ವಿಷಯಕ್ಕೆ ಹೋಗಿ

ಕಡೆಗೂ ಪತ್ತೆಯಾದ ಬಾಡಿಗೆ ವಸೂಲಾತಿಯ ಡಿಸಿಬಿ ರಿಜಿಸ್ಟರ್

ಹುಳಿಯಾರು : ಹುಳಿಯಾರು ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಸೇರಿದ ಮಳಿಗೆಗಳ ಬಾಡಿಗೆ ವಸುಲಾತಿಯ ಜಮಾ ಖರ್ಚಿನ ಪುಸ್ತಕ ಅಂದರೆ ಬೇಡಿಕೆ- ವಸೂಲಿ- ಬಾಕಿ ವಹಿ ನಮೂದಿಸುವ ಡಿಸಿಬಿ ರಿಜಿಸ್ಟರ್ ಕಡೆಗೂ ಪತ್ತೆಯಾಗಿದೆ.

             ಹೌದು ಇತ್ತೀಚಿಗಷ್ಟೇ ಕೆಲವೊಂದು ಮಳಿಗೆಗಳಿಗೆ ಬಾಡಿಗೆ ಬಾಕಿ ಇದೆ ಎಂದು ಪಟ್ಟಣ ಪಂಚಾಯಿತಿ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ನಾವುಗಳು ಬಾಡಿಗೆ ಪಾವತಿಸಿದ್ದರು ಸಹ ಜಮಾ ಖರ್ಚು ಮಾಡಿಲ್ಲ . ಪಂಚಾಯಿತಿಯವರು ನಿರ್ವಹಣೆ ಮಾಡಬೇಕಾಗಿರುವ ಡಿಸಿಬಿ ರಿಜಿಸ್ಟರ್ ತೋರಿಸಿ, ಅದರಲ್ಲಿ ಬಾಡಿಗೆ ಬಾಕಿ ಇದ್ದಲ್ಲಿ ಕಟ್ಟುತ್ತೇವೆ ಎಂದು ಮಳಿಗೆದಾರರು ಡಿಸಿಬಿ ರಿಜಿಸ್ಟರ್ ತೋರಿಸಿಲೇಬೇಕು ಎಂದು ಪಟ್ಟು ಹಿಡಿದಿದ್ದರು.

ನಾವು ನಿರ್ವಹಿಸುವ ಡಿಸಿಬಿ ಬುಕ್ ಇದೇ ಎಂದು ತೋರಿಸಿದ್ದ ನೋಟ್‌ ಪುಸ್ತ

             ಮಳಿಗೆ ಬಾಡಿಗೆ ವಸೂಲಾತಿ ಬಗ್ಗೆ ಅಯಾ ತಿಂಗಳು ಜಮಾ ಖರ್ಚು ಮಾಡಬೇಕಾಗಿದ್ದ ಅಧಿಕೃತ ಡಿಸಿಬಿ ರಿಜಿಸ್ಟರ್ ಆಡಿಟ್‌ಗೆ ಕೊಟ್ಟಿದ್ದೇವೆಂದು ಹೇಳಿ  ಬದಲಿಗೆ ಬಿಲ್ ಕಲೆಕ್ಟರ್ ಲಾಂಗ್ ನೋಟ್ ಬುಕ್ ನಲ್ಲಿ ಬರೆದುಕೊಂಡು ಜಮ ಖರ್ಚು ನಿರ್ವಹಿಸುತ್ತಿದ್ದ ಬಗ್ಗೆ ಬಾಡಿಗೆದಾರರು ಪ್ರಶ್ನಿಸಿದ್ದ ಸಂದರ್ಭದಲ್ಲಿ ಇದೇ ರೀತಿಯ ಪುಸ್ತಕವನ್ನು ನಾವು ನಿರ್ವಹಿಸಿಕೊಂಡು ಬಂದಿದ್ದು ಇದರ ಬದಲು ಬೇರೆ ಯಾವುದೇ ಪುಸ್ತಕ ನಮ್ಮಲ್ಲಿಲ್ಲ. ನೀವು ಬಾಡಿಗೆ ಪಾವತಿಸಿದ್ದಲ್ಲಿ ಇದರಲ್ಲಿ ಜಮಾ ಬರೆದುಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದರು.

              ಈ ಬಗ್ಗೆ ಕಂದಾಯ ಅಧಿಕಾರಿಯ ಪ್ರಶ್ನೆಸಿದರೆ ಡಿಸಿಬಿ ರಿಜಿಸ್ಟರ್ ನಾವು ನಿರ್ವಹಿಸಬೇಕಿದ್ದು ಸದ್ಯಕ್ಕೆ ಪಂಚಾಯಿತಿಯಲ್ಲಿ ಈ ಕಡತ ಏನಾಗಿದೆ ಎಂದು ತಿಳಿಯುತ್ತಿಲ್ಲ ಎಂದಿದ್ದರು. ಈ ಬಗ್ಗೆ ನಾವು ಸಹ ಮುಖ್ಯ ಅಧಿಕಾರಿಗಳಲ್ಲಿ ಪ್ರಶ್ನಿಸಿದ್ದೇವೆ ಎಂದು ಉತ್ತರಿಸಿದ್ದರು.ಇದನ್ನು ಪ್ರಶ್ನಿಸಿ ಬಾಡಿಗೆದಾರರು ಅರ್ಜಿ ಸಲ್ಲಿಸಿ ದೂರು ನೀಡಿದ್ದರು.ಸದರಿ ವಿಚಾರ ಪತ್ರಿಕೆಯಲ್ಲಿ ಪ್ರಚಾರಪಡೆದ ನಂತರವಷ್ಟೆ ಪುಸ್ತಕ ಸಿಕ್ಕಿದೆ ಎಂದು ತಂದಿದ್ದಾರೆ.

ಪತ್ರಿಕೆಯಲ್ಲಿ ಸುದ್ದಿ ಬಂದ ನಂತರ ಪತ್ತೆಯಾದ ಡಿಸಿಬಿ ಪುಸ್ತಕ

                       ಹಾಲಿ ಡಿಸಿಬಿ ರಿಜಿಸ್ಟರ್ ಗಮನಿಸಿದಲ್ಲಿ ಪರಿಪೂರ್ಣವಾಗಿ ನಿರ್ವಹಿಸದಿರುವುದು ಕಂಡುಬರುತ್ತದೆ. ಸದ್ಯಕ್ಕೆ ಸಿಕ್ಕಿರುವ ಡಿಸಿಬಿ ರಿಜಿಸ್ಟರ್ ಅಲ್ಲಿ 2019 ರಿಂದ 22 ರವರೆಗೆ ಮಾತ್ರ ಜಮಾಖರ್ಚು ನಮೂದಾಗಿದೆ. 22- 23, 23- 24,24- 25 ನೇ ಸಾಲಿನ ಬೇಡಿಕೆ /ವಸೂಲಿ ಬಗ್ಗೆ ಏನ್ನೊಂದು ನಮೂದು ಮಾಡಿಲ್ಲ.

             ಪ್ರಸಕ್ತ ಮಳಿಗೆಗಳ ಬಾಡಿಗೆ/ ಬೇಡಿಕೆ/ ವಸೂಲಾತಿಯನ್ನು ಸರಿಯಾಗಿ ನಿರ್ವಹಿಸಿಲ್ಲ. ಚಾಲ್ತಿ ಸಾಲಿನವರೆಗೆ ಜಮಾ ಖರ್ಚಿನ ಮಾಡದೆ,ಪಾವತಿ ಮಾಡಿರುವ ಹಣವನ್ನು ಜಮಾ ಮಾಡದೆ ನೀವು ರಸೀತಿ ತಂದರಷ್ಟೆ ಜಮಾ ಮಾಡುತ್ತೇವೆ ಎನ್ನುತ್ತಾರೆ. 

          ಪ್ರಸ್ತುತ ವಸೂಲಿ ಮಾಡುತ್ತಿರುವ ಮಳಿಗೆಗಳ ಬಾಡಿಗೆ ದರ ನಿಗದಿಪಡಿಸಿದ ಬಗ್ಗೆ ಯಾವುದೇ ದಾಖಲೆಗಳಿಲ್ಲ. ಇಲ್ಲವೇ ಪ್ರಸ್ತುತ ವಸೂಲಿಯಾಗುತ್ತಿರುವ ಮಳಿಗೆ ಬಾಡಿಗೆ ಬಗ್ಗೆ ಮೇಲಾಧಿಕಾರಿಗಳು ಸಹ ಅನುಮೋದಿಸಿಲ್ಲ.

                 ಸದ್ಯ ಈಗಲಾದರೂ ಪಟ್ಟಣ ಪಂಚಾಯಿತಿ ಕಂದಾಯ ಇಲಾಖೆಯ ಅಧಿಕಾರಿಗಳು ಡಿಸಿಬಿ ರಿಜಿಸ್ಟರ್ ಅನ್ನು ವ್ಯವಸ್ಥಿತವಾಗಿ ನಿರ್ವಹಿಸಿ ಆಯಾ ತಿಂಗಳು ಜಮಾ ಖರ್ಚನ್ನು ನಮೂದಿಸಿದಲ್ಲಿ ಪ್ರತಿಯೊಬ್ಬ ಬಾಡಿಗೆದಾರರ ಬಾಡಿಗೆ ಎಷ್ಟಿದೆ ಎಂದು ತಿಳಿಯುತ್ತದೆ ಇದನ್ನು ಆಧರಿಸಿ ವಸೂಲಾತಿ ಮಾಡುವುದರ ಮೂಲಕ ಪಂಚಾಯಿತಿಯ ಬರಬೇಕಾದ ಹಣವನ್ನು ಕ್ರೂಢೀಕರಿಸಿಕೊಳ್ಳಬಹುದಾಗಿದೆ. ಬಾಡಿಗೆ ವಸೂಲಾತಿ ಕುಂಟಿತವಾಗಿದ್ದಲ್ಲಿ ಕ್ರಮವಹಿಸಲು ಅನುಕೂಲವಾಗುತ್ತದೆ.

                  ಒಟ್ಟಾರೆ ಡಿಸಿಬಿ ವಹಿಯಲ್ಲಿ ಸರಿಯಾದ ಬಾಕಿ ವಿವರವನ್ನು ದಾಖಲಿಸದಿರುವುದರಿಂದ  ಸಾಕಷ್ಟು ನ್ಯೂನತೆಗಳಿದೆ. ಇದರಿಂದಾಗಿ ಸ್ಥಳೀಯ ಸಂಸ್ಥೆಗಳಿಗೆ ಆದಾಯ ಮೂಲವಾಗಬೇಕಾದ ವಾಣಿಜ್ಯ ಸಂಕೀರ್ಣಗಳು,ಹೊರೆಯಾಗಿ ಪರಿಣಮಿಸುವಂತಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...