸಾಮೂಹಿಕ ಲಕ್ಷ್ಮೀ ಪೂಜಾ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿ ಮಾತನಾಡಿದರು. 

 ಸ್ವಾಮೀಜಿಯವರು ಮಾತನಾಡಿ " ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ  ನಡೆಯುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜನರಿಗೆ ನಿರಂತರವಾಗಿ ಆರ್ಥಿಕ ಜಾಗೃತಿ ಮಹಿಳಾ ಸಬಲೀಕರಣ ಸ್ವಉದ್ಯೋಗಕ್ಕಾಗಿ ಪ್ರೇರಣೆ ಮಾಡುವ ಮೂಲಕ ಜನರಿಗೆ ಶಕ್ತಿ ತುಂಬಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಇಂತಹ ಧಾರ್ಮಿಕ ಆಚರಣೆ ಮೂಲಕ ಜನರಲ್ಲಿ ಸಂಘಟನಾ ಮನೋಭಾವ ಮೂಡಿಸುವ ಅವರಲ್ಲಿ ಧರ್ಮ ಜಾಗೃತಿ  ಮೂಡಿಸುವ ಕಾರ್ಯಕ್ರಮ ಮಾಡುತ್ತಿದೆ. ಈ ಬಗ್ಗೆ ಜನರ ಸಹಕಾರ ಇಂತಹ ಯೋಜನೆಗಳಿಗೆ ಅತ್ಯಗತ್ಯವಾಗಿದೆ. " ಎಂದು ಅಭಿಮತ ವ್ಯಕ್ತಪಡಿಸಿದರು.

"ಕುಡಿತದಿಂದ ಎಷ್ಟೋ ಕುಟುಂಬಗಳು ಅವಸಾನದ ದಾರಿ ತುಳಿದಾಗ ಅವರನ್ನು ಮದ್ಯವರ್ಜನಾ ಶಿಬಿರ ಕ್ಕೆ ಸೇರಿಸಿ ಮುಖ್ಯ ವಾಹಿನಿಗೆ ಕರೆ ತರುವಂತಹ ಕೆಲಸ ಮಾಡಿದ್ದು ಇದೇ ಧರ್ಮಸ್ಥಳ ಸಂಸ್ಥೆ. ಅನೇಕರ ಬದುಕು ಹಸನಾಗಲು ಕಾರಣ ಸಂಸ್ಥೆ ನೀಡುವ ಮಾಹಿತಿ ಮಾರ್ಗದರ್ಶನ ಅದಕ್ಕೆ ಎಲ್ಲರೂ ಚಿರಋಣಿ ಆಗಿರಬೇಕು." ಎಂದು ಅವರು ಸಲಹೆ ನೀಡಿದರು. 

           ಯೋಜನೆಯ ತುಮಕೂರು ಜಿಲ್ಲಾ ನಿರ್ದೇಶಕ ದಿನೇಶ್ ಡಿ. ಯವರು ಯೋಜನೆ ನಡೆದು ಬಂದ ದಾರಿ ಹಾಗೂ ಈ ಧಾರ್ಮಿಕ ಆಚರಣೆಯ ಮಹತ್ವದ ಬಗ್ಗೆ ಮತ್ತು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. "ಸ್ವ ಸಹಾಯ ಸಂಘ ಕಾರ್ಯಕ್ರಮ, ಪ್ರಗತಿ ನಿಧಿ ಕಾರ್ಯಕ್ರಮ, ಪ್ರಗತಿ ರಕ್ಷಾ ಕಾರ್ಯಕ್ರಮ, ವಿಮಾ ಯೋಜನೆ ಕಾರ್ಯಕ್ರಮ, ಸುಜ್ಞಾನದ ಶಿಷ್ಯವೇತನ ಕಾರ್ಯಕ್ರಮ, ಮಧ್ಯವರ್ಜನ ಶಿಬಿರ, ರೈತ ಕ್ಷೇತ್ರ ಪಾಠಶಾಲೆ, ಜ್ಞಾನವಿಕಾಸ ಕಾರ್ಯಕ್ರಮ, ಹಿಂದು ರುದ್ರ ಭೂಮಿ ಅಭಿವೃದ್ಧಿ ಶುದ್ಧಗಂಗಾ ಕಾರ್ಯಕ್ರಮ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮ ಜನಮಂಗಲ ಕಾರ್ಯಕ್ರಮ, ಸಾಮಾನ್ಯ ಸೇವಾ ಕೇಂದ್ರ ಮೂಲಕ ಕೇಂದ್ರ ಮತ್ತು ರಾಜ್ಯಸರಕಾರದ ಅನೇಕ ಕಾರ್ಯಕ್ರಮಗಳನ್ನು ತಲುಪಿಸುವ ಕೆಲಸ ಮಾಡುತ್ತಿದೆ. ಈ ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಲು ಜನರ ಸಹಭಾಗಿತ್ವ ಅಗತ್ಯ "ಎಂದು ಹೇಳಿದರು. 

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಅಧ್ಯಕ್ಷರಾದ ಉಮೇಶ್ ಅವರು ವಹಿಸಿದ್ದರು. 

                ತಿಮ್ಮನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾರ್ವತಮ್ಮ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಮಂಜಮ್ಮ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀನಿವಾಸ್ ಸ್ಥಳೀಯ ಜನಪ್ರತಿನಿಧಿಗಳು ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪದಾಧಿಕಾರಿಗಳು ಉಪಸ್ಥಿತರಿದ್ದರು

               ತಾಲೂಕು ಯೋಜನಾಧಿಕಾರಿ ಪ್ರೇಮಾನಂದ ಯಲ್. ಬಿ. ಸರ್ವರನ್ನು ಸ್ವಾಗತ ಮಾಡಿದರು.ವಲಯ ಮೇಲ್ವಿಚಾರಕಿ ತಿಪ್ಪಿರಮ್ಮನವರು ತಮ್ಮ ಸಾಧನ ವರದಿಯನ್ನು ಓದಿದರು . ಕೃಷಿ ಮೇಲ್ವಿಚಾರಕ ಯೋಗೀಶ್ ರವರು ಕಾರ್ಯಕ್ರಮ ನಿರೂಪಿಸಿದರು.  ಸೇವಾಪ್ರತಿನಿಧಿ ಸಣ್ಣಲಿಂಗಯ್ಯ ಧನ್ಯವಾದಗೈದರು. ತಾಲೂಕು ನೋಡಲ್ ಅಧಿಕಾರಿ ಅನಿಲ್, ರೈತ ಉತ್ಪಾದಕ ಕಂಪನಿಯ ಜಯರಾಮ್, ಸೇವಾ ಪ್ರತಿನಿಧಿಗಳು, ಸಿಎಸ್ಸಿ ಸೇವಾದಾರರು ಸಹಕರಿಸಿದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...