ಬಗರ್ ಹುಕುಂ ಸಮಿತಿ ಸಭೆಯಲ್ಲಿ ಹಲವು ಅರ್ಜಿಗಳ ಇತ್ಯರ್ಥ: ರೈತರಿಗೆ ದಾಖಲೆ ಒದಗಿಸಲು ಸೂಚನೆ
ಚಿಕ್ಕನಾಯಕನಹಳ್ಳಿ: ಇಲ್ಲಿನ ತಾಲ್ಲೂಕು ಕಚೇರಿ ನ್ಯಾಯಾಲಯದ ಸಭಾಂಗಣದಲ್ಲಿ ಶಾಸಕ ಸಿ.ಬಿ. ಸುರೇಶ್ ಬಾಬು ಅವರ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಮಿತಿ ಸಭೆ ನಡೆಯಿತು.ಈ ಸಭೆಯಲ್ಲಿ, ತಾಲ್ಲೂಕಿನಾದ್ಯಂತ ಬಗರ್ ಹುಕುಂ ತಂತ್ರಾಂಶದಲ್ಲಿ ದಾಖಲಾಗಿದ್ದ ನಮೂನೆ 50, 53, ಮತ್ತು 57ರ ಅರ್ಜಿಗಳನ್ನು ಪರಿಶೀಲಿಸಲಾಯಿತು.ವಿವಿಧ ಕಾರಣಗಳಿಂದ ಅನರ್ಹಗೊಂಡಿದ್ದ ಅರ್ಜಿಗಳನ್ನು ವಜಾ ಮಾಡಿದ ಸಮಿತಿಯು, ಅರ್ಹ ಅರ್ಜಿಗಳ ಪೈಕಿ 48 ಸರ್ಕಲ್ಗಳಿಂದ ಆನ್ಲೈನ್ ಮೂಲಕ ದೃಢೀಕರಿಸಲಾದ ಹಲವು ಅರ್ಜಿಗಳಿಗೆ ಸಾಗುವಳಿ ಚೀಟಿ ನೀಡಲು ಅನುಮೋದನೆ ನೀಡಿತು. ಅಲ್ಲದೆ, ಸಾಗುವಳಿಗೆ ಅರ್ಜಿ ಸಲ್ಲಿಸಿರುವ ರೈತರು ತಮ್ಮ ಸೂಕ್ತ ದಾಖಲೆಗಳನ್ನು ವಿಲೇಜ್ ಅಕೌಂಟೆಂಟ್ಗಳಿಗೆ ಒದಗಿಸಬೇಕು ಎಂದು ಶಾಸಕರು ಸೂಚಿಸಿದರು.ಮುಂದಿನ ಬಗರ್ ಹುಕುಂ ಸಮಿತಿ ಸಭೆಯನ್ನು ಸೆಪ್ಟೆಂಬರ್ 30, 2025ರಂದು ನಡೆಸಲು ತೀರ್ಮಾನಿಸಲಾಯಿತು. ಈ ಸಭೆಯಲ್ಲಿ, 48 ಸರ್ಕಲ್ಗಳಿಗೆ ಹೊಸ ಗುರಿ (ಟಾರ್ಗೆಟ್) ನಿಗದಿಪಡಿಸಲಾಯಿತು.ಸಭೆಯಲ್ಲಿ ತಹಶೀಲ್ದಾರ್ ಕೆ. ಪುರಂದರ, ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು, ಮತ್ತು ಅರಣ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ