ವಿಷಯಕ್ಕೆ ಹೋಗಿ

ಅಖಿಲ ಭಾರತ ಬಣಜಾರರ ಯಾತ್ರಾಸ್ಥಳವಾದ ದೊಡ್ಡೆಣ್ಣೇಗೆರೆಯಲ್ಲಿ ಶ್ರೀ ಭೀಮಾಸತಿ ತೀಥಾರಾಜಸ್ವಾಮಿ ದೇವತೆಗಳ 67ನೇ ವರ್ಷದ ಜಾತ್ರಾ ಮಹೋತ್ಸವ ಮಾ.14ರ ಗುರುವಾರದಿಂದ ಮಾ.17 ರ ಭಾನುವಾರದವರೆಗೆ

         ✍️ ನರೇಂದ್ರಬಾಬು-ಹುಳಿಯಾರು- 9448760070

ಹುಳಿಯಾರು:ಅಖಿಲ ಭಾರತ ಬಣಜಾರರ ಯಾತ್ರಾಸ್ಥಳವಾದ ತುಮಕೂರು ಜಿಲ್ಲೆಯ ಹಂದನಕೆರೆ ಹೋಬಳಿಯ ದೊಡ್ಡೆಣ್ಣೇಗೆರೆಯಲ್ಲಿ  ಶ್ರೀ ಭೀಮಾಸತಿ ತೀಥಾರಾಜಸ್ವಾಮಿ ದೇವತೆಗಳ 67ನೇ ವರ್ಷದ ಜಾತ್ರಾ ಮಹೋತ್ಸವವು ದಿನಾಂಕ 14-03-2024 ನೇ ಗುರುವಾರದಿಂದ 17-03-2024 ರ ಭಾನುವಾರದವರೆಗೆ  ನಾಲ್ಕು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ.

ಜಾತ್ರಾ ಮಹೋತ್ಸವದ ಬಗ್ಗೆ ಕಾರ್ಯಕಾರಿ ಮಂಡಳಿಯ ಕಾರ್ಯದರ್ಶಿ ಜಿ ರಘುನಾಥ್ ಕೆಳಕಂಡಂತೆ ಮಾಹಿತಿ ನೀಡಿದರು.

*ಪ್ರತಿದಿನ ನಡೆಯುವ ಪೂಜಾ ಕಾರ್ಯಕ್ರಮಗಳು ಹೀಗಿದೆ.*

*ದಿನಾಂಕ 14-03-2024 ನೇ ಗುರುವಾರದ ಪೂಜಾ ಕಾರ್ಯಕ್ರಮಗಳು*

-------------------------

ಶ್ರೀ ಕರಿಯಮ್ಮದೇವರ ಪುಣ್ಯಾರ್ಚನೆ, ಶ್ರೀ ಗಣಪತಿ ಪುಣ್ಯಾರ್ಚನೆ, ಝಾಂಡೇವು, ಧ್ವಜಾರೋಹಣ ಗರುಡಗಂಬ ಪೂಜೆ, ನಂದಾದೀಪ ಬೆಳಗಿಸುವುದು, ಕಳಸಧಾರಣೆ, ದೇವತೆಗಳಿಗೆ ಅಭಿಷೇಕ

*ದಿನಾಂಕ 15-03-2024 ನೇ ಶುಕ್ರವಾರದ ಪೂಜಾ ಕಾರ್ಯಕ್ರಮಗಳು*

-----------------------------

ಗಂಗಾಪೂಜೆ ಮತ್ತು ಒಳಂಗ್, ಪಂಚಾಮೃತ ಅಭಿಷೇಕ, ಶ್ರೀ ದೇವತೆಗಳಿಗೆ ಪುಣ್ಯಾರ್ಚನೆ, ದೇವತೆಗಳಿಗೆ ಕವಚಧಾರಣೆ, ಸಾತ್ ಸತ್ತಿಮಾತೆಯರಿಗೆ ಪುಣ್ಯಾರ್ಚನೆ, ಶ್ರೀ ತೀಥಾರಾಜಸ್ವಾಮಿಯವರ ಪುಣ್ಯಾರ್ಚನೆ, ರಸಾಯನ, ಪಾನಕ ಪನಿವಾರ


ಬೆಳಿಗ್ಗೆ 10-00 ಘಂಟೆಯ ನಂತರ ಭಕ್ತಾದಿಗಳಿಗೆ ಪೂಜಾ ಮತ್ತು ದೇವರ ದರ್ಶನ ಪ್ರಾರಂಭ

*ದಿನಾಂಕ 16-03-2024 ನೇ ಶನಿವಾರದ ಪೂಜಾ ಕಾರ್ಯಕ್ರಮಗಳು*

-----------------------------

ಗಂಗಾ ಪೂಜೆ ಮತ್ತು ಕುಂಬಾಭಿಷೇಕ, ಶ್ರೀ ದೇವತೆಗಳಿಗೆ ಕ್ಷೀರಾಭೀಷೇಕ, ಪಂಚಾಮೃತ ಅಭಿಷೇಕ ದೇವತೆಗಳಿಗೆ ಬೆಳ್ಳಿ ಕವಚಧಾರಣೆ ಪೂಜೆ, ರಾತ್ರಿ ದುಗ್ಲಾಸೇವೆ, ಅಂಕುರಾರ್ಪಣೆ (ತೀಜ್)


ಮಧ್ಯಾಹ್ನ 4-00 ರಿಂದ 3ನೇ ವರ್ಷದ ಅದ್ಧೂರಿ ರಥೋತ್ಸವವನ್ನು ನಡೆಸಲಾಗುವುದು


ಸಂಜೆ 6-00 ಕ್ಕೆ ಧಾರ್ಮಿಕ ಮತ್ತು ಸನ್ಮಾನ ಸಮಾರಂಭ


ಸಂಜೆ 8-00 ಘಂಟೆಯಿಂದ ಶ್ರೀ ಕರಿಯಮ್ಮ ದೇವಿ, ಶ್ರೀ ಭೀಮಾಸತಿ, ಶ್ರೀ ತೀಥಾರಾಜಸ್ವಾಮಿಯವರ ಉತ್ಸವ 

*ದಿನಾಂಕ 17-03-2024 ನೇ ಭಾನುವಾರ ಪೂಜಾ ಕಾರ್ಯಕ್ರಮಗಳು*

---------------------------

ಶ್ರೀ ದೇವತೆಗಳಿಗೆ ಭಕ್ತಾದಿಗಳಿಂದ ಪೂಜಾ ಕಾರ್ಯಕ್ರಮಗಳು


ಬೆಳಿಗ್ಗೆ 9-00 ಗಂಟೆಯ ನಂತರ ಶ್ರೀ ತೀಥಾರಾಜಸ್ವಾಮಿಗೆ ವಿಶೇಷ ಪೂಜೆ


*ಶ್ರೀ ಭೀಮಾಸತಿ ಜಾನಪದ ರಂಗಮಂದಿರದಲ್ಲಿ ಪ್ರತಿದಿನ ಬಂಜಾರರ ವಿವಿಧ ಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.*


*ಜಾತ್ರೆ ಹೊರತುಪಡಿಸಿ ಪ್ರತಿ ದಿನ ಬರುವ ಭಕ್ತಾದಿಗಳಿಗೆ “ದಾಸೋಹ" ವ್ಯವಸ್ಥೆ ಮಾಡಲಾಗಿದ್ದು ಭಕ್ತಾದಿಗಳು ದವಸ-ಧಾನ್ಯ ಹಾಗೂ ಧನ ಸಹಾಯವನ್ನು ಅರ್ಪಿಸಲು ಕೋರಿದೆ.*

ಶ್ರೀ ದೇವತೆಗಳ ತಿಂಗಳ ಜಾತ್ರೆ ದಿ॥ 12-04-2024 ಶುಕ್ರವಾರದಿಂದ ದಿ।। 14-04-2024 ನೇ ಭಾನುವಾರದವರೆಗೆ

ವಿ.ಸೂ. : ಶ್ರೀ ಕರಿಯಮ್ಮದೇವಿಯವರ ನೂತನ ದೇವಾಲಯ ನಿರ್ಮಾಣ ಕಾರ್ಯ ನಡೆಯುತ್ತಿದ್ದು ಭಕ್ತಾಧಿಗಳು ತಮ್ಮ ತನು ಮನ ಧನ ಇತ್ಯಾದಿಗಳನ್ನು ಅರ್ಪಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ದೇವಾಲಯ ಸಮಿತಿಯವರು ಕೋರಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...