ವಿಷಯಕ್ಕೆ ಹೋಗಿ

ಅಬಾಕಸ್ ಜ್ಞಾನ ವೃದ್ಧಿಗೆ ಸಹಕಾರಿ : ಬ್ರಹ್ಮಕುಮಾರಿ ಯೋಗಿನಿ ಗೀತಕ್ಕ

ಹುಳಿಯಾರು : ಅಬಾಕಸ್ ಪದ್ಧತಿಯ ಮೂಲಕ ಮಕ್ಕಳಿಗೆ ತರಬೇತಿ ನೀಡಿದಲ್ಲಿ ಮಕ್ಕಳ  ಕಲಿಕಾ ಸಾಮರ್ಥ್ಯ ಹೆಚ್ಚುವುದರ ಮೂಲಕ ಏಕಾಗ್ರತೆ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆಯಲ್ಲದೇ ಮಕ್ಕಳು ಹೆಚ್ಚು ಕ್ರಿಯಾಶೀಲರಾಗುತ್ತಾರೆ. ಇಂದೂ ಸಹ ಮುಂದುವರಿದ ದೇಶವಾದ ಚೀನಾ ಮತ್ತು ಅಮೆರಿಕ ದೇಶದಲ್ಲಿ ಇದು ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದನ್ನು ನಮ್ಮ ಹುಳಿಯಾರಿನಂತಹ ಗ್ರಾಮೀಣ ಭಾಗದಲ್ಲೂ ಸಹ ತರಬೇತಿ ಮೂಲಕ ಮಕ್ಕಳಿಗೆ ಅಬಾಕಸ್ ಜ್ಞಾನವನ್ನು SVB ಅಕಾಡೆಮಿಯಿಂದ ಯಶಸ್ವಿಯಾಗಿ ನೀಡುತ್ತಿರುವುದು ಸಂತೋಷದ ವಿಷಯ ಎಂದು ಹುಳಿಯಾರಿನ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಸಂಚಾಲಕರಾದ ಬ್ರಹ್ಮಕುಮಾರಿ ಗೀತಕ್ಕ ಶ್ಲಾಘಿಸಿದರು.

ಪಟ್ಟಣದ ಎಸ್‌ವಿಬಿ ಅಕಾಡೆಮಿಯಿಂದ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪತ್ರ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.

           ಎಸ್‌ವಿಬಿ ಅಕಾಡೆಮಿಯ ಮಾರ್ಗದರ್ಶಕರಾದ ಶ್ರುತಿರವರು ಎಲ್ಲಾ ಮಕ್ಕಳಿಗೂ ಅಬಕಸ್ ತರಬೇತಿ ಉತ್ತಮವಾಗಿ ನೀಡುತ್ತಿದ್ದು ಪಟ್ಟಣದ ರೀತಿಯಲ್ಲಿಯೇ ಹಳ್ಳಿಯ ಮಕ್ಕಳಿಗೂ ಸಹ ಉತ್ತಮ ಜ್ಞಾನ, ಶಿಕ್ಷಣ ನೀಡುತ್ತಿದ್ದಾರೆ ತಮ್ಮ ಮಕ್ಕಳ್ಳನ್ನು ಇಲ್ಲಿ ದಾಖಲಿಸಿಸುವ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣ ಪಡೆದುಕೊಳ್ಳಿ ಎಂದರು.

                    "ಶಿಕ್ಷಣವೇ ಸಂಪತ್ತು ಎಂದು ತಿಳಿಸಿದ ಅವರು ಜೀವನದಲ್ಲಿ ಸಂಸ್ಕಾರ- ಯೋಗಜ್ಞಾನ ವೃದ್ಧಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆ ಮಕ್ಕಳಿಗೆ ಜ್ಞಾನ ನೀಡಿದರು. 

             SVB ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ಮಕ್ಕಳ ಪೋಷಕರಾದ ಅಶ್ವಿನಿ ಮಾತನಾಡಿ ಅಬಾಕಸ್ ಬೇರೆ ಊರುಗಳಲ್ಲಿ ನಡೆಯುತ್ತಿತ್ತು, ಇದೀಗ ಹುಳಿಯಾರಿನಲ್ಲಿ ಎಸ್‌ವಿಬಿ ಅಕಾಡೆಮಿಯಿಂದ ಮಕ್ಕಳಿಗೆ ಗುಣಾತ್ಮಕವಾಗಿ ತರಬೇತಿ ನೀಡುತ್ತಿರುವುದು ಸಂತೋಷದ ವಿಷಯ ಎಂದರು.

               ಮತ್ತೊಬ್ಬ ಪೋಷಕರಾದ ಶಿಕ್ಷಕಿ ಇಂದ್ರಮ್ಮ ಮಾತನಾಡಿ ನಮ್ಮ ಮಕ್ಕಳು ಅಬಾಕಸ್ ತರಬೇತಿ ಪಡೆಯುತ್ತಿರುವುದರಿಂದ ಮಕ್ಕಳ ಕಲಿಕೆ ಉತ್ತಮವಾಗುತ್ತಿದೆ ಎಂದು ತಿಳಿಸಿದರು.

                ತಿಪಟೂರು ಬೆಸ್ಕಾಂನ SO ಉಮೇಶ್ ನಾಯಕ್ ಮಾತನಾಡಿ ಎಸ್‌ವಿಬಿ ಅಕಾಡೆಮಿಯಲ್ಲಿ ಅಬಕಸ್ ತರಬೇತಿ ಹೊಂದಿದ ಮಕ್ಕಳಿಗೆ ರಾಜ್ಯ ರಾಷ್ಟ್ರಮಟ್ಟದಲ್ಲಿ ಹೆಚ್ಚು ಪ್ರಶಸ್ತಿಗಳು ಸಿಗಲಿ ಎಂದು ಶುಭ ಹಾರೈಸಿದರು.

                ನಿವೃತ್ತಿ ಮುಖ್ಯ ಶಿಕ್ಷಕಿಯಾದ ಪ್ರೇಮಲೀಲಾ ಮಾತನಾಡಿ SVB ಅಕಾಡೆಮಿಯು ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.

ಬಾಕಸ್‌ನಲ್ಲಿ ಲೆವೆಲ್ ಕಂಪ್ಲೀಟ್ ಆಗಿರುವ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.SVB ಅಕಾಡೆಮಿಯ  ಮಾರ್ಗದರ್ಶಕಿಯಾದ ಶೃತಿ  ಕಾರ್ಯಕ್ರಮ ನಿರೂಪಿಸಿ SVB ಅಕಾಡೆಮಿಯಲ್ಲಿ ದಿನಾಂಕ 10- 4 -2025 ರಿಂದ ಉಚಿತವಾಗಿ ಬೇಸಿಗೆ ಶಿಬಿರ ನಡೆಸಲಾಗುತ್ತಿದ್ದು ಆಸಕ್ತ ಮಕ್ಕಳು ಭಾಗವಹಿಸಬಹುದೆಂದು ತಿಳಿಸಿದರು. 

--------------------------------------------

ಹುಳಿಯಾರು ಪಟ್ಟಣದ ಎಸ್‌ವಿಬಿ ಅಕಾಡೆಮಿಯಲ್ಲಿ ಅಬಕಸ್ ಮತ್ತು ವೇದಿಕ್ ಮ್ಯಾಥ್ಸ್ ತರಗತಿ ಪ್ರಾರಂಭವಾಗಿದ್ದು ಆಸಕ್ತಿಯುಳ್ಳವರು SVB ಅಕಾಡೆಮಿ, 99643912529 ಸಂಪರ್ಕಿಸಬಹುದಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...