ಚಿಕ್ಕನಾಯಕನಹಳ್ಳಿಯ ಆರ್ಥಿಕ ಸಲಹಾ ಕೇಂದ್ರ ಹಾಗೂ ತಿಮ್ಮನಹಳ್ಳಿ ಗ್ರಾಮ ಪಂಚಾಯಿತಿ ಮಟ್ಟದ ಸಂಜೀವಿನಿ ಒಕ್ಕೂಟವು ಜಂಟಿಯಾಗಿ ಆಯೋಜಿಸಿದ್ದ ಜನ ಸುರಕ್ಷಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈ ಸಾಲವನ್ನು ವಿಕಾಸ್ ಎನ್.ಜಿ.ಓ. ಮೂಲಕ ಒದಗಿಸಲಾಗುವುದು ಎಂದು ಅವರು ಹೇಳಿದರು.
ಆರ್ಥಿಕ ಸಾಕ್ಷರತಾ ಸಲಹೆಗಾರ ಆರ್. ಎಂ. ಕುಮಾರಸ್ವಾಮಿ ಅವರು ಸೈಬರ್ ಅಪರಾಧಗಳ ಬಗ್ಗೆ ಎಚ್ಚರಿಕೆ ನೀಡಿದರು. ಬ್ಯಾಂಕ್ ಗ್ರಾಹಕರು ಓಟಿಪಿ, ಆಧಾರ್ ಸಂಖ್ಯೆ, ಮೊಬೈಲ್ ಫೋನ್ ವಿವರಗಳನ್ನು ಯಾರಿಗೂ ನೀಡಬಾರದು ಮತ್ತು ಅತಿಯಾದ ಹಣದ ಆಮಿಷಗಳಿಗೆ ಬಲಿಯಾಗಬಾರದು ಎಂದು ಅವರು ಹೇಳಿದರು.
ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಶೇಖರಪ್ಪ ಅವರು ಕೇಂದ್ರ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಲು ಬ್ಯಾಂಕ್ ಮೂಲಕ ನೋಂದಾಯಿಸಿಕೊಳ್ಳುವಂತೆ ಕರೆ ನೀಡಿದರು.
ಈ ಶಿಬಿರದಲ್ಲಿ ಸತ್ಯ ಸಂಜೀವಿನಿ ಒಕ್ಕೂಟದ ಎಂ. ಬಿ. ಕೆ. ಉಮಾದೇವಿ, ಎಲ್. ಸಿ. ಆರ್. ಪಿ. ನಾಗರತ್ನ ಮತ್ತು ಅನಸೂಯ, ಪಂಚಾಯಿತಿ ಸಿಬ್ಬಂದಿಗಳಾದ ರಮೇಶ್ ಮತ್ತು ದೇವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಸ್ವಸಹಾಯ, ಸ್ತ್ರೀಶಕ್ತಿ ಮತ್ತು ಸತ್ಯ ಸಂಜೀವಿನಿ ಒಕ್ಕೂಟದ ಸದಸ್ಯರು ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸಿದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ