ಹುಳಿಯಾರಿನ ಟೆಲಿಫೋನ್ ಎಕ್ಸ್ಚೇಂಜ್ ಪಕ್ಕದಲ್ಲಿ ಜಿಲ್ಲಾಡಳಿತ ಮತ್ತು ಪಟ್ಟಣ ಪಂಚಾಯಿತಿ ವತಿಯಿಂದ ಆರಂಭಗೊಂಡಿರುವ ಇಂದಿರಾ ಕ್ಯಾಂಟೀನ್ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹುಳಿಯಾರು ಅಭಿವೃದ್ಧಿ ಪಥದಲ್ಲಿದ್ದು ಸಾರ್ವಜನಿಕರಿಗೆ ಅನುಕೂಲವಾಗುವ ಎಲ್ಲಾ ಸೌಲಭ್ಯಗಳು ಇದ್ದು, ತಾಲೂಕು ಆಗುವ ಎಲ್ಲಾ ಅರ್ಹತೆ ಹೊಂದಿದೆ. ಹುಳಿಯಾರನ್ನು ತಾಲೂಕಾಗಿ ಮಾಡಿದಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಸಾಧ್ಯವಾಗಲಿದ್ದು ಹುಳಿಯಾರನ್ನು ತಾಲೂಕು ಮಾಡುವಂತೆ ಗೃಹ ಸಚಿವರಲ್ಲಿ ಈಗಾಗಲೇ ನಾನು ಮನವಿ ಮಾಡಿದ್ದೇನೆ ಎಂದರು.
ಪಟ್ಟಣದಲ್ಲಿ ಎಂಟು ಕೋಟಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ಈ ಭಾಗದಲ್ಲಿ ಸಾಕಷ್ಟು ಅಗ್ನಿ ಅವಘಡಗಳು ಸಂಭವಿಸುತ್ತಿದ್ದು ಫೈರ್ ಸ್ಟೇಷನ್ ಜರೂರಾಗಿ ಆರಂಭಿಸುವ ಅವಶ್ಯಕತೆ ಇದೆ.ಈ ಬಗ್ಗೆ ಗೃಹ ಮಂತ್ರಿಗಳು ಗಮನಹರಿಸಬೇಕು ಎಂದರು. ಹೊಯ್ಸಳಕಟ್ಟೆ ಭಾಗದಲ್ಲಿ ಪೊಲೀಸ್ ಔಟ್ ಪೋಸ್ಟ್ ಕೊಟ್ಟಲ್ಲಿ ಗಡಿಭಾಗದ ಹಳ್ಳಿಯವರಿಗೆ ಅನುಕೂಲವಾಗುತ್ತದೆ ಎಂದರು.
ಸಮಾರಂಭದಲ್ಲಿ ಗೃಹ ಸಚಿವ ಡಾ|| ಜಿ.ಪರಮೇಶ್ವರ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಮುರಳೀಧರ ಹಾಲಪ್ಪ, ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್, ಹುಳಿಯಾರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ,ಕೆಂಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್,ಹುಳಿಯಾರು ಪಟ್ಟಣ ಪಂಚಾಯ್ತಿ ಸದಸ್ಯರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ