ವಿಷಯಕ್ಕೆ ಹೋಗಿ

ದೊಡ್ಡೆಣ್ಣೇಗೆರೆಯಲ್ಲಿ ಶ್ರೀ ಭೀಮಾಸತಿ ತೀಥಾರಾಜಸ್ವಾಮಿ ದೇವತೆಗಳ 67ನೇ ವರ್ಷದ ಜಾತ್ರಾ ಮಹೋತ್ಸವ ಮಾ.14ರಿಂದ-17ರವರೆಗೆ

ಹುಳಿಯಾರು: ಅಖಿಲ ಭಾರತ ಬಣಜಾರರ(ಲಂಬಾಣಿ) ಯಾತ್ರಾಸ್ಥಳವಾಗಿರುವ ಹಂದನಕೆರೆ ಹೋಬಳಿಯ ದೊಡ್ಡೆಣ್ಣೇಗೆರೆಯಲ್ಲಿ ಶ್ರೀ ಭೀಮಾಸತಿ ತೀಥಾರಾಜಸ್ವಾಮಿ ದೇವತೆಗಳ 67ನೇ ವರ್ಷದ ಜಾತ್ರಾ ಮಹೋತ್ಸವ ಇದೇ ತಿಂಗಳ 14 ರ ಗುರುವಾರದಿಂದ 17ರ ಭಾನುವಾರದವರೆಗೆ ಒಟ್ಟು ನಾಲ್ಕು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ ಎಂದು ಭೀಮಾಸತಿ ದೇವಾಲಯ ಸಮಿತಿ ಅಧ್ಯಕ್ಷ ಬಿ.ರಾಜಾನಾಯ್ಕ ತಿಳಿಸಿದರು.
ಭೀಮಾಸತಿ ದೇವಾಲಯ ಸಮಿತಿ ಅಧ್ಯಕ್ಷ ಬಿ.ರಾಜಾನಾಯ್ಕ ಮಾತನಾಡಿದರು.

ದೊಡ್ಡೆಣ್ಣೇಗೆರೆಯ ಭೀಮಾಸತಿ ಸನ್ನಿಧಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ರಾಜ್ಯದ ವಿವಿಧ ಜಿಲ್ಲೆಗಳಾದ ತುಮಕೂರು, ಶಿವಮೊಗ್ಗ, ದಾವಣಗೆರೆ, ಬೀದರ್, ಗುಲ್ಬರ್ಗ, ರಾಯಚೂರು ಸೇರಿದಂತೆ ಹೊರ ರಾಜ್ಯಗಳಿಂದಲೂ  ಜಾತ್ರಾ ಮಹೋತ್ಸವಕ್ಕೆಂದು  ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದು, ಬರುವ ಭಕ್ತರಿಗಾಗಿ ಸಮಿತಿಯಿಂದ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು. ಮಾ.14 ರ ಗುರುವಾರ ಝಂಡೇವು ಏರಿಸಿ ಧ್ವಜಾರೋಹಣದ ಮೂಲಕ ಜಾತ್ರಾ ಮಹೋತ್ಸವ ಚಾಲನೆಗೊಳ್ಳಲಿದ್ದು ಪ್ರತಿನಿತ್ಯವು ನಾನಾ ರೀತಿಯ ಪೂಜಾ ಕಾರ್ಯಕ್ರಮಗಳು ಸನ್ನಿಧಾನದಲ್ಲಿ ನೆರವೇರಲಿದ್ದು, ಮಾರ್ಚ್ 16ರ ಶನಿವಾರ ಅದ್ದೂರಿ ರಥೋತ್ಸವ ಕೂಡ ಜರುಗಲಿದೆ ಎಂದರು.

                          ಶ್ರೀ ಭೀಮಾಸತಿ ಜಾನಪದ ರಂಗ ಮಂದಿರದಲ್ಲಿ ಪ್ರತಿದಿನ ಬಂಜಾರದ ವಿವಿಧ ಪ್ರಕಾರಗಳ ಸಾಂಸ್ಕೃತಿಕ ಕಲಾ ಪ್ರದರ್ಶನ ನಡೆಯಲಿದ್ದು, ಆಗಮಿಸುವ ಸಕಲ ಭಕ್ತಾದಿಗಳಿಗೂ ಪ್ರತಿದಿನ ಮಧ್ಯಾಹ್ನ ದಾಸೋಹ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದರು.

ಸಮಿತಿ ಉಪಾಧ್ಯಕ್ಷ ಸಿಂಗಟಗೆರೆ ರಾಜಾನಾಯ್ಕ್ ಮಾತನಾಡಿದರು.

ಸಮಿತಿ ಉಪಾಧ್ಯಕ್ಷ ಸಿಂಗಟಗೆರೆ ರಾಜಾನಾಯ್ಕ್ ಮಾತನಾಡಿ ಕರ್ನಾಟಕದಲ್ಲಿ ಬಂಜಾರರ ಎರಡು ಜಾತ್ರೆಗಳು ಭಾರಿ ಪ್ರಾಮುಖ್ಯತೆ ಪಡೆದಿದ್ದು ಸೂರಗೊಂಡನಕೊಪ್ಪದಲ್ಲಿ ನಡೆಯುವ ಸೇವಾಲಾಲ್ ಜಯಂತಿ ಹೊರತುಪಡಿಸಿದರೆ ದೊಡ್ಡೆಣ್ಣೇಗೆರೆಯಲ್ಲಿ ನಡೆಯುವ ಭೀಮಾಸತಿ ತೀಥಾರಾಜ ಸ್ವಾಮಿ ದೇವತೆಗಳ ಜಾತ್ರಾ ಮಹೋತ್ಸವವೇ ಪ್ರಮುಖವಾಗಿದ್ದು ಸಹಸ್ರಾರು ಸಂಖ್ಯೆಯ ಭಕ್ತಾಧಿಗಳ ಪಾಲ್ಗೊಳ್ಳುವಿಕೆ ಇದಕ್ಕೆ ಸಾಕ್ಷಿಯಾಗಿದೆ ಎಂದರು. ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯಲು ಸಮಿತಿಯಿಂದ ವ್ಯವಸ್ಥೆ ಮಾಡಲಾಗಿದ್ದು ಬರತಕ್ಕ ಭಕ್ತದಿಗಳು ಕಮಿಟಿಯೊಂದಿಗೆ ಸಹಕರಿಸಿ ಜಾತ್ರೆ ಯಶಸ್ವಿಗೊಳಲು ಸಹಕರಿಸಬೇಕಾಗಿ ಕೋರಿದರು.

ತುಮಕೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಮಿಟಿಯ ಕಾರ್ಯದರ್ಶಿ ಜಿ.ರಘುನಾಥ್ ಮಾತನಾಡಿದರು.

ತುಮಕೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಮಿಟಿಯ ಕಾರ್ಯದರ್ಶಿ ಜಿ.ರಘುನಾಥ್ ಮಾತನಾಡಿ ದೊಡ್ಡೆಣ್ಣೇಗೆರೆಯು ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿದ್ದು ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಲಕ್ಷಾಂತರ ಜನರು ಸೇರುವ ಪವಿತ್ರ ಯಾತ್ರಾ ಸ್ಥಳವಾಗಿ ಹೆಸರಾಗಿದ್ದು, ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಅಪಾರ ಸಂಖ್ಯೆಯ ಭಕ್ತಾದಿಗಳು ಈ ಪವಿತ್ರ ಯಾತ್ರ ಸ್ಥಳಕ್ಕೆ ಆಗಮಿಸಿ ಇಲ್ಲೇ ನಾಲ್ಕು ದಿನಗಳ ಕಾಲವೂ ವಾಸ್ತವ್ಯ ಹೂಡುವುದು ನಡೆದು ಬಂದಿದೆ ಎಂದರು.

                     ಭೀಮಾಸತಿ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಎದುರಾಗದಂತೆ ಎಲ್ಲಾ ಅನುಕೂಲವನ್ನು ಕಲ್ಪಿಸಲಾಗಿದೆ ಎಂದರು. ಏಪ್ರಿಲ್ -ಮೇ ತಿಂಗಳಲ್ಲಿ ಕಾಣಿಸುತ್ತಿದ್ದ ಬಿಸಿಲಿನ ಝಳ ಇದೀಗ ಮಾರ್ಚ್ ತಿಂಗಳಿನಲ್ಲಿಯೇ ಕಾಣಿಸುತ್ತಿದ್ದು ನೀರಿನ ಅಭಾವ ಕೂಡ ಎದುರಾಗಿದೆ. ಆದರೂ ಕೂಡ ಭಕ್ತಾಧಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ  ಸಕಲ ವ್ಯವಸ್ಥೆಯನ್ನು ಸಮಿತಿಯಿಂದ ಮಾಡಲಾಗಿದ್ದು, ಬರತಕ್ಕ ಭಕ್ತಾಧಿಗಳು ಸಣ್ಣಪುಟ್ಟ ಲೋಪಗಳನ್ನೇ ದೊಡ್ಡದು ಮಾಡದೆ ಸಹಕರಿಸಿ ಜಾತ್ರಾ ಮಹೋತ್ಸವ ಯಶಸ್ವಿಗೊಳಿಸಬೇಕು ಎಂದರು. 

ಈ ಸಂದರ್ಭದಲ್ಲಿ ಕಲಾವಿದ ಅಗ್ಗುಂದ ರಮೇಶ್ ಸೇರಿದಂತೆ ಆಲದಕಟ್ಟೆ ತಿಮ್ಮಾನಾಯ್ಕ, ಗೋವಿಂದ ನಾಯ್ಕ, ಕುಮಾರನಾಯ್ಕ, ಅಗ್ರಹಾರ ತಾಂಡ್ಯದ ರಮೇಶ್ ನಾಯ್ಕ, ಮಹದೇವ ನಾಯ್ಕ, ಹುಳಿಯಾರು ಸೋಮಶೇಖರ್, ಕುಮಾರ್‌, ಉದಯಕುಮಾರ್, ಕರಿಯನಾಯ್ಕ್‌, ಪೂಜಾರ್ ಗಂಗಾ ನಾಯ್ಕ್ ಸೇರಿದಂತೆ ಹಲವರಿದ್ದರು

--------------------------------

ಸಮುದಾಯದ  ಸಚಿವರು- ಶಾಸಕರು- ನಿಗಮ ಮಂಡಳಿಯ ಅಧ್ಯಕ್ಷರು ಸೇರಿದಂತೆ ಸ್ಥಳೀಯ ಶಾಸಕರು ಹಾಗೂ ಮುಖಂಡರುಗಳನ್ನು, ಸಮುದಾಯದ ಹಿರಿಯರನ್ನು ಕೂಡ ಆಹ್ವಾನಿಸಲಾಗಿದ್ದು ಎಲ್ಲರೂ ಸೇರಿ ಜಾತ್ರೆಯನ್ನು ವಿಜೃಂಭಣೆಯಿಂದ ನಡೆಸಲು ಸಹಕರಿಸಬೇಕು.: ಜಿ.ರಘುನಾಥ್,ಕಮಿಟಿಯ ಕಾರ್ಯದರ್ಶಿ

-----------------------------

ಲಕ್ಷಾಂತರ ಜನ ಆಗಮಿಸುವ ಜಾತ್ರಾ ಮಹೋತ್ಸವದಲ್ಲಿ ಕೇವಲ 14- 20 ಜನ ಇರುವ ಕಮಿಟಿಯಿಂದ ಸುಧಾರಿಸಲು ಕಷ್ಟ ಸಾಧ್ಯವಾಗಿದ್ದು ಭಕ್ತಾಧಿಗಳೆಲ್ಲರೂ ಕಮಿಟಿಯೊಂದಿಗೆ ಸಹಕರಿಸಬೇಕು : ಸಿಂಗಟಗೆರೆ ರಾಜಾನಾಯ್ಕ

---------------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.