ವಿಷಯಕ್ಕೆ ಹೋಗಿ

ದೊಡ್ಡೆಣ್ಣೇಗೆರೆಯಲ್ಲಿ ಶ್ರೀ ಭೀಮಾಸತಿ ತೀಥಾರಾಜಸ್ವಾಮಿ ದೇವತೆಗಳ 67ನೇ ವರ್ಷದ ಜಾತ್ರಾ ಮಹೋತ್ಸವ ಮಾ.14ರಿಂದ-17ರವರೆಗೆ

ಹುಳಿಯಾರು: ಅಖಿಲ ಭಾರತ ಬಣಜಾರರ(ಲಂಬಾಣಿ) ಯಾತ್ರಾಸ್ಥಳವಾಗಿರುವ ಹಂದನಕೆರೆ ಹೋಬಳಿಯ ದೊಡ್ಡೆಣ್ಣೇಗೆರೆಯಲ್ಲಿ ಶ್ರೀ ಭೀಮಾಸತಿ ತೀಥಾರಾಜಸ್ವಾಮಿ ದೇವತೆಗಳ 67ನೇ ವರ್ಷದ ಜಾತ್ರಾ ಮಹೋತ್ಸವ ಇದೇ ತಿಂಗಳ 14 ರ ಗುರುವಾರದಿಂದ 17ರ ಭಾನುವಾರದವರೆಗೆ ಒಟ್ಟು ನಾಲ್ಕು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ ಎಂದು ಭೀಮಾಸತಿ ದೇವಾಲಯ ಸಮಿತಿ ಅಧ್ಯಕ್ಷ ಬಿ.ರಾಜಾನಾಯ್ಕ ತಿಳಿಸಿದರು.
ಭೀಮಾಸತಿ ದೇವಾಲಯ ಸಮಿತಿ ಅಧ್ಯಕ್ಷ ಬಿ.ರಾಜಾನಾಯ್ಕ ಮಾತನಾಡಿದರು.

ದೊಡ್ಡೆಣ್ಣೇಗೆರೆಯ ಭೀಮಾಸತಿ ಸನ್ನಿಧಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ರಾಜ್ಯದ ವಿವಿಧ ಜಿಲ್ಲೆಗಳಾದ ತುಮಕೂರು, ಶಿವಮೊಗ್ಗ, ದಾವಣಗೆರೆ, ಬೀದರ್, ಗುಲ್ಬರ್ಗ, ರಾಯಚೂರು ಸೇರಿದಂತೆ ಹೊರ ರಾಜ್ಯಗಳಿಂದಲೂ  ಜಾತ್ರಾ ಮಹೋತ್ಸವಕ್ಕೆಂದು  ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದು, ಬರುವ ಭಕ್ತರಿಗಾಗಿ ಸಮಿತಿಯಿಂದ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು. ಮಾ.14 ರ ಗುರುವಾರ ಝಂಡೇವು ಏರಿಸಿ ಧ್ವಜಾರೋಹಣದ ಮೂಲಕ ಜಾತ್ರಾ ಮಹೋತ್ಸವ ಚಾಲನೆಗೊಳ್ಳಲಿದ್ದು ಪ್ರತಿನಿತ್ಯವು ನಾನಾ ರೀತಿಯ ಪೂಜಾ ಕಾರ್ಯಕ್ರಮಗಳು ಸನ್ನಿಧಾನದಲ್ಲಿ ನೆರವೇರಲಿದ್ದು, ಮಾರ್ಚ್ 16ರ ಶನಿವಾರ ಅದ್ದೂರಿ ರಥೋತ್ಸವ ಕೂಡ ಜರುಗಲಿದೆ ಎಂದರು.

                          ಶ್ರೀ ಭೀಮಾಸತಿ ಜಾನಪದ ರಂಗ ಮಂದಿರದಲ್ಲಿ ಪ್ರತಿದಿನ ಬಂಜಾರದ ವಿವಿಧ ಪ್ರಕಾರಗಳ ಸಾಂಸ್ಕೃತಿಕ ಕಲಾ ಪ್ರದರ್ಶನ ನಡೆಯಲಿದ್ದು, ಆಗಮಿಸುವ ಸಕಲ ಭಕ್ತಾದಿಗಳಿಗೂ ಪ್ರತಿದಿನ ಮಧ್ಯಾಹ್ನ ದಾಸೋಹ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದರು.

ಸಮಿತಿ ಉಪಾಧ್ಯಕ್ಷ ಸಿಂಗಟಗೆರೆ ರಾಜಾನಾಯ್ಕ್ ಮಾತನಾಡಿದರು.

ಸಮಿತಿ ಉಪಾಧ್ಯಕ್ಷ ಸಿಂಗಟಗೆರೆ ರಾಜಾನಾಯ್ಕ್ ಮಾತನಾಡಿ ಕರ್ನಾಟಕದಲ್ಲಿ ಬಂಜಾರರ ಎರಡು ಜಾತ್ರೆಗಳು ಭಾರಿ ಪ್ರಾಮುಖ್ಯತೆ ಪಡೆದಿದ್ದು ಸೂರಗೊಂಡನಕೊಪ್ಪದಲ್ಲಿ ನಡೆಯುವ ಸೇವಾಲಾಲ್ ಜಯಂತಿ ಹೊರತುಪಡಿಸಿದರೆ ದೊಡ್ಡೆಣ್ಣೇಗೆರೆಯಲ್ಲಿ ನಡೆಯುವ ಭೀಮಾಸತಿ ತೀಥಾರಾಜ ಸ್ವಾಮಿ ದೇವತೆಗಳ ಜಾತ್ರಾ ಮಹೋತ್ಸವವೇ ಪ್ರಮುಖವಾಗಿದ್ದು ಸಹಸ್ರಾರು ಸಂಖ್ಯೆಯ ಭಕ್ತಾಧಿಗಳ ಪಾಲ್ಗೊಳ್ಳುವಿಕೆ ಇದಕ್ಕೆ ಸಾಕ್ಷಿಯಾಗಿದೆ ಎಂದರು. ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯಲು ಸಮಿತಿಯಿಂದ ವ್ಯವಸ್ಥೆ ಮಾಡಲಾಗಿದ್ದು ಬರತಕ್ಕ ಭಕ್ತದಿಗಳು ಕಮಿಟಿಯೊಂದಿಗೆ ಸಹಕರಿಸಿ ಜಾತ್ರೆ ಯಶಸ್ವಿಗೊಳಲು ಸಹಕರಿಸಬೇಕಾಗಿ ಕೋರಿದರು.

ತುಮಕೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಮಿಟಿಯ ಕಾರ್ಯದರ್ಶಿ ಜಿ.ರಘುನಾಥ್ ಮಾತನಾಡಿದರು.

ತುಮಕೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಮಿಟಿಯ ಕಾರ್ಯದರ್ಶಿ ಜಿ.ರಘುನಾಥ್ ಮಾತನಾಡಿ ದೊಡ್ಡೆಣ್ಣೇಗೆರೆಯು ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿದ್ದು ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಲಕ್ಷಾಂತರ ಜನರು ಸೇರುವ ಪವಿತ್ರ ಯಾತ್ರಾ ಸ್ಥಳವಾಗಿ ಹೆಸರಾಗಿದ್ದು, ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಅಪಾರ ಸಂಖ್ಯೆಯ ಭಕ್ತಾದಿಗಳು ಈ ಪವಿತ್ರ ಯಾತ್ರ ಸ್ಥಳಕ್ಕೆ ಆಗಮಿಸಿ ಇಲ್ಲೇ ನಾಲ್ಕು ದಿನಗಳ ಕಾಲವೂ ವಾಸ್ತವ್ಯ ಹೂಡುವುದು ನಡೆದು ಬಂದಿದೆ ಎಂದರು.

                     ಭೀಮಾಸತಿ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಎದುರಾಗದಂತೆ ಎಲ್ಲಾ ಅನುಕೂಲವನ್ನು ಕಲ್ಪಿಸಲಾಗಿದೆ ಎಂದರು. ಏಪ್ರಿಲ್ -ಮೇ ತಿಂಗಳಲ್ಲಿ ಕಾಣಿಸುತ್ತಿದ್ದ ಬಿಸಿಲಿನ ಝಳ ಇದೀಗ ಮಾರ್ಚ್ ತಿಂಗಳಿನಲ್ಲಿಯೇ ಕಾಣಿಸುತ್ತಿದ್ದು ನೀರಿನ ಅಭಾವ ಕೂಡ ಎದುರಾಗಿದೆ. ಆದರೂ ಕೂಡ ಭಕ್ತಾಧಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ  ಸಕಲ ವ್ಯವಸ್ಥೆಯನ್ನು ಸಮಿತಿಯಿಂದ ಮಾಡಲಾಗಿದ್ದು, ಬರತಕ್ಕ ಭಕ್ತಾಧಿಗಳು ಸಣ್ಣಪುಟ್ಟ ಲೋಪಗಳನ್ನೇ ದೊಡ್ಡದು ಮಾಡದೆ ಸಹಕರಿಸಿ ಜಾತ್ರಾ ಮಹೋತ್ಸವ ಯಶಸ್ವಿಗೊಳಿಸಬೇಕು ಎಂದರು. 

ಈ ಸಂದರ್ಭದಲ್ಲಿ ಕಲಾವಿದ ಅಗ್ಗುಂದ ರಮೇಶ್ ಸೇರಿದಂತೆ ಆಲದಕಟ್ಟೆ ತಿಮ್ಮಾನಾಯ್ಕ, ಗೋವಿಂದ ನಾಯ್ಕ, ಕುಮಾರನಾಯ್ಕ, ಅಗ್ರಹಾರ ತಾಂಡ್ಯದ ರಮೇಶ್ ನಾಯ್ಕ, ಮಹದೇವ ನಾಯ್ಕ, ಹುಳಿಯಾರು ಸೋಮಶೇಖರ್, ಕುಮಾರ್‌, ಉದಯಕುಮಾರ್, ಕರಿಯನಾಯ್ಕ್‌, ಪೂಜಾರ್ ಗಂಗಾ ನಾಯ್ಕ್ ಸೇರಿದಂತೆ ಹಲವರಿದ್ದರು

--------------------------------

ಸಮುದಾಯದ  ಸಚಿವರು- ಶಾಸಕರು- ನಿಗಮ ಮಂಡಳಿಯ ಅಧ್ಯಕ್ಷರು ಸೇರಿದಂತೆ ಸ್ಥಳೀಯ ಶಾಸಕರು ಹಾಗೂ ಮುಖಂಡರುಗಳನ್ನು, ಸಮುದಾಯದ ಹಿರಿಯರನ್ನು ಕೂಡ ಆಹ್ವಾನಿಸಲಾಗಿದ್ದು ಎಲ್ಲರೂ ಸೇರಿ ಜಾತ್ರೆಯನ್ನು ವಿಜೃಂಭಣೆಯಿಂದ ನಡೆಸಲು ಸಹಕರಿಸಬೇಕು.: ಜಿ.ರಘುನಾಥ್,ಕಮಿಟಿಯ ಕಾರ್ಯದರ್ಶಿ

-----------------------------

ಲಕ್ಷಾಂತರ ಜನ ಆಗಮಿಸುವ ಜಾತ್ರಾ ಮಹೋತ್ಸವದಲ್ಲಿ ಕೇವಲ 14- 20 ಜನ ಇರುವ ಕಮಿಟಿಯಿಂದ ಸುಧಾರಿಸಲು ಕಷ್ಟ ಸಾಧ್ಯವಾಗಿದ್ದು ಭಕ್ತಾಧಿಗಳೆಲ್ಲರೂ ಕಮಿಟಿಯೊಂದಿಗೆ ಸಹಕರಿಸಬೇಕು : ಸಿಂಗಟಗೆರೆ ರಾಜಾನಾಯ್ಕ

---------------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...