ಕೇಂದ್ರ ಸರ್ಕಾರದ ಯೋಜನೆಗಳ ಅರಿವಿಗೆ ಜನ ಸುರಕ್ಷಾ ಶಿಬಿರ: ಕುಮಾರಸ್ವಾಮಿ
---------------
ಬೋರನಕಣಿವೆ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ವತಿಯಿಂದ ಶಿಬಿರ ಆಯೋಜನೆ
--------------
ಹುಳಿಯಾರು : ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ದೇಶದ ಮೂಲೆ ಮೂಲೆಗಳಲ್ಲಿರುವ ಜನರಿಗೆ ಅರಿವು ಮೂಡಿಸುವುದು ಜನ ಸುರಕ್ಷಾ ಶಿಬಿರದ ಮುಖ್ಯ ಉದ್ದೇಶವಾಗಿದೆ ಎಂದು ಚಿಕ್ಕನಾಯಕನಹಳ್ಳಿಯ ಆರ್ಥಿಕ ಸಾಕ್ಷರತಾ ಸಲಹೆಗಾರರಾದ ಆರ್.ಎಂ. ಕುಮಾರಸ್ವಾಮಿ ತಿಳಿಸಿದರು.
ಅವರು ಬೋರನಕಣಿವೆಯ ಅಂಗನವಾಡಿ ಮತ್ತು ಹೊಯ್ಸಳಕಟ್ಟೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯ ಸಹಯೋಗದಲ್ಲಿ ಬೋರನಕಣಿವೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಜನ ಸುರಕ್ಷಾ ಶಿಬಿರದಲ್ಲಿ ಮಾತನಾಡಿದರು.
ಜನಧನ ಖಾತೆ ತೆರೆಯಲು ಪ್ರೋತ್ಸಾಹ : ಹೊಯ್ಸಳಕಟ್ಟೆ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಸಹಾಯಕ ವ್ಯವಸ್ಥಾಪಕರಾದ ತಿರುಮಲೇಶ್ ಮಾತನಾಡಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಜನಧನ ಖಾತೆಯನ್ನು ಎಲ್ಲಾ ಬ್ಯಾಂಕ್ಗಳಲ್ಲಿಯೂ ಹಣದ ಅವಶ್ಯಕತೆ ಇಲ್ಲದೆ ತೆರೆಯಬಹುದಾಗಿದೆ ಎಂದರು. ಜನರು ಕೇವಲ ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಒಂದು ಫೋಟೋ ನೀಡಿ ಶೂನ್ಯ ಬ್ಯಾಲೆನ್ಸ್ ಖಾತೆ ತೆರೆದು ಇದರ ಪ್ರಯೋಜನ ಪಡೆಯಬೇಕೆಂದು ಕರೆ ನೀಡಿದರು.
ವಿಮಾ ಮತ್ತು ಪಿಂಚಣಿ ಯೋಜನೆಗಳ ಸದ್ಬಳಕೆಗೆ ಸಲಹೆ ; ಅಂಗನವಾಡಿ ಸೂಪರ್ವೈಸರ್ ಆರ್. ಲಕ್ಷ್ಮಮ್ಮ ಮಾತನಾಡಿ ಪ್ರಧಾನಮಂತ್ರಿ ಸುರಕ್ಷಾ, ಜೀವನ ಜ್ಯೋತಿ ವಿಮಾ ಯೋಜನೆ, ಮತ್ತು ಅಟಲ್ ಪಿಂಚಣಿ ಯೋಜನೆಗಳಂತಹ ಪ್ರಮುಖ ಕಾರ್ಯಕ್ರಮಗಳನ್ನು ಬ್ಯಾಂಕ್ ಮೂಲಕ ನೋಂದಾಯಿಸಿಕೊಂಡು ಅವುಗಳ ಪ್ರಯೋಜನ ಪಡೆಯಬೇಕು ಎಂದು ಸಲಹೆ ನೀಡಿದರು.
ಈ ಶಿಬಿರದಲ್ಲಿ ಬೋರನಕಣಿವೆ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಭಾರತಿ ಸೇರಿದಂತೆ ದಸೂಡಿ ವೃತ್ತಕ್ಕೆ ಸಂಬಂಧಿಸಿದ ಸುತ್ತಮುತ್ತಲಿನ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ವಸಹಾಯ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಭಾಗವಹಿಸಿ ಶಿಬಿರ ಯಶಸ್ವಿಗೊಳಿಸಿದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ