ವಿಷಯಕ್ಕೆ ಹೋಗಿ

ಅಬಾಕಸ್ ಜ್ಞಾನ ವೃದ್ಧಿಗೆ ಸಹಕಾರಿ : ಬ್ರಹ್ಮಕುಮಾರಿ ಯೋಗಿನಿ ಗೀತಕ್ಕ

ಹುಳಿಯಾರು : ಅಬಾಕಸ್ ಪದ್ಧತಿಯ ಮೂಲಕ ಮಕ್ಕಳಿಗೆ ತರಬೇತಿ ನೀಡಿದಲ್ಲಿ ಮಕ್ಕಳ  ಕಲಿಕಾ ಸಾಮರ್ಥ್ಯ ಹೆಚ್ಚುವುದರ ಮೂಲಕ ಏಕಾಗ್ರತೆ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆಯಲ್ಲದೇ ಮಕ್ಕಳು ಹೆಚ್ಚು ಕ್ರಿಯಾಶೀಲರಾಗುತ್ತಾರೆ. ಇಂದೂ ಸಹ ಮುಂದುವರಿದ ದೇಶವಾದ ಚೀನಾ ಮತ್ತು ಅಮೆರಿಕ ದೇಶದಲ್ಲಿ ಇದು ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದನ್ನು ನಮ್ಮ ಹುಳಿಯಾರಿನಂತಹ ಗ್ರಾಮೀಣ ಭಾಗದಲ್ಲೂ ಸಹ ತರಬೇತಿ ಮೂಲಕ ಮಕ್ಕಳಿಗೆ ಅಬಾಕಸ್ ಜ್ಞಾನವನ್ನು SVB ಅಕಾಡೆಮಿಯಿಂದ ಯಶಸ್ವಿಯಾಗಿ ನೀಡುತ್ತಿರುವುದು ಸಂತೋಷದ ವಿಷಯ ಎಂದು ಹುಳಿಯಾರಿನ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸಂಚಾಲಕರಾದ ಬ್ರಹ್ಮಕುಮಾರಿ ಗೀತಕ್ಕ ಶ್ಲಾಘಿಸಿದರು.

ಪಟ್ಟಣದ ಎಸ್‌ವಿಬಿ ಅಕಾಡೆಮಿಯಿಂದ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪತ್ರ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

           ಎಸ್‌ವಿಬಿ ಅಕಾಡೆಮಿಯ ಮಾರ್ಗದರ್ಶಕರಾದ ಶ್ರುತಿರವರು ಎಲ್ಲಾ ಮಕ್ಕಳಿಗೂ ಅಬಕಸ್ ತರಬೇತಿ ಉತ್ತಮವಾಗಿ ನೀಡುತ್ತಿದ್ದು ಪಟ್ಟಣದ ರೀತಿಯಲ್ಲಿಯೇ ಹಳ್ಳಿಯ ಮಕ್ಕಳಿಗೂ ಸಹ ಉತ್ತಮ ಜ್ಞಾನ, ಶಿಕ್ಷಣ ನೀಡುತ್ತಿದ್ದಾರೆ ತಮ್ಮ ಮಕ್ಕಳ್ಳನ್ನು ಇಲ್ಲಿ ದಾಖಲಿಸಿಸುವ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣ ಪಡೆದುಕೊಳ್ಳಿ ಎಂದರು.

                    "ಶಿಕ್ಷಣವೇ ಸಂಪತ್ತು ಎಂದು ತಿಳಿಸಿದ ಅವರು ಜೀವನದಲ್ಲಿ ಸಂಸ್ಕಾರ- ಯೋಗಜ್ಞಾನ ವೃದ್ಧಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆ ಮಕ್ಕಳಿಗೆ ಜ್ಞಾನ ನೀಡಿದರು. 

             SVB ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಮಕ್ಕಳ ಪೋಷಕರಾದ ಅಶ್ವಿನಿ ಮಾತನಾಡಿ ಅಬಾಕಸ್ ಬೇರೆ ಊರುಗಳಲ್ಲಿ ನಡೆಯುತ್ತಿತ್ತು, ಇದೀಗ ಹುಳಿಯಾರಿನಲ್ಲಿ ಎಸ್‌ವಿಬಿ ಅಕಾಡೆಮಿಯಿಂದ ಮಕ್ಕಳಿಗೆ ಗುಣಾತ್ಮಕವಾಗಿ ತರಬೇತಿ ನೀಡುತ್ತಿರುವುದು ಸಂತೋಷದ ವಿಷಯ ಎಂದರು.

               ಮತ್ತೊಬ್ಬ ಪೋಷಕರಾದ ಶಿಕ್ಷಕಿ ಇಂದ್ರಮ್ಮ ಮಾತನಾಡಿ ನಮ್ಮ ಮಕ್ಕಳು ಅಬಾಕಸ್ ತರಬೇತಿ ಪಡೆಯುತ್ತಿರುವುದರಿಂದ ಮಕ್ಕಳ ಕಲಿಕೆ ಉತ್ತಮವಾಗುತ್ತಿದೆ ಎಂದು ತಿಳಿಸಿದರು.

                ತಿಪಟೂರು ಬೆಸ್ಕಾಂನ SO ಉಮೇಶ್ ನಾಯಕ್ ಮಾತನಾಡಿ ಎಸ್‌ವಿಬಿ ಅಕಾಡೆಮಿಯಲ್ಲಿ ಅಬಕಸ್ ತರಬೇತಿ ಹೊಂದಿದ ಮಕ್ಕಳಿಗೆ ರಾಜ್ಯ ರಾಷ್ಟ್ರಮಟ್ಟದಲ್ಲಿ ಹೆಚ್ಚು ಪ್ರಶಸ್ತಿಗಳು ಸಿಗಲಿ ಎಂದು ಶುಭ ಹಾರೈಸಿದರು.

                ನಿವೃತ್ತಿ ಮುಖ್ಯ ಶಿಕ್ಷಕಿಯಾದ ಪ್ರೇಮಲೀಲಾ ಮಾತನಾಡಿ SVB ಅಕಾಡೆಮಿಯು ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.

ಬಾಕಸ್‌ನಲ್ಲಿ ಲೆವೆಲ್ ಕಂಪ್ಲೀಟ್ ಆಗಿರುವ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.SVB ಅಕಾಡೆಮಿಯ  ಮಾರ್ಗದರ್ಶಕಿಯಾದ ಶೃತಿ  ಕಾರ್ಯಕ್ರಮ ನಿರೂಪಿಸಿ SVB ಅಕಾಡೆಮಿಯಲ್ಲಿ ದಿನಾಂಕ 10- 4 -2025 ರಿಂದ ಉಚಿತವಾಗಿ ಬೇಸಿಗೆ ಶಿಬಿರ ನಡೆಸಲಾಗುತ್ತಿದ್ದು ಆಸಕ್ತ ಮಕ್ಕಳು ಭಾಗವಹಿಸಬಹುದೆಂದು ತಿಳಿಸಿದರು. 

--------------------------------------------

ಹುಳಿಯಾರು ಪಟ್ಟಣದ ಎಸ್‌ವಿಬಿ ಅಕಾಡೆಮಿಯಲ್ಲಿ ಅಬಕಸ್ ಮತ್ತು ವೇದಿಕ್ ಮ್ಯಾಥ್ಸ್ ತರಗತಿ ಪ್ರಾರಂಭವಾಗಿದ್ದು ಆಸಕ್ತಿಯುಳ್ಳವರು SVB ಅಕಾಡೆಮಿ, 99643912529 ಸಂಪರ್ಕಿಸಬಹುದಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...

ಡಾ||ರಂಗನಾಥ್‌ಗೆ ಮುಖ್ಯಮಂತ್ರಿಗಳಿಂದ "ಶ್ರೇಷ್ಠ ವೈದ್ಯ ಪ್ರಶಸ್ತಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ 'ರಾಷ್ಟ್ರೀಯ ವೈದ್ಯರ ದಿನಾಚರಣೆ'ಯಲ್ಲಿ ಮುಖ್ಯಮಂತ್ರಿಗಳಿಂದ "ಶ್ರೇಷ್ಠ ವೈದ್ಯ ಪ್ರಶಸ್ತಿ"ಯನ್ನು ಡಾ||ರಂಗನಾಥ್ ರವರು ಪಡೆದರು. ಡಾ||ರಂಗನಾಥ್ ಅವರು ಸದ್ಯ ಹಾಸನ ಜಿಲ್ಲೆಯ ಕಣಕಟ್ಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಈ ಹಿಂದೆ ಹುಳಿಯಾರಿನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದರು. ಈ ಸಂದರ್ಭದಲ್ಲಿ ಹುಳಿಯಾರಿನ ಕಿರಣ್ ಕೇಶವಪುರ ಹಾಗೂ ಸ್ನೇಹಿತರು ಪಾಲ್ಗೊಂಡಿದ್ದರು.