ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಅಕ್ಟೋಬರ್, 2025 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಕಸ ವಿಲೇವಾರಿ, ಶೌಚಾಲಯಗಳ ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ತಾಲೂಕು ಆದಾಗ ಇನ್ನಷ್ಟು ಕಷ್ಟ - ಯಳನಾಡು ಸ್ವಾಮೀಜಿ ಎಚ್ಚರಿಕೆ

ಕಸ ವಿಲೇವಾರಿ, ಶೌಚಾಲಯಗಳ ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ತಾಲೂಕು ಆದಾಗ ಇನ್ನಷ್ಟು ಕಷ್ಟ - ಯಳನಾಡು ಸ್ವಾಮೀಜಿ ಎಚ್ಚರಿಕೆ ಹುಳಿಯಾರು : ಹುಳಿಯಾರು ಪಟ್ಟಣ ಪಂಚಾಯಿತಿ ಮುಂದೆ ರಾಜ್ಯ ರೈತ ಸಂಘದ ಅಧ್ಯಕ್ಷ ಚಂದ್ರಪ್ಪ ನೇತೃತ್ವದಲ್ಲಿ 23 ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿಗೆ ಯಳನಾಡು-ಅರಸೀಕೆರೆ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಜ್ಞಾನಪ್ರಭು ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮಿಜಿಗಳು ಭೇಟಿ ನೀಡಿ ಬೆಂಬಲ ಸೂಚಿಸಿ, ಆಡಳಿತದ ನಿರ್ಲಕ್ಷ್ಯದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಹುಳಿಯಾರು ಹೋಬಳಿಯನ್ನು ತಾಲೂಕು ಮಾಡುವ ಬಗ್ಗೆ ಮೊದಲಿಗಿನಿಂದಲೂ ಕೂಗು ಇರುವಾಗ , ಈಗಿರುವ ಹೋಬಳಿ ಮಟ್ಟದ ಕಸ ವಿಲೇವಾರಿ ಮತ್ತು ಸಾರ್ವಜನಿಕ ಶೌಚಾಲಯಗಳ ಸಮಸ್ಯೆಗಳನ್ನೇ ಬಗೆಹರಿಸಲು ಸಾಧ್ಯವಾಗದಿದ್ದರೆ, ನಾಳೆ ದಿನ ಹುಳಿಯಾರು ತಾಲೂಕು ಆದಾಗ ಅದರ ಸಮಸ್ಯೆಗಳನ್ನು ನಿಭಾಯಿಸುವುದು ಇನ್ನಷ್ಟು ದುಸ್ತರವಾಗಲಿದೆ ಎಂದು ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು. ತಾಲೂಕು ಅರ್ಹತೆ ಇದ್ದರೂ ನಿರ್ಲಕ್ಷ್ಯ: ಹುಳಿಯಾರು ಪಟ್ಟಣ ಪಂಚಾಯಿತಿ ಒಂದು ಹಳ್ಳಿ ಮತ್ತು ಪಟ್ಟಣದ ರೀತಿಯಲ್ಲಿದ್ದು, ಅದನ್ನು ಅಭಿವೃದ್ಧಿಪಡಿಸುವುದು ಕಷ್ಟದ ಸಮಸ್ಯೆ. ಆದರೆ ಹುಳಿಯಾರು ಒಂದು ಹೋಬಳಿ ಮಟ್ಟಕ್ಕಿಂತಲೂ ಮೀರಿ ತಾಲೂಕು ಆಗಲು ಅರ್ಹತೆ ಹೊಂದಿದೆ ಎಂದು ಈ ಹಿಂದಿನಿಂದಲೂ ಜನರ ಬೇಡಿಕೆ ಮತ್ತು ಕೂಗು ಇದೆ. ಇಷ್ಟೆಲ್ಲಾ ಅರ್ಹತೆ ಹೊಂ...

ನಾಳೆಯಿಂದ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ರೈತ ಸಂಘದ ಅಧ್ಯಕ್ಷ ಚಂದ್ರಪ್ಪ ನಿರ್ಧಾರ

ಹುಳಿಯಾರಿನ ಪಟ್ಟಣ ಪಂಚಾಯಿತಿ ಮುಂದೆ ನಡೆಯುತ್ತಿರುವ ಪ್ರತಿಭಟನೆ 23ನೇ ದಿನಕ್ಕೆ ನಾಳೆಯಿಂದ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ರೈತ ಸಂಘದ ಅಧ್ಯಕ್ಷ ಚಂದ್ರಪ್ಪ ನಿರ್ಧಾರ ಹುಳಿಯಾರು : ಹುಳಿಯಾರು ಪಟ್ಟಣ ಪಂಚಾಯಿತಿ ಮುಂದೆ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ರಾಜ್ಯ ರೈತ ಸಂಘದ ರಾಜ್ಯ ಅಧ್ಯಕ್ಷ ಚಂದ್ರಪ್ಪ ಅವರು ನಡೆಸುತ್ತಿರುವ ಅಹೋರಾತ್ರಿ ಧರಣಿಯು ಇಂದು 23ನೇ ದಿನಕ್ಕೆ ಕಾಲಿಟ್ಟಿದ್ದು, ಈವರೆಗೆ ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಮತ್ತು ಸ್ಥಳೀಯ ಆಡಳಿತ ಸ್ಪಂದಿಸದ ಕಾರಣ, ನಾಳೆ ನವೆಂಬರ್ 1, ಕನ್ನಡ ರಾಜ್ಯೋತ್ಸವ ದಿನದಂದು ಬೆಳಿಗ್ಗೆ 6 ಗಂಟೆಯಿಂದ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸುವುದಾಗಿ ಅವರು ಘೋಷಿಸಿದ್ದಾರೆ . ​ ಆರೋಪ : ತಹಸಿಲ್ದಾರ್, ತುಮಕೂರು ಜಿಲ್ಲಾ ನಗರ ಅಭಿವೃದ್ಧಿ ಕೋಶದ ಯೋಜನಾಧಿಕಾರಿ, ಜಿಲ್ಲಾ ಎಪಿಎಂಸಿ ಉಪನಿರ್ದೇಶಕರು, ಶಾಸಕರು ಮತ್ತು ಉಪ ವಿಭಾಗಾಧಿಕಾರಿಗಳು ಸೇರಿದಂತೆ ಅಧಿಕಾರಿಗಳ ದಂಡೇ ಬಂದು ಮಾತುಕತೆ ನಡೆಸಿದರೂ, ಬೇಡಿಕೆಗಳ್ಯಾವುವೂ ಸಂಪೂರ್ಣವಾಗಿ ಈಡೇರಿಲ್ಲ. ಅರ್ಧಂಬರ್ಧವಾಗಿದ್ದು ಯಾವುದೂ ಪೂರ್ಣರೂಪಕ್ಕೆ ಜಾರಿಯಾಗಿಲ್ಲ ಮತ್ತು ಆಗುವ ಲಕ್ಷಣವೂ ಕಾಣುತ್ತಿಲ್ಲ ಎಂದು ಚಂದ್ರಪ್ಪ ಆರೋಪಿಸಿದ್ದಾರೆ. ​ಎಚ್ಚರಿಕೆ: ಜಿಲ್ಲಾಡಳಿತಕ್ಕೆ ಮತ್ತು ಶಾಸಕರಿಗೆ ಬೇಡಿಕೆ ಈಡೇರಿಸಲು ಎಂಟು ದಿನ ಮತ್ತು ಮೂರು ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ ಕಸ ವಿಲೇವಾರಿ ಘಟಕ ನಿರ್ಮಾಣ ಅಥವಾ ಇತರೆ ಬೇಡಿಕೆಗಳು ಈಡ...

ಹುಳಿಯಾರು ಪಟ್ಟಣ ಸಂತೆ ಸ್ಥಳಾಂತರ ಮತ್ತು ನೆಲ ಬಾಡಿಗೆ ಹೊಸದಾಗಿ ನಿಗದಿ

ಹುಳಿಯಾರು ಪಟ್ಟಣ ಸಂತೆ ಸ್ಥಳಾಂತರ ಮತ್ತು ನೆಲ ಬಾಡಿಗೆ ಹೊಸದಾಗಿ ನಿಗದಿ ಸಂತೆ ವ್ಯಾಪಾರಿಗಳಿಗೆ APMC ಯಾರ್ಡ್‌ನಲ್ಲಿ ಸ್ಥಳ ಗುರುತು, ದರ ನಿಗದಿ: ಪಟ್ಟಣ ಪಂಚಾಯಿತಿ ತೀರ್ಮಾನ ಹುಳಿಯಾರು: ​ಹುಳಿಯಾರು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ  ರತ್ನಮ್ಮ ಅವರ ಅಧ್ಯಕ್ಷತೆಯಲ್ಲಿ  ಇಂದು ನಡೆದ ಸಭೆಯಲ್ಲಿ, ಪಟ್ಟಣದ ವ್ಯಾಪ್ತಿಯಲ್ಲಿ ಗಾಂಧಿಪೇಟೆಯ ರಸ್ತೆ ಪಕ್ಕದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ಎ.ಪಿ.ಎಂ.ಸಿ ಯಾರ್ಡ್‌ಗೆ ಸ್ಥಳಾಂತರಿಸಿದ ಜಾಗದಲ್ಲಿ ವ್ಯಾಪಾರಸ್ಥರಿಗೆ ಸ್ಥಳ ಗುರುತು ಮಾಡಿ, ನೆಲ ಬಾಡಿಗೆಯನ್ನು ನಿಗದಿಪಡಿಸುವ ಕುರಿತು ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಯಿತು. ಮೊದಲ ಆದ್ಯತೆ : ಸ್ಥಳಾಂತರಗೊಂಡಿರುವ ಸಂತೆಯಲ್ಲಿ ಹಾಲಿ ವ್ಯಾಪಾರಸ್ಥರಿಗೆ ಮೊದಲ ಆದ್ಯತೆ ನೀಡುವುದು   ಹಾಗೂ ಹಾಲಿ ವ್ಯಾಪಾರಸ್ಥರಿಗೆ ಸ್ಥಳ ಹಂಚಿಕೆಯ ನಂತರ ಖಾಲಿ ಜಾಗ ಲಭ್ಯವಿದ್ದಲ್ಲಿ ಮಾತ್ರ ಹೊಸಬರಿಗೆ ಆದ್ಯತೆ ನೀಡುವುದು ಎಂದು ತೀರ್ಮಾನಿಸಲಾಯಿತು. ​ನೆಲ ಬಾಡಿಗೆ ನಿಗದಿ : ಈ ಕೆಳಕಂಡಂತೆ ವಾರದ ಸಂತೆಯ ದಿನಕ್ಕೆ  ನೆಲ ಬಾಡಿಗೆ ನಿಗದಿಪಡಿಸಲಾಯಿತು. ​5 x 5 ಅಡಿ ಅಳತೆಗೆ: ರೂ. 50/-. ​10 x 10 ಅಡಿ ಅಳತೆಗೆ: ರೂ. 100/-. ​10 x 15 ಅಡಿ ಅಳತೆಗೆ: ರೂ. 150/-. ​ಸ್ಥಳ ಹಂಚಿಕೆ ಕುರಿತು ಕೌನ್ಸಿಲರ್ ದಯಾನಂದ್ ಸ್ಪಷ್ಟನೆ : ​ ಸಭೆಯ ನಂತರ ಪಟ್ಟಣ ಪಂಚಾಯಿತಿ ಮುಂದೆ ಸೇರಿದ್ದ ನೂರಾರು ಸಂತೆ ವ್ಯಾಪಾರಸ್ಥರ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...

ಹುಳಿಯಾರು ಪ್ರತಿಭಟನೆ: ನಾಳೆ ನಾಡಕಚೇರಿ ಮುಂದೆ ಕಸ ಸುರಿಯುವ ಮೂಲಕ ವಿನೂತನ ಪ್ರತಿಭಟನೆಗೆ ಸಜ್ಜು; 19ನೇ ದಿನಕ್ಕೆ ಕಾಲಿಟ್ಟ ಹೋರಾಟ

ಹುಳಿಯಾರು ಪ್ರತಿಭಟನೆ: ನಾಳೆ ನಾಡಕಚೇರಿ ಮುಂದೆ ಕಸ ಸುರಿಯುವ ಮೂಲಕ ವಿನೂತನ ಪ್ರತಿಭಟನೆಗೆ ಸಜ್ಜು; 19ನೇ ದಿನಕ್ಕೆ ಕಾಲಿಟ್ಟ ಹೋರಾಟ --------------- ವರದಿ : ನರೇಂದ್ರಬಾಬು-ಹುಳಿಯಾರು ------------- ​ಹುಳಿಯಾರು:ಹುಳಿಯಾರಿನಲ್ಲಿ ಸ್ಥಳೀಯ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ರೈತ ಸಂಘದ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಪ್ರತಿಭಟನೆಯು ನಾಳೆ ಸೋಮವಾರಕ್ಕೆ 19ನೇ ದಿನಕ್ಕೆ ಕಾಲಿಡಲಿದೆ. ಪಟ್ಟಣದಲ್ಲಿ ಕಸ ವಿಲೇವಾರಿ ಸಮಸ್ಯೆ ಮತ್ತು ಇತರೆ ನಾಗರಿಕ ಸೌಕರ್ಯಗಳ ಕೊರತೆಯ ವಿರುದ್ಧ ಹೋರಾಡುತ್ತಿರುವ ಪ್ರತಿಭಟನಾಕಾರರು, ನಾಳೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷ ಹಾಗೂ ಇತರ ಸಂಘಟನೆಗಳ ನೆರವಿನೊಂದಿಗೆ ನಾಡಕಚೇರಿ  ಮುಂದೆ ಕಸ ಸುರಿಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಪ್ರತಿಭಟನಾಕಾರರ ಮುಖ್ಯ ಬೇಡಿಕೆಗಳು ಮತ್ತು ವಿನೂತನ ಕ್ರಮಗಳು: ​ಕಸ ವಿಲೇವಾರಿ ಸಮಸ್ಯೆ : ಹುಳಿಯಾರಿನಲ್ಲಿ ಮನೆ ಮನೆ ಕಸ ಸಂಗ್ರಹಣೆ ವ್ಯವಸ್ಥೆ ಸರಿಯಾಗಿಲ್ಲದಿರುವುದು ಮತ್ತು ಕಸ ವಿಲೇವಾರಿಗೆ ಸೂಕ್ತ ಜಾಗದ ಕೊರತೆಯು ಪ್ರಮುಖ ಸಮಸ್ಯೆಯಾಗಿದೆ. ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಾಗ ಗುರುತಿಸಲು ವಿಫಲರಾಗಿರುವ ಕಂದಾಯ ಅಧಿಕಾರಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಪ್ರತಿಭಟನಾಕಾರರು ನಾಡಕಚೇರಿ ಮುಂದೆ ಕಸವನ್ನು "ಉಡುಗೊರೆ"ಯಾಗಿ ಟ್ರ್ಯಾಕ್ಟರ್‌ನಲ್ಲಿ ತಂದು ಸ...