ಮಲ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟ ಮತ್ತು ಚಿಕ್ಕನಾಯಕನಹಳ್ಳಿ ಆರ್ಥಿಕ ಸಾಕ್ಷರತಾ ಕೇಂದ್ರ ಜಂಟಿಯಾಗಿ ಮಲ್ಲಿಗೆರೆಯಲ್ಲಿ ಆಯೋಜಿಸಿದ್ದ ಜನ ಸುರಕ್ಷಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಕುರಿತು ಮಾಹಿತಿ : ಶಿಬಿರದಲ್ಲಿ ಆರ್ಥಿಕ ಸಾಕ್ಷರತಾ ಸಲಹೆಗಾರ ಆರ್.ಎಂ. ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಈ ಯೋಜನೆಯಡಿ ವಾರ್ಷಿಕ ಕೇವಲ 20 ರೂಪಾಯಿ ಪಾವತಿಸುವ ಮೂಲಕ ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು. ವಾಹನ ಅಪಘಾತ, ಸಿಡಿಲು, ಬೆಂಕಿ, ವಿದ್ಯುತ್, ಹಾವಿನ ಕಡಿತ, ಅಥವಾ ಇತರ ನೈಸರ್ಗಿಕ ವಿಕೋಪಗಳಿಂದ ಆಕಸ್ಮಿಕ ಮರಣ ಸಂಭವಿಸಿದರೆ, ನಾಮ ನಿರ್ದೇಶಿತರಿಗೆ 2 ಲಕ್ಷ ರೂಪಾಯಿ ವಿಮಾ ಮೊತ್ತ ದೊರೆಯುತ್ತದೆ. 18 ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.
ಸಂಜೀವಿನಿ ಒಕ್ಕೂಟದಿಂದ ಮಹಿಳೆಯರಿಗೆ ಸಹಕಾರ : ಸಂಜೀವಿನಿ ಒಕ್ಕೂಟದ ಸಂಪನ್ಮೂಲ ವ್ಯಕ್ತಿ ರೇಣುಕಮ್ಮ ಬಂದ್ರೆಹಳ್ಳಿ ಮಾತನಾಡಿ, ಸಂಜೀವಿನಿ ಒಕ್ಕೂಟವು ಗ್ರಾಮೀಣ ಮಹಿಳೆಯರಿಗೆ ಉದ್ಯಮಗಳನ್ನು ಪ್ರಾರಂಭಿಸಲು ಸಾಲ ಸೌಲಭ್ಯ, ತರಬೇತಿ, ಮಾರ್ಗದರ್ಶನ ಮತ್ತು ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸುತ್ತದೆ. ಈ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಪ್ರೋತ್ಸಾಹ ನೀಡುತ್ತದೆ ಎಂದು ಹೇಳಿದರು.
ಶಿಬಿರದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ನ ಬ್ಯಾಂಕ್ ಮಿತ್ರ ಸುದರ್ಶನ್ ಮತ್ತು ರಾಘವೇಂದ್ರ ಚಾರ್, ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಕಮಲಮ್ಮ, ಕಾರ್ಯದರ್ಶಿ ವೀಣಾ, ಖಜಾಂಚಿ ಶೀಲಾ, ಎಂಬಿಕೆ ಪುಷ್ಪ, ಎಲ್ಸಿಆರ್ಪಿ ಅನಿತಾ, ಕೃಷಿ ಸಖಿ ಲಾವಣ್ಯ, ಪಶುಸಖಿ ಕವಿತಾ, ಮತ್ತು ಮಲ್ಲಿಗೆರೆ ಕೃಷಿಕ ಡೈಮಂಡ್ ರೂಪ ಸೇರಿದಂತೆ ಹಲವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಜೀವಿನಿ ಒಕ್ಕೂಟದ ಸದಸ್ಯರು, ಸ್ವಸಹಾಯ ಸಂಘಗಳ ಸದಸ್ಯರು ಮತ್ತು ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ