ಚಿಕ್ಕನಾಯಕನಹಳ್ಳಿ ತಾಲ್ಲೂಕಿನಲ್ಲಿ ನಡೆಯಲಿರುವ 285 ನೇ ಸೇವಾಲಾಲ್ ಜಯಂತಿಯನ್ನು ಯಶಸ್ವಿಗೊಳಿಸಲು ಕರೆ ಸದ್ಗುರು ಸೇವಾಲಾಲ್ ಜಯಂತಿ ಆಚರಣೆಯ ಪೂರ್ವಸಿದ್ಧತೆಗಾಗಿ ಶ್ರೀ ಸೇವಾಲಾಲ್ ಮರಿಯಮ್ಮ ದೇವಿ ತಾಂಡಾಭಿವೃದ್ಧಿ ಟ್ರಸ್ಟ್ ವತಿಯಿಂದ ಭಾನುವಾರ ಶಿರಾ-ಹುಳಿಯಾರು ರಸ್ತೆಯಲ್ಲಿರುವ ಶ್ರೀ ಠೋಕ್ರಿಬನ್ಕಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ ಜರುಗಿತು. ಮುಖಂಡರಾದ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಘುನಾಥ್ ಮಾತನಾಡಿ ಜಯಂತಿ ರೂಪೂರೇಷೆಗಳನ್ನು ಸಿದ್ದಪಡಿಸಿ, ಎಲ್ಲರೂ ತಪ್ಪದೇ ಭಾಗವಹಿಸಿ ಸಮಾರಂಭ ಯಶಸ್ವಿಗೊಳಿಸುವಂತೆ ಕರೆ ನೀಡಿದರು. ಸಭೆಯಲ್ಲಿ ಸಮಗ್ರ ತಾಲ್ಲೂಕಿನ ಸಮಗ್ರ ಗೋರ್ ಬಂಧುಗಳು ಭಾಗವಹಿಸಿ ಚರ್ಚೆ ನಡೆಸಿದರು. ಇದೇ ಸಂದರ್ಭದಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕಿನ ಶ್ರೀ ಸಂತ ಸೇವಾಲಾಲ್ ಜಯಂತ್ಯೋತ್ಸವ ಸಮಿತಿಯನ್ನು ರಚನೆ ಮಾಡಲಾಯಿತು ಹಾಗೂ ಆಯಾ ತಾಂಡಾದ ನಾಯಕ್, ಡಾವೋ ಕಾರಬಾರಿ ಸೇರಿ ತಾಲ್ಲೂಕಿನ ಪ್ರತಿ ತಾಂಡಾಕ್ಕೆ ನಾಲ್ಕು ಜನ ಮುಖಂಡರನ್ನು ಆಯ್ಕೆ ಮಾಡಲಾಯಿತು. ಈ ಬಾರಿ ಎಲ್ಲರೂ ಕೈಜೋಡಿಸುವ ಮೂಲ...
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070