ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಆಗಸ್ಟ್, 2024 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಬೆಳಗುಲಿಯಲ್ಲಿ ನಾಳೆ ಭಾರತ್ ನಿರ್ಮಾಣ ಸೇವಾ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

ಸಮೀಪದ ಬೆಳಗುಲಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಬೆಳಗುಲಿ ಇವರ ಸಹಯೋಗದಲ್ಲಿ  ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಲಾದ ಭಾರತ್ ನಿರ್ಮಾಣ ಸೇವಾ ಕೇಂದ್ರದ  ನೂತನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ದಿ: 28-08-2024ರಂದು ಬೆಳಿಗ್ಗೆ 11-00 ಕ್ಕೆ ಹಮ್ಮಿಕೊಳ್ಳಲಾಗಿದೆ. ನೂತನ ಕಟ್ಟಡದ ಉದ್ಘಾಟನೆಯನ್ನು  ಶಾಸಕರಾದ ಸಿ.ಬಿ.ಸುರೇಶ್‌ಬಾಬುರವರು ನೆರವೇರಿಸಲಿದ್ದು ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರು ಹಾಗೂ  ತುಮಕೂರು ಲೋಕಸಭಾ ಕ್ಷೇತ್ರದ ಸಂಸದರಾದ  ವಿ.ಸೋಮಣ್ಣನವರು, ಗೃಹಸಚಿವರಾದ ಡಾ|| ಜಿ.ಪರಮೇಶ್ವರ್‌ರವರು,ಸಹಕಾರ ಸಚಿವರಾದ ಕೆ.ಎನ್.ರಾಜಣ್ಣನವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆರವರು,ಮಾನ್ಯ  ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರರವರು ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಬೆಳಗುಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎನ್.ರಾಮಯ್ಯನವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಸ್.ಆರ್.ಶ್ರೀನಿವಾಸ್,ರಾಜ್ಯ ಸಭಾ ಸದಸ್ಯರಾದ ಜಗ್ಗೇಶ್,ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ,ವಿಧಾನ ಪರಿಷತ್ ಸದಸ್ಯರರಾದ  ಚಿದಾನಂದ ಎಂ. ಗೌಡ.ವಿಧಾನ ಪರಿಷತ್ ಸದಸ್

ಒಳ ಮೀಸಲಾತಿ: ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸಿ ಹುಳಿಯಾರಿನಲ್ಲಿ ಸಂಭ್ರಮಾಚರಣೆ

ಹುಳಿಯಾರು : ಒಳ ಮೀಸಲಾತಿ ಪರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸಿ ದಲಿತ ಸಂಘರ್ಷ ಸಮಿತಿ ಹಾಗೂ ಮಾದಿಗ ದಂಡೋರ ಸಮಿತಿ ಸದಸ್ಯರು ಸೇರಿದಂತೆ ದಲಿತ ಪರ ಸಂಘಟನೆಗಳ ಮುಖಂಡರುಗಳು ಹುಳಿಯಾರು ಪೊಲೀಸ್ ಸ್ಟೇಷನ್ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು          ಒಳ ಮೀಸಲಾತಿ ಪರವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಮೂರು ದಶಕಗಳ ಕಾಲ ಸತತವಾಗಿ ಹೋರಾಟ ಮಾಡಿಕೊಂಡು ಬಂದಿದ್ದು ಇದೀಗ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಶತಮಾನಗಳಿಂದಲೂ ತುಳಿತಕ್ಕೊಳಗಾಗಿರುವ ದಲಿತರಿಗೆ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದಂತಾಗಿದೆ. ಈ ಐತಿಹಾಸಿಕ ತೀರ್ಪನ್ನು ನಮ್ಮ ಸಂಘಟನೆ ಸ್ವಾಗತಿಸುತ್ತದೆ ಎಂದು ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಹನುಮಂತಯ್ಯ ನುಡಿದರು.                        ಚಿಕ್ಕನಾಯಕನಹಳ್ಳಿ ತಾಲೂಕು ಕೆಡಿಪಿ ಸದಸ್ಯರಾದ ಬರಕನಾಳ್ ಶಂಕರ್ ಮಾತನಾಡಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಶೋಷಿತ ಸಮುದಾಯಗಳಲ್ಲಿ ಹೊಸ ಆಶಾಭಾವನೆಗೆ ಕಾರಣವಾಗಿದ್ದು,ಇದರಿಂದಾಗಿ  ಇನ್ನು ಮುಂದೆ ಅತ್ಯಂತ ಹಿಂದುಳಿದ ಸಣ್ಣ ಪುಟ್ಟ ಉಪಜಾತಿಗಳಿಗೂ ಸಹ ಮೀಸಲಾತಿಯ ಲಾಭ ಪಡೆಯುವಂತಾಗಿದೆ. ರಾಜ್ಯ ಸರ್ಕಾರ ಇದನ್ನು ತ್ವರಿತವಾಗಿ ಜಾರಿ ಮಾಡುವ ಮೂಲಕ ಅನ್ಯಾಯ ಮತ್ತು ಅಸ್ಪೃಶ್ಯತೆಯಲ್ಲಿ ಬೆಂದು ನೊಂದಿದ್ದ ಸಣ್ಣ ಸಮುದಾಯಗಳಿಗೆ ನ್ಯಾಯ ಕೊಡಿಸಬೇಕೆಂದರು.                     ಈ ವೇಳೆ ಡಿ