ವಿಷಯಕ್ಕೆ ಹೋಗಿ

ದೊಡ್ಡಬಿದರೆಯಲ್ಲಿ ಫೆ.29ರಿಂದ ಶ್ರೀ ಪಾತಲಿಂಗೇಶ್ವರ ಸ್ವಾಮಿ,ಗ್ರಾಮದೇವತೆ ಕರಿಯಮ್ಮ ದೇವಿಯವರ ದೊಡ್ಡ ಜಾತ್ರಾ ಮಹೋತ್ಸವ

ಹುಳಿಯಾರು ಹೋಬಳಿ ದೊಡ್ಡಬಿದರೆಯಲ್ಲಿ ಶ್ರೀ ಪಾತಲಿಂಗೇಶ್ವರಸ್ವಾಮಿ, ಲಕ್ಕಮ್ಮ ದೇವಿ ಹಾಗೂ ಗ್ರಾಮದೇವತೆ  ಶ್ರೀ ಕರಿಯಮ್ಮ ದೇವಿ, ಬೇವಿನಳಮ್ಮ ದೇವಿಯವರ ದೊಡ್ಡ ಜಾತ್ರಾ ಮಹೋತ್ಸವ ದಿನಾಂಕ: 29-02-2024 ಗುರುವಾರದಿಂದ 06-03-2024 ಬುಧವಾರದವರೆಗೆ ಒಟ್ಟು ಏಳು ದಿನಗಳ ಕಾಲ ನಡೆಯಲಿದೆ.

29-02-2024 ಗುರುವಾರ : ಸಂಜೆ 8 ಗಂಟೆಗೆ ಮಧುವಣಗಿತ್ತಿ ಕಾರ್ಯಕ್ರಮ, ಮಡಿಲಕ್ಕಿಸೇವೆ


01-03-2024 ಶುಕ್ರವಾರ : ಬಾನ, ರಾತ್ರಿ 8 ಗಂಟೆಗೆ ಮಧುವಣಗಿತ್ತಿ, ಮಡಿಲಕ್ಕಿಸೇವೆ, ಚಿಕ್ಕಬಿದರೆ ಕರಿಯಮ್ಮನವರು ಮತ್ತು ಕೋಡಿಹಳ್ಳಿ ಕೊಲ್ಲಾಪುರದಮ್ಮನವರ ಆಗಮನ.

02-03-2024 ಶನಿವಾರ : ಬೆಳಗ್ಗೆ 6-30ಕ್ಕೆ ಆರತಿ ಬಾನ, ಗಂಗಾಪೂಜೆ, ನಡೆಮುಡಿಯೊಂದಿಗೆ ಅಮ್ಮನವರು ಮೂಲಸ್ಥಾನಕ್ಕೆ ಆಗಮಿಸುವರು.

ಬೆಳಿಗ್ಗೆ 9-30ಕ್ಕೆ ಅಗ್ನಿಕುಂಡ 

ಮಧ್ಯಾಹ್ನ 12 ಗಂಟೆಗೆ ಪ್ರಸಾದ ವಿನಿಯೋಗ

ಸಂಜೆ 6-30ಕ್ಕೆ ಸಿಡಿಮಹೋತ್ಸವ

ರಾತ್ರಿ 8 ಗಂಟೆಗೆ ಅನ್ನಸಂತರ್ಪಣೆ

ರಾತ್ರಿ 10 ಗಂಟೆಗೆ ಹೆಸರಾಂತ ಲಹರಿ ಮೆಲೊಡೀಸ್ ರವರಿಂದ ಆರ್ಕೇಸ್ಟ್ರಾ ಕಾರ್ಯಕ್ರಮ


03-03-2024 ಭಾನುವಾರ

ಬೆಳಗ್ಗೆ 8 ಗಂಟೆಗೆ ರುದ್ರಾಭಿಷೇಕ

10 ಗಂಟೆಗೆ ಧ್ವಜಾರೋಹಣ

11 ಗಂಟೆಗೆ ದೋಣಿಸೇವೆ

ಮಧ್ಯಾಹ್ನ 2 ಗಂಟೆಗೆ ಲಕ್ಕಮ್ಮನವರ ಮಜ್ಜನಬಾವಿ ಹತ್ತಿರ ಶ್ರೀ ಸ್ವಾಮಿಯವರು ದಯಮಾಡಿಸಿ ಶ್ರೀ ಲಕ್ಕಮ್ಮನವರ ಕಳಸಸ್ಥಾಪನೆ, ಗಂಗಾಪೂಜೆ, ಪ್ರಸಾದ ವಿನಿಯೋಗ ನಂತರ ನಡೆಮುಡಿಯೊಂದಿಗೆ ಶ್ರೀ ಸ್ವಾಮಿಯವರು ಲಕ್ಕಮ್ಮನವರೊಂದಿಗೆ ಮೂಲಸ್ಥಾನಕ್ಕೆ ದಯಮಾಡಿಸುವುದು. ಸಂಜೆ ಸ್ವಾಮಿಯವರಿಗೂ ಲಕ್ಕಮ್ಮನವರಿಗೂ ಕಂಕಣ ಧಾರಣೆ, ನಂತರ 9 ಗಂಟೆಗೆ ಮಡಿಲಕ್ಕಿ ಸೇವೆ.ರಾತ್ರಿ 11 ಗಂಟೆಗೆ ಶ್ರೀ ಸ್ವಾಮಿಯವರು ಮತ್ತು ಅಮ್ಮನವರು ಮೂಲಸ್ಥಾನಕ್ಕೆ ದಯಮಾಡಿಸಿ ಪಂಚಾಭಿಷೇಕ ಮಹಾಮಂಗಳಾರತಿ ನಡೆಯುವುದು.

ಸಂಜೆ 7-30ಕ್ಕೆ ಅನ್ನಸಂತರ್ಪಣೆ

04-03-2024 ಸೋಮವಾರ : ಸಂಜೆ 7-30ಕ್ಕೆ ದೊಡ್ಡಪರುವು

05-03-2024 ಮಂಗಳವಾರ

ಬೆಳಿಗ್ಗೆ 6 ಗಂಟೆಗೆ ರುದ್ರಾಭಿಷೇಕ ,

9 ರಿಂದ 12ರೊಳಗೆ ಕನ್ಯಾ ಲಗ್ನದಲ್ಲಿ ಪಟ್ಟಧಾರಣೆ

ಮಧ್ಯಾಹ್ನ 4-30ಕ್ಕೆ ಗಾವು, 

ಸಂಜೆ 7-30ಕ್ಕೆ ಅನ್ನಸಂತರ್ಪಣೆ ನಂತರ ಶ್ರೀ ಅಮ್ಮನವರು ಮತ್ತು ಶ್ರೀ ಸ್ವಾಮಿಯವರು ಉತ್ಸವದೊಂದಿಗೆ ಊರೊಳಗಿನ ದೇವಸ್ಥಾನಕ್ಕೆ ದಯಮಾಡಿಸುವುದು. 

ರಾತ್ರಿ 10 ಗಂಟೆಗೆ ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ದೊಡ್ಡಬಿದರೆ ಕಲಾತಂಡದಿಂದ ವೀರಗಾಸೆ.

ವೀರಾಗಾಸೆಯೊಂದಿಗೆ ದೇವಸ್ಥಾನದಿಂದ ತೇರಿನ ಬೀದಿಗೆ ದಯಮಾಡಿಸುವುದು.


ದಿನಾಂಕ: 05-03-2023 ಮಂಗಳವಾರ :

ಮ.12 ಗಂಟೆಗೆ ಧಾರ್ಮಿಕ ಸಭೆ 

ದಿವ್ಯ ಸಾನಿಧ್ಯ: ಶ್ರೀ ಶ್ರೀ ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಚಿನ್ಮೂಲಾದ್ರಿ ಶಿಲಾಪುರಿ ಮಹಾಸಂಸ್ಥಾನ ಭಗೀರಥ ಪೀಠ, ಹೊಸದುರ್ಗ ತಾ||


06-03-2024 ಬುಧವಾರ:

ಬೆಳಿಗ್ಗೆ 6 ಗಂಟೆಗೆ ದೊಡ್ಡರಥೋತ್ಸವ 

8 ಗಂಟೆಗೆ ಓಕಳಿಸೇವೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ, 

10 ಗಂಟೆಗೆ ಮಣೇವು ಕಾರ್ಯಕ್ರಮ ನಂತರ ಶ್ರೀ ಸ್ವಾಮಿಯವರು ಮೂಲಸ್ಥಾನಕ್ಕೆ ಬಿಜಯಂಗೈಯುವುದು.

ಈ ಮೇಲ್ಕಂಡ ಕಾರ್ಯಕ್ರಮಗಳಿಗೆ ಸರ್ವಭಕ್ತಾದಿಗಳು ಆಗಮಿಸಿ ಶ್ರೀ ಸ್ವಾಮಿಯವರ ಮತ್ತು ಶ್ರೀ ಅಮ್ಮನವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.