ವಿಷಯಕ್ಕೆ ಹೋಗಿ

ದೊಡ್ಡಬಿದರೆಯಲ್ಲಿ ಫೆ.29ರಿಂದ ಶ್ರೀ ಪಾತಲಿಂಗೇಶ್ವರ ಸ್ವಾಮಿ,ಗ್ರಾಮದೇವತೆ ಕರಿಯಮ್ಮ ದೇವಿಯವರ ದೊಡ್ಡ ಜಾತ್ರಾ ಮಹೋತ್ಸವ

ಹುಳಿಯಾರು ಹೋಬಳಿ ದೊಡ್ಡಬಿದರೆಯಲ್ಲಿ ಶ್ರೀ ಪಾತಲಿಂಗೇಶ್ವರಸ್ವಾಮಿ, ಲಕ್ಕಮ್ಮ ದೇವಿ ಹಾಗೂ ಗ್ರಾಮದೇವತೆ  ಶ್ರೀ ಕರಿಯಮ್ಮ ದೇವಿ, ಬೇವಿನಳಮ್ಮ ದೇವಿಯವರ ದೊಡ್ಡ ಜಾತ್ರಾ ಮಹೋತ್ಸವ ದಿನಾಂಕ: 29-02-2024 ಗುರುವಾರದಿಂದ 06-03-2024 ಬುಧವಾರದವರೆಗೆ ಒಟ್ಟು ಏಳು ದಿನಗಳ ಕಾಲ ನಡೆಯಲಿದೆ.

29-02-2024 ಗುರುವಾರ : ಸಂಜೆ 8 ಗಂಟೆಗೆ ಮಧುವಣಗಿತ್ತಿ ಕಾರ್ಯಕ್ರಮ, ಮಡಿಲಕ್ಕಿಸೇವೆ


01-03-2024 ಶುಕ್ರವಾರ : ಬಾನ, ರಾತ್ರಿ 8 ಗಂಟೆಗೆ ಮಧುವಣಗಿತ್ತಿ, ಮಡಿಲಕ್ಕಿಸೇವೆ, ಚಿಕ್ಕಬಿದರೆ ಕರಿಯಮ್ಮನವರು ಮತ್ತು ಕೋಡಿಹಳ್ಳಿ ಕೊಲ್ಲಾಪುರದಮ್ಮನವರ ಆಗಮನ.

02-03-2024 ಶನಿವಾರ : ಬೆಳಗ್ಗೆ 6-30ಕ್ಕೆ ಆರತಿ ಬಾನ, ಗಂಗಾಪೂಜೆ, ನಡೆಮುಡಿಯೊಂದಿಗೆ ಅಮ್ಮನವರು ಮೂಲಸ್ಥಾನಕ್ಕೆ ಆಗಮಿಸುವರು.

ಬೆಳಿಗ್ಗೆ 9-30ಕ್ಕೆ ಅಗ್ನಿಕುಂಡ 

ಮಧ್ಯಾಹ್ನ 12 ಗಂಟೆಗೆ ಪ್ರಸಾದ ವಿನಿಯೋಗ

ಸಂಜೆ 6-30ಕ್ಕೆ ಸಿಡಿಮಹೋತ್ಸವ

ರಾತ್ರಿ 8 ಗಂಟೆಗೆ ಅನ್ನಸಂತರ್ಪಣೆ

ರಾತ್ರಿ 10 ಗಂಟೆಗೆ ಹೆಸರಾಂತ ಲಹರಿ ಮೆಲೊಡೀಸ್ ರವರಿಂದ ಆರ್ಕೇಸ್ಟ್ರಾ ಕಾರ್ಯಕ್ರಮ


03-03-2024 ಭಾನುವಾರ

ಬೆಳಗ್ಗೆ 8 ಗಂಟೆಗೆ ರುದ್ರಾಭಿಷೇಕ

10 ಗಂಟೆಗೆ ಧ್ವಜಾರೋಹಣ

11 ಗಂಟೆಗೆ ದೋಣಿಸೇವೆ

ಮಧ್ಯಾಹ್ನ 2 ಗಂಟೆಗೆ ಲಕ್ಕಮ್ಮನವರ ಮಜ್ಜನಬಾವಿ ಹತ್ತಿರ ಶ್ರೀ ಸ್ವಾಮಿಯವರು ದಯಮಾಡಿಸಿ ಶ್ರೀ ಲಕ್ಕಮ್ಮನವರ ಕಳಸಸ್ಥಾಪನೆ, ಗಂಗಾಪೂಜೆ, ಪ್ರಸಾದ ವಿನಿಯೋಗ ನಂತರ ನಡೆಮುಡಿಯೊಂದಿಗೆ ಶ್ರೀ ಸ್ವಾಮಿಯವರು ಲಕ್ಕಮ್ಮನವರೊಂದಿಗೆ ಮೂಲಸ್ಥಾನಕ್ಕೆ ದಯಮಾಡಿಸುವುದು. ಸಂಜೆ ಸ್ವಾಮಿಯವರಿಗೂ ಲಕ್ಕಮ್ಮನವರಿಗೂ ಕಂಕಣ ಧಾರಣೆ, ನಂತರ 9 ಗಂಟೆಗೆ ಮಡಿಲಕ್ಕಿ ಸೇವೆ.ರಾತ್ರಿ 11 ಗಂಟೆಗೆ ಶ್ರೀ ಸ್ವಾಮಿಯವರು ಮತ್ತು ಅಮ್ಮನವರು ಮೂಲಸ್ಥಾನಕ್ಕೆ ದಯಮಾಡಿಸಿ ಪಂಚಾಭಿಷೇಕ ಮಹಾಮಂಗಳಾರತಿ ನಡೆಯುವುದು.

ಸಂಜೆ 7-30ಕ್ಕೆ ಅನ್ನಸಂತರ್ಪಣೆ

04-03-2024 ಸೋಮವಾರ : ಸಂಜೆ 7-30ಕ್ಕೆ ದೊಡ್ಡಪರುವು

05-03-2024 ಮಂಗಳವಾರ

ಬೆಳಿಗ್ಗೆ 6 ಗಂಟೆಗೆ ರುದ್ರಾಭಿಷೇಕ ,

9 ರಿಂದ 12ರೊಳಗೆ ಕನ್ಯಾ ಲಗ್ನದಲ್ಲಿ ಪಟ್ಟಧಾರಣೆ

ಮಧ್ಯಾಹ್ನ 4-30ಕ್ಕೆ ಗಾವು, 

ಸಂಜೆ 7-30ಕ್ಕೆ ಅನ್ನಸಂತರ್ಪಣೆ ನಂತರ ಶ್ರೀ ಅಮ್ಮನವರು ಮತ್ತು ಶ್ರೀ ಸ್ವಾಮಿಯವರು ಉತ್ಸವದೊಂದಿಗೆ ಊರೊಳಗಿನ ದೇವಸ್ಥಾನಕ್ಕೆ ದಯಮಾಡಿಸುವುದು. 

ರಾತ್ರಿ 10 ಗಂಟೆಗೆ ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ದೊಡ್ಡಬಿದರೆ ಕಲಾತಂಡದಿಂದ ವೀರಗಾಸೆ.

ವೀರಾಗಾಸೆಯೊಂದಿಗೆ ದೇವಸ್ಥಾನದಿಂದ ತೇರಿನ ಬೀದಿಗೆ ದಯಮಾಡಿಸುವುದು.


ದಿನಾಂಕ: 05-03-2023 ಮಂಗಳವಾರ :

ಮ.12 ಗಂಟೆಗೆ ಧಾರ್ಮಿಕ ಸಭೆ 

ದಿವ್ಯ ಸಾನಿಧ್ಯ: ಶ್ರೀ ಶ್ರೀ ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಚಿನ್ಮೂಲಾದ್ರಿ ಶಿಲಾಪುರಿ ಮಹಾಸಂಸ್ಥಾನ ಭಗೀರಥ ಪೀಠ, ಹೊಸದುರ್ಗ ತಾ||


06-03-2024 ಬುಧವಾರ:

ಬೆಳಿಗ್ಗೆ 6 ಗಂಟೆಗೆ ದೊಡ್ಡರಥೋತ್ಸವ 

8 ಗಂಟೆಗೆ ಓಕಳಿಸೇವೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ, 

10 ಗಂಟೆಗೆ ಮಣೇವು ಕಾರ್ಯಕ್ರಮ ನಂತರ ಶ್ರೀ ಸ್ವಾಮಿಯವರು ಮೂಲಸ್ಥಾನಕ್ಕೆ ಬಿಜಯಂಗೈಯುವುದು.

ಈ ಮೇಲ್ಕಂಡ ಕಾರ್ಯಕ್ರಮಗಳಿಗೆ ಸರ್ವಭಕ್ತಾದಿಗಳು ಆಗಮಿಸಿ ಶ್ರೀ ಸ್ವಾಮಿಯವರ ಮತ್ತು ಶ್ರೀ ಅಮ್ಮನವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...