ವಿಷಯಕ್ಕೆ ಹೋಗಿ

ಹುಳಿಯಾರು ಪಟ್ಟಣ ಪಂಚಾಯಿತಿಯ 2025- 26 ನೇ ಸಾಲಿನ ಆಯವ್ಯಯ ಮಂಡನೆ : ₹40,48,515 ರೂಪಾಯಿಗಳ ಉಳಿತಾಯ ಬಜೆಟ್

ಹುಳಿಯಾರು ಪಟ್ಟಣ ಪಂಚಾಯಿತಿಯ 2025- 26 ನೇ ಸಾಲಿನ ಆಯವ್ಯಯ ಮಂಡನೆ : ₹40,48,515 ರೂಪಾಯಿಗಳ ಉಳಿತಾಯ ಬಜೆಟ್

ಕಳೆದ ಸಾಲಿನ ಆಯವ್ಯಯದ ಆಗು-ಹೋಗುಗಳ ಬಗ್ಗೆ ಮಾಹಿತಿ ನೀಡಲು ಒತ್ತಾಯ...

ಸಭೆಗೆ ಗೈರಾದ ಪಟ್ಟಣ ಪಂಚಾಯಿತಿ ಇಂಜಿನಿಯರ್ ಮೇಲೆ ದೂರುಗಳ ಸುರಿಮಳೆ

ಪಟ್ಟಣ ಪಂಚಾಯಿತಿಯ ಹೊಸ ಕಚೇರಿ ಕಟ್ಟಡ ನಿರ್ಮಾಣಕ್ಕೆ 200 ಲಕ್ಷ ರೂ ಮೀಸಲು.

ಆಯವ್ಯಯದ ಪ್ರಮುಖ ಅಂಕಿ ಅಂಶ ಹಾಗೂ ವಿಶೇಷ ಅಭಿವೃದ್ಧಿ ಯೋಜನೆಗಳ ಬಗ್ಗೆ  ವಿವರಣೆ ನೀಡಿದ ಅಧ್ಯಕ್ಷೆ ಶ್ರೀಮತಿ ರತ್ನಮ್ಮ

------------------------------

✍️ ನರೇಂದ್ರಬಾಬು-ಹುಳಿಯಾರು

      9448760070

-------------------------------

ಹುಳಿಯಾರು : ಹುಳಿಯಾರು ಪಟ್ಟಣ ಪಂಚಾಯಿತಿಯ 2025- 26 ನೇ ಸಾಲಿನ ಆಯವ್ಯಯವನ್ನು ಅಧ್ಯಕ್ಷೆ ಶ್ರೀಮತಿ ರತ್ನಮ್ಮ ಮಂಡಿಸಿದ್ದು ಪಟ್ಟಣ ಪಂಚಾಯಿತಿಗೆ ವಿವಿಧ ಮೂಲಗಳಿಂದ ಒಟ್ಟು 33,08,62,000 ರೂ ಆದಾಯ ನಿರೀಕ್ಷಿಸಲಾಗಿದ್ದು ಹಾಗೂ 41,00,75,729 ರೂ ವೆಚ್ಚ ನಿರೀಕ್ಷಿಸಲಾಗಿದ್ದು ಒಟ್ಟು 40,48,515 ರೂಪಾಯಿ ಆಖೈರು ಶಿಲ್ಕಿನೊಂದಿಗೆ ಉಳಿತಾಯ ಬಜೆಟ್ ಮಂಡಿಸಲಾಯಿತು.   
                                            

ಮಂಗಳವಾರ ಬೆಳಗ್ಗೆ 11 ಗಂಟೆಗೆ  ಪಟ್ಟಣ ಪಂಚಾಯಿತಿ ಅಧ್ಯಕ್ಷೆ  ರತ್ನಮ್ಮ ಅಧ್ಯಕ್ಷತೆಯಲ್ಲಿ ಪಟ್ಟಣ ಪಂಚಾಯತಿ ಸಭಾಂಗಣದಲ್ಲಿ ಕರೆಯಲಾಗಿದ್ದ  2025-26 ನೇ ಸಾಲಿನ ಆಯವ್ಯಯ ಮಂಡನೆ ಸಭೆಯಲ್ಲಿ  ₹40,48,515 ರೂಪಾಯಿಗಳ ಉಳಿತಾಯ ಬಜೆಟ್ ಮಂಡಿಸಲಾಯಿತಾದರೂ ಪ್ರಾರಂಭದಲ್ಲಿ ಸಭೆಗೆ ಗೈರಾಗಿದ್ದ ಇಂಜಿನಿಯರ್ ಬಗ್ಗೆ ಎಲ್ಲಾ ಸದಸ್ಯರುಗಳು ವಕ್ಕೋರಿಲಿನಿಂದ ಸಮಸ್ಯೆಗಳ ಸುರಿಮಳೆಗೈದರು. ಕಳೆದ ಸಾಲಿನ ಬಜೆಟ್ ನಲ್ಲಿ ಮೀಸಲಿಟ್ಟಿದ್ದ ಹಣಕ್ಕೆ ಕ್ರಿಯಾಯೋಜನೆ ಮಾಡದೆ ಹಣ ಪೋಲು ಮಾಡಿದ್ದಾರೆ ಎಂದು ಆರೋಪಿಸಿದರು. ಯಾರ ಫೋನಿಗೂ ಸಿಗದೇ, ನಿಯಮಿತವಾಗಿ ಕಚೇರಿಗೆ ಆಗಮಿಸದೆ, ಯಾವ ಸದಸ್ಯರಿಗೂ ಸ್ಪಂದಿಸದಿರುವ ಇಂಜಿನಿಯರ್ ಈ ಪಂಚಾಯಿತಿಗೆ ಅಗತ್ಯ ಇಲ್ಲ ಪಿಡಿಗೆ ಫೋನ್ ಮಾಡಿ ಅವರನ್ನು ಕೂಡಲೇ ಬದಲಾಯಿಸಿ ಎಂದು ದಯಾನಂದ್, ದಸ್ತಗಿರಿ ಸಾಬ್, ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಸೇರಿದಂತೆ ಹಲವು ಸದಸ್ಯರು ಒತ್ತಾಯಿಸಿದರು.

ಬ‌ಜೆಟ್‌ ಮಂಡನೆ ಹಾಗೂ ಅನುಮೋದನೆಗಾಗಿ ಇಂದು ಸಭೆ ಕರೆಯಲಾಗಿತ್ತಾದರೂ ಆರಂಭದಲ್ಲಿಯೇ ಇದು ಬಜೆಟ್ ಸಭೆಯೊ ಅಥವಾ ಕುಂದು ಕೊರತೆಯ ಸಭೆಯೋ ಎನ್ನುವಂತೆ ಸದಸ್ಯರುಗಳು ಮುಖ್ಯಾಧಿಕಾರಿ ನಾಗಭೂಷಣ್ ಅವರ ಬಳಿ ಪಟ್ಟಣದ ಹತ್ತು ಹಲವು ಸಮಸ್ಯೆಗಳ ಬಗ್ಗೆ ಪ್ರಶ್ನೆಗಳ ಸುರಿಮಳೆಗೆರೆದರು.

ಇದರ ನಡುವೆಯೇ ಆಸ್ತಿತೆರಿಗೆ ದರವನ್ನು ಶೇಕಡ 5% ಹೆಚ್ಚಿಸುವ ಮೂಲಕ ಪರಿಷ್ಕರಿಸಲು ಒಪ್ಪಲಾಯಿತು.ನೀರಿನ ಕರ ಹೆಚ್ಚಿಸುವುದರ ಕುರಿತು ಕಂದಾಯಾಧಿಕಾರಿ ಸಭೆಯಲ್ಲಿ ಪ್ರಸ್ತಾಪ ಮಾಡುತ್ತಿದ್ದಂತೆ, ಇದುವರೆಗೂ ಪಟ್ಟಣದಲ್ಲಿ ನೀರು ಕೊಡಲು ಪಟ್ಟಣ ಪಂಚಾಯಿತಿಯಿಂದ ಸಾಧ್ಯವಾಗಿಲ್ಲ, ಹಾಗಿದ್ದೂ ಪುನಃ ನೀರಿನ ಕರ ಹೆಚ್ಚಿಸಿದಲ್ಲಿ ಸಮಸ್ಯೆ ಉಂಟಾಗುತ್ತದೆ ಎನ್ನುವ ಮಾತು ಕೇಳಿ ಬಂತು.ಕಡೆಗೆ ಹಾಲಿ ಇರುವ 80 ರೂಪಾಯಿಗಳ ಬದಲಿಗೆ 90 ರೂಪಾಯಿಗೆ ಹೆಚ್ಚಳ ಮಾಡುವಂತೆ ಸೂಚಿಸಲಾಯಿತು.

ಅಧ್ಯಕ್ಷೆ ರತ್ನಮ್ಮ  2025-26 ನೇ ಸಾಲಿನ ನಿರೀಕ್ಷಿತ ಆದಾಯ ಮತ್ತು ವೆಚ್ಚಗಳ ಯೋಜನೆಯ ಪಟ್ಟಿಯನ್ನು ಓದುವುದರ ಮೂಲಕ ಬಜೆಟ್ ಮಂಡಿಸಿದರು.

                                        

ಬಜೆಟ್ ಪ್ರಮುಖ ಅಂಶಗಳು :

-------------------------

ಸ್ವಯಂಘೋಷಿತ ಆಸ್ತಿ ತೆರಿಗೆಯಿಂದ 120 ಲಕ್ಷ ರೂಪಾಯಿ, ನೀರು ಸರಬರಾಜು ಸಂಪರ್ಕಗಳಿಂದ 30 ಲಕ್ಷ ರೂಪಾಯಿ, ವಾಣಿಜ್ಯ ಸಂಕೀರ್ಣಗಳ ಬಾಡಿಗೆಯಿಂದ 50 ಲಕ್ಷ ರೂಪಾಯಿ, ಪರಿವೀಕ್ಷಣ ಶುಲ್ಕ- ಉದ್ಯಮ ಪರವಾನಿಗೆ- ಕಟ್ಟಡ ಪರವಾನಿಗೆ -ಖಾತಾ ನಕಲು ಮತ್ತಿತರ ಶುಲ್ಕಗಳಿಂದ 1.05 ಕೋಟಿ ರೂಪಾಯಿ, ವೇತನ ಮತ್ತು ವಿದ್ಯುತ್ ಅನುದಾನ ಮೂಲಗಳಿಂದ 548 ಲಕ್ಷ ,ಎಸ್ ಎಫ್ ಸಿ ವಿಶೇಷ ಮತ್ತು ಇತರೆ ಮೂಲಗಳಿಂದ 69 ಲಕ್ಷ ರೂಪಾಯಿ ಆದಾಯ ನಿರೀಕ್ಷಿಸಲಾಗಿದೆ ಎಂದರು.

                                           

ಯೋಜನೆಗಳಿಗೆ ಖರ್ಚು-ವೆಚ್ಚ

---------------------------

             ಕೊಳವೆ ಬಾವಿ ಕೊರೆಸುವುದು, ಪೈಪ್ಲೈನ್ ನಿರ್ಮಾಣ, ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು 340 ಲಕ್ಷ ರೂಪಾಯಿ ವೆಚ್ಚ ತಗಲಬಹುದೆಂದು ನಿರೀಕ್ಷಿಸಲಾಗಿದೆ.

                ಉದ್ಯಾನವನ ನಿರ್ಮಿಸಲು 18 ಲಕ್ಷ ರೂಪಾಯಿ, ರುದ್ರಭೂಮಿ ಮತ್ತು ಖಬರಸ್ಥಾನಗಳ ಮೂಲಭೂತ ಅಭಿವೃದ್ಧಿಗಾಗಿ 80 ಲಕ್ಷ ರೂ, ಘನತ್ಯಜ ವಸ್ತು ವಿಲೇವಾರಿ ಘಟಕದ ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ 194 ಲಕ್ಷ, ದೀನ ದಯಾಳ್ ಅಂತ್ಯೋದಯ ಯೋಜನೆ ಅಡಿಯಲ್ಲಿ ಯುವಕ ಯುವತಿಯರಿಗೆ ತರಬೇತಿ ಆಯೋಜಿಸಲು ಹಾಗೂ ಉದ್ಯೋಗ ಮೇಳ ನಡೆಸಲು 50 ಲಕ್ಷ ರೂಪಾಯಿ,ಹುಳಿಯಾರು ಪಟ್ಟಣ ಪಂಚಾಯಿತಿ ಸಿಬ್ಬಂದಿಗಳ ವೇತನಕ್ಕೆ 1 ಕೋಟಿ 65 ಲಕ್ಷ ರೂಪಾಯಿ ಕಾಯ್ದಿರಿಸಲಾಗಿದೆ.

                       ಪಟ್ಟಣ ಪಂಚಾಯಿತಿ ಆಡಳಿತ ವೆಚ್ಚ ಮತ್ತು ಮಾಸಿಕ ಬಾಡಿಗೆ ಆಧಾರದ ಮೇಲೆ ವಾಹನ ಖರೀದಿ ಇನ್ನಿತರ ವೆಚ್ಚಗಳಿಗಾಗಿ 85.04 ಲಕ್ಷ ರೂಪಾಯಿ ಕಾಯ್ದಿರಿಸಲಾಗಿದೆ. ಹೊಸ ಕಚೇರಿ ಕಟ್ಟಡ ನಿರ್ಮಾಣ ಮಾಡಲು 200ಲಕ್ಷ ರೂ ಮೀಸಲಿಡಲಾಗಿದೆ.

                                 ಹುಳಿಯಾರು ಪಟ್ಟಣ ಪಂಚಾಯಿತಿಯ ನಾಗರೀಕರಿಗೆ ದಿನನಿತ್ಯದ ಅತ್ಯವಶ್ಯಕವಾಗಿರುವಂತಹ ಕುಡಿಯುವ ನೀರಿನ ವ್ಯವಸ್ಥೆ ರಸ್ತೆ ಮತ್ತು ಚರಂಡಿ ಬೀದಿ ದೀಪ, ಸ್ವಚ್ಛತೆ ನಿರ್ವಹಣೆ ಮೊದಲ ಆದ್ಯತೆ ನೀಡಲಾಗಿದೆ ಎಂದರು.


2025-26 ನೇ ಸಾಲಿನ ಪಟ್ಟಣ ಪಂಚಾಯಿತಿಯ ಆಯವ್ಯಯದ ಘೋಷ್ವಾರೆ ಹೀಗಿದೆ.

ಪ್ರಾರಂಭಿಕ ಶಿಲ್ಕು     ರೂ 8,32,62,244

ನೀರಿಕ್ಷಿತ ಆದಾಯ.  ರೂ.33,08,62,000

ನಿರೀಕ್ಷಿತ ಖರ್ಚು      ರೂ.41,00,75,729

ಆಖೈರು ಶಿಲ್ಕು        ರೂ. 40,48,515

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಕಾವ್ಯ ರಾಣಿ, ಸ್ಥಾಯಿ ಸಮಿತಿ ಅಧ್ಯಕ್ಷ ಚಂದ್ರಶೇಖರ ರಾವ್, ಸದಸ್ಯರುಗಳಾದ ಹೇಮಂತ ಕುಮಾರ್, ಬೀಬೀ ಫಾತಿಮಾ, ಶೃತಿ ಸನತ್ ,ಮಾಜಿ ಅಧ್ಯಕ್ಷ ಕಿರಣ್ ಕುಮಾರ್, ಪ್ರೀತಿ ರಾಘವೇಂದ್ರ, ರಾಜು ಬಡಗಿ, ದಯಾನಂದ್, ಮಂಜಾ ನಾಯ್ಕ, ದಸ್ತಗಿರಿ ಸಾಬ್, ಅಬೂಬಕ್ಕರ್ ಸಿದ್ದಿಕ್, ಮಹಮ್ಮದ್ ಜುಬೇರ್, ನಾಮಿನಿ ಸದಸ್ಯರಾದ ವೆಂಕಟೇಶ್ ಹಾಗೂ ಸೈಯದ್ ನೂರ್ ಫಕ್ರುದ್ದೀನ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗಭೂಷಣ್, ಕಂದಾಯಾಧಿಕಾರಿ ಪ್ರದೀಪ್ ಸೇರಿದಂತೆ ಸಿಬ್ಬಂದಿಗಳಿದ್ದರು.




ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...