ಚಿಕ್ಕನಾಯಕನಹಳ್ಳಿ :ಚಿಕ್ಕನಾಯಕನಹಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ, ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ಸುಧಾರಣೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಹಾಗೂ ಸಾರ್ವಜನಿಕ ಆಸ್ಪತ್ರೆ ಸಹಯೋಗದೊಂದಿಗೆ "ಸ್ವಾಸ್ಥ್ಯ ನಾರಿ, ಸಶಕ್ತ ಪರಿವಾರ" ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಸಿ.ವಿ. ವೆಂಕಟರಾಮಯ್ಯ ಅವರು ಪೌಷ್ಟಿಕ ಆಹಾರದ ಮಹತ್ವವನ್ನು ತಿಳಿಸಿದರು.
ಕಣ್ಣಿನ ವೈದ್ಯರಾದ ಡಾ. ಸಲ್ಮಾ ಅವರು ಮಹಿಳೆಯರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಮೂಲಕ ಸಾರ್ಥಕ ಬದುಕು ನಡೆಸಬಹುದು ಎಂದು ತಿಳಿಸಿದರು.
ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಚೇತನ್ ಅವರು 'ಸ್ವಾಸ್ಥ್ಯ ನಾರಿ, ಸಶಕ್ತ ಪರಿವಾರ'ದ ಪರಿಕಲ್ಪನೆಯ ಬಗ್ಗೆ ವಿವರಿಸಿದರು. ಕುಟುಂಬದ ಎಲ್ಲ ಸದಸ್ಯರ ಸಹಕಾರ, ಮಹಿಳಾ ಮತ್ತು ಪುರುಷರ ಸಮಾನ ಸಹಭಾಗಿತ್ವ, ಸಮತೋಲನ ಆಹಾರದ ಸದ್ಬಳಕೆ, ತಾಯಿ ಮತ್ತು ಮಗುವಿನ ಆರೈಕೆ ಹಾಗೂ ಹದಿಹರೆಯದವರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಕುರಿತು ಆರೋಗ್ಯ ಶಿಕ್ಷಣ ನೀಡಿದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ