ವಿಷಯಕ್ಕೆ ಹೋಗಿ

ಹುಳಿಯಾರು ಪಟ್ಟಣ ಪಂಚಾಯಿತಿ ಮುಂದೆ ರೈತ ಸಂಘದ ಪ್ರತಿಭಟನೆ 6ನೇ ದಿನಕ್ಕೆ

ಹುಳಿಯಾರು ಪಟ್ಟಣ ಪಂಚಾಯಿತಿ ಮುಂದೆ ರೈತ ಸಂಘದ ಪ್ರತಿಭಟನೆ 6ನೇ ದಿನಕ್ಕೆ: 

ಮೂಲಭೂತ ಸೌಕರ್ಯಕ್ಕಾಗಿ ಆಗ್ರಹಿಸಿ 'ಕರ ನಿರಾಕರಣೆ ಚಳುವಳಿ' ಉಗ್ರರೂಪಕ್ಕೆ-

-------

✍️ ವರದಿ : ನರೇಂದ್ರಬಾಬು-ಹುಳಿಯಾರು

9448760070

---------

ಹುಳಿಯಾರು : ​ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಪಟ್ಟಣ ಪಂಚಾಯಿತಿ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ, ರಾಜ್ಯ ರೈತ ಸಂಘದ ಅಧ್ಯಕ್ಷ ಚಂದ್ರಪ್ಪ ಅವರ ನೇತೃತ್ವದಲ್ಲಿ ಹುಳಿಯಾರು ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಪ್ರತಿಭಟನೆ ಇಂದು (ಮಂಗಳವಾರ) ಆರನೇ ದಿನಕ್ಕೆ ಕಾಲಿಟ್ಟಿದೆ. 


ಕಳೆದ ಆರು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಸ್ಥಳೀಯ ಶಾಸಕರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಬಂದು ಭೇಟಿ ನೀಡದಿರುವ ಬಗ್ಗೆ ಚಂದ್ರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ಸ್ವರೂಪ ಮತ್ತು ಬೇಡಿಕೆ:

​ರೈತ ಸಂಘವು ಪಟ್ಟಣ ಪಂಚಾಯಿತಿ ಸಂತೆ ಸುಂಕ ವಸೂಲಿ ಮಾಡುತ್ತದೆ, ಆದರೆ ಮಾರಾಟಕ್ಕೆ ಬರುವ ರೈತರಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿಲ್ಲ ಎಂದು ಆರೋಪಿಸಿ 'ಕರ ನಿರಾಕರಣೆ ಚಳುವಳಿ' ಆರಂಭಿಸಿದೆ. ಪ್ರತಿಭಟನೆಯ ಆರು ದಿನಗಳ ನಂತರವೂ ಅಧಿಕಾರಿಗಳು ಸ್ಪಂದಿಸದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಚಂದ್ರಪ್ಪ ಅವರು ಪ್ರತಿಭಟನೆ ಪಟ್ಟಣ ಪಂಚಾಯಿತಿ ಕಚೇರಿಯ ಮುಂದೆಯೇ ನಡೆಯುತ್ತಿದ್ದು ಆರು ದಿನವಾದರೂ, ಕನಿಷ್ಠ ರೈತರಿಗೆ ಕುಡಿಯಲು ಒಂದು ಲೋಟ ನೀರು ಕೊಡಲು ಸಹ ಪಟ್ಟಣ ಪಂಚಾಯಿತಿಗೆ ಯೋಗ್ಯತೆ ಇಲ್ಲದಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಶಾಸಕರು, ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶಪ್ರತಿಭಟನಾ ಸ್ಥಳಕ್ಕೆ ಬಾರದ ಶಾಸಕರು ಮತ್ತು ಪಟ್ಟಣ ಪಂಚಾಯಿತಿ ಅಧಿಕಾರಿಗಳ ಕಾರ್ಯವೈಖರಿಯನ್ನು ಚಂದ್ರಪ್ಪ ಕಟುವಾಗಿ ಟೀಕಿಸಿದರು. ಇವರು ಅಧಿಕಾರ ಸೂತ್ರವನ್ನು ಹಿಡಿಯಲಿಕ್ಕೆ ಲಾಯಕ್ಕೇ ಇಲ್ಲ ಎಂದು ಕಟುವಾಗಿ ನುಡಿದ ಅವರು, ಪಟ್ಟಣ ಪಂಚಾಯಿತಿಯು ಜೀವಂತವಾಗಿಲ್ಲ, ಕೇವಲ 'ಕಲ್ಕಟ್ಟಡ' ಮತ್ತು ನಾಮಕಾವಸ್ಥೆ ಕಚೇರಿ ಎಂದು ದೂರಿದರು.

​ಒಬ್ಬ ರೈತ ಹೋರಾಟಕ್ಕೆ ಕುಳಿತಾಗ ಜಿಲ್ಲಾಡಳಿತ, ಶಾಸಕರು ಮತ್ತು ತಹಶೀಲ್ದಾರರು ತಕ್ಷಣ ಬಂದು ಸಮಸ್ಯೆ ಆಲಿಸಬೇಕಿತ್ತು. ಆದರೆ ತಹಶೀಲ್ದಾರರು ರಾಜಕಾರಣ ಮಾಡುತ್ತಾ ಶಾಸಕರ ಹಿಂದೆ ತಿರುಗಾಡುತ್ತಿದ್ದಾರೆ ಎಂದು ಟೀಕಿಸಿದರು. ಕಳೆದ ಆರು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಸ್ಪಂದಿಸದಿರುವ ಇವರೆಲ್ಲರೂ ನಿಷ್ಪ್ರಯೋಜಕರು ಎಂದು ಲೇವಡಿ ಮಾಡಿದರು.

ಉಪವಾಸ ಸತ್ಯಾಗ್ರಹದ ಎಚ್ಚರಿಕೆ :​ ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟವನ್ನು ಮೊಟಕುಗೊಳಿಸುವುದಿಲ್ಲ ಎಂದು ಗಟ್ಟಿ ನಿಲುವನ್ನು ವ್ಯಕ್ತಪಡಿಸಿದ ರೈತ ಸಂಘದ ಅಧ್ಯಕ್ಷ ಚಂದ್ರಪ್ಪ ಅಧಿಕಾರಿಗಳಿಗೆ ಇನ್ನೂ ನಾಲ್ಕು ದಿನಗಳ ಗಡುವು ನೀಡಿ,ಇನ್ನೂ ನಾಲ್ಕು ದಿನಗಳಲ್ಲಿ ಯಾರೊಬ್ಬರೂ ಸ್ಪಂದಿಸದಿದ್ದಲ್ಲಿ, ಪ್ರತಿಭಟನೆಯ 11ನೇ ದಿನದಿಂದ ಉಪವಾಸ ಸತ್ಯಾಗ್ರಹ ಕೂರುವ ಮೂಲಕ ಚಳುವಳಿಯನ್ನು ಉಗ್ರರೂಪಕ್ಕೆ ಕೊಂಡೊಯ್ಯುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಆಗ ​ಉಪವಾಸ ಸತ್ಯಾಗ್ರಹದ ಸಂದರ್ಭದಲ್ಲಿ 108 ವಾಹನ ಮತ್ತು ಡಾಕ್ಟರ್‌ಗಳು ಧರಣಿ ಸ್ಥಳದಲ್ಲಿ ಸಿದ್ಧವಿರಬೇಕು ಎಂದು ಆಗ್ರಹಿಸಿದರು.

ಜಿಲ್ಲಾಡಳಿತಕ್ಕೆ ಎಚ್ಚರಿಕೆ:

​ನಾವು ತೆರಿಗೆದಾರರು, ನಮ್ಮ ಹಣದಲ್ಲಿ ಪಟ್ಟಣ ಪಂಚಾಯಿತಿಯನ್ನು ನಿಭಾಯಿಸುತ್ತಿದ್ದೇವೆ. ನಮ್ಮ ಬೇಡಿಕೆಗಳು ನ್ಯಾಯಬದ್ಧವಾಗಿವೆ ಎಂದು ಉಚ್ಚರಿಸಿದ ಚಂದ್ರಪ್ಪ ತಾಲೂಕು ಮತ್ತು ಜಿಲ್ಲಾಡಳಿತವು ತಕ್ಷಣವೇ ಮನಸ್ಸು ಮಾಡಿ ರೈತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. 

ಮುಂದೆ ನಡೆಯಬಹುದಾದ ಚಳುವಳಿಯ ಸ್ವರೂಪವನ್ನು ತಡೆದ ಸಂದರ್ಭದಲ್ಲಿ ಹೋರಾಟಗಾರರಿಗೆ ಏನಾದರೂ ತೊಂದರೆಯಾದರೆ, ಅದಕ್ಕೆ ಮಾನಗೆಟ್ಟ, ಭ್ರಷ್ಟ ತಾಲೂಕು ಮತ್ತು ಜಿಲ್ಲಾಡಳಿತವೇ ಹೊಣೆಗಾರರಾಗಬೇಕಾಗುತ್ತದೆ ಎಂದು ಕಡಕ್ ಎಚ್ಚರಿಕೆ ನೀಡಿದರು.

ಪ್ರತಿಭಟನಾ ನಿರತ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ರೈತರು ಬೆಳಗ್ಗೆಯಿಂದ ಪಟ್ಟಣ ಪಂಚಾಯಿತಿ ಮುಂದೆ ಭಜನಾ ತಂಡದೊಂದಿಗೆ ತಾಳಮೇಳದೊಂದಿಗೆ ತತ್ವಪದ ಹಾಗೂ ಭಜನೆ ನಡೆಸಿದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಕರಿಯಪ್ಪ, ಸೋಮಜ್ಜನ ಪಾಳ್ಯದ ಬೀರಲಿಂಗಯ್ಯ, ಕಲ್ಲಹಳ್ಳಿ ಮಲ್ಲೇಶಯ್ಯ, ನೀರಾ ಈರಣ್ಣ, ಜಗದೀಶ್, ಪ್ರಶಾಂತ್, ಸೀಗೆಬಾಗಿ ಮಂಜುನಾಥ್, ಆಶಾ, ಲಕ್ಷ್ಮಿ ಸೇರಿದಂತೆ ಮತ್ತಿತರ ಹಳ್ಳಿಗಳ ರೈತರು ಜಮಾಯಿಸಿದ್ದರು.

ರೈತ ಸಂಘವು ಮುಂದಿನ ದಿನಗಳಲ್ಲಿ ಹೊಸ ಸ್ವರೂಪವನ್ನು ತಾಳಲು ಸಿದ್ಧವಾಗಿದ್ದು, ಹೋರಾಟ ಮುಂದುವರಿಯಲಿದೆ. 


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...