ವಿಷಯಕ್ಕೆ ಹೋಗಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಂಭ್ರಮ : ತ್ಯಾಗ, ಸಂಘಟನೆ ಮತ್ತು ರಾಷ್ಟ್ರಭಕ್ತಿಯಿಂದ ಬದಲಾದ ದೇಶದ ಚಿತ್ರಣ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಸಂಭ್ರಮ : ತ್ಯಾಗ, ಸಂಘಟನೆ ಮತ್ತು ರಾಷ್ಟ್ರಭಕ್ತಿಯಿಂದ ಬದಲಾದ ದೇಶದ ಚಿತ್ರಣ

------------------

ಹುಳಿಯಾರಿನಲ್ಲಿ ಶಿಸ್ತಿನಿಂದ ಜರುಗಿದ ಆರ್‌ಎಸ್‌ಎಸ್ ವಿಜಯದಶಮಿ

-------------------

✍️ ನರೇಂದ್ರಬಾಬು-ಹುಳಿಯಾರು-9448760070 

ಹುಳಿಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಶತಮಾನೋತ್ಸವದ ಸಂಭ್ರಮದೊಂದಿಗೆ ವಿಜಯದಶಮಿ ಉತ್ಸವವನ್ನು ಹುಳಿಯಾರಿನ ಶ್ರೀ ಪ್ರಸನ್ನ ಗಣಪತಿ ದೇವಾಲಯದ ಆವರಣದಲ್ಲಿ ವಿಜೃಂಭಣೆಯಿಂದ ಆಚರಿಸಿತು. ಈ ಸಂದರ್ಭದಲ್ಲಿ ದಕ್ಷಿಣ ಪ್ರಾಂತ ಬಾಲಗೋಕುಲ ಸಂಯೋಜಕರಾದ ಉಮೇಶ್ ಅವರು ಭೌದ್ಧಿಕ್ ನೀಡುತ್ತಾ, ಸಂಘದ ನೂರು ವರ್ಷದ ಪಯಣ ದೇಶದ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಚಿತ್ರಣವನ್ನೇ ಬದಲಾಯಿಸುವಂತಾಗಿದೆ. ವ್ಯಕ್ತಿ ನಿರ್ಮಾಣವೇ ಸಂಘದ ಮೂಲ ಗುರಿ ಎಂದು ಸ್ಪಷ್ಟಪಡಿಸಿದರು.

ಸಂಘಟನೆಯ ಅಗತ್ಯತೆ ಮತ್ತು ಇತಿಹಾಸ : ಉಮೇಶ್ ಅವರು ಮಾತನಾಡುತ್ತಾ, “ಡಾ. ಕೇಶವ ಬಲಿರಾಂ ಹೆಡಗೇವಾರ್ ಅವರು 1925ರ ವಿಜಯದಶಮಿಯ ದಿನ ಆರ್‌ಎಸ್‌ಎಸ್ ಸ್ಥಾಪಿಸಿದರು. ಹಿಂದೂ ಸಮಾಜವನ್ನು ಬಲಿಷ್ಠವಾಗಿಸಿ, ಸಂಘಟನೆಯ ಶಕ್ತಿಯಿಂದ ಸಮಾಜರಕ್ಷಣೆಯ ಕಾರ್ಯ ಮುಂದುವರಿಸುವುದು ಅವರ ಉದ್ದೇಶವಾಗಿತ್ತು. ರಾಮಕೃಷ್ಣ ಪರಮಹಂಸ, ದಯಾನಂದ ಸರಸ್ವತಿ, ಬಸವಣ್ಣ, ಶಂಕರಾಚಾರ್ಯ, ಮಧ್ವಾಚಾರ್ಯ ಮುಂತಾದ ಮಹಾಪುರುಷರು ಧರ್ಮವನ್ನು ಉಳಿಸಲು ಮಾಡಿದ ಕಾರ್ಯಗಳಿಗೆ ಸಂಘಟನೆಯ ರೂಪ ನೀಡಿದವರು ಹೆಡಗೇವಾರ್‌ಜಿ” ಎಂದರು.

ಸ್ವಾತಂತ್ರ್ಯ ಹೋರಾಟದಿಂದ ತುರ್ತು ಪರಿಸ್ಥಿತಿವರೆಗೆ : ಸಂಘದ ಸ್ವಯಂಸೇವಕರು ದೇಶಕ್ಕಾಗಿ ಅನೇಕ ಬಲಿದಾನಗಳನ್ನು ನೀಡಿದ್ದಾರೆ ಎಂಬುದನ್ನು ಅವರು ಸ್ಮರಿಸಿದರು. ಸ್ವಾತಂತ್ರ್ಯ ಹೋರಾಟ, ಭಾರತ-ಪಾಕಿಸ್ತಾನ ವಿಭಜನೆಯ ದುರಂತ, ತುರ್ತು ಪರಿಸ್ಥಿತಿ—ಈ ಎಲ್ಲ ಸಂದರ್ಭಗಳಲ್ಲಿ ಸಾವಿರಾರು ಸ್ವಯಂಸೇವಕರು ಪ್ರಾಣತ್ಯಾಗ ಮಾಡಿದರು. ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯವು ಅವರ ತ್ಯಾಗದ ಫಲ ಎಂದು ಅವರು ಒತ್ತಿ ಹೇಳಿದರು.

ಶಾಖೆಗಳ ಮಹತ್ವ : ಆರ್‌ಎಸ್‌ಎಸ್ ಶಾಖೆ ಎಂದರೆ ಕೇವಲ ವ್ಯಾಯಾಮ ಅಥವಾ ಆಟಗಳ ಕೇಂದ್ರವಲ್ಲ. ಶ್ಲೋಕ, ದೇಶಭಕ್ತಿ ಗೀತೆಗಳು, ಮಹಾಪುರುಷರ ಕಥೆಗಳ ಮೂಲಕ ವ್ಯಕ್ತಿ ನಿರ್ಮಾಣ ಮಾಡುವ ಸ್ಥಳ ಅದು. ಈ ವ್ಯಕ್ತಿ ನಿರ್ಮಾಣವೇ ಇಂದು ದೇಶಕ್ಕೆ ಒಬ್ಬ ಉತ್ತಮ ಪ್ರಧಾನಿ, ಅನೇಕ ಮುಖ್ಯಮಂತ್ರಿಗಳನ್ನು ನೀಡಲು ಕಾರಣವಾಗಿದೆ ಎಂದು ಉಮೇಶ್ ತಿಳಿಸಿದರು.

ದೇಶ-ವಿದೇಶಕ್ಕೆ ಕಾರ್ಯವಿಸ್ತರಣೆ : ಸಂಘವು ಭಾರತದಲ್ಲಷ್ಟೇ ಅಲ್ಲ, 40-50ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಹಿಂದೂ ಸ್ವಯಂಸೇವಕ ಸಂಘದ ಹೆಸರಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ. ವಿದ್ಯಾ ಭಾರತಿಯ ಮೂಲಕ 30,000ಕ್ಕೂ ಹೆಚ್ಚು ಶಾಲೆಗಳನ್ನು ಸಂಘ ನಡೆಸುತ್ತಿದ್ದು, ಒಂದು ಕೋಟಿಗಿಂತ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಶಾಲೆಗಳಲ್ಲಿ ಜ್ಞಾನ ಜೊತೆಗೆ ಶೀಲ ಮತ್ತು ದೇಶಭಕ್ತಿಗೆ ಆದ್ಯತೆ ನೀಡಲಾಗುತ್ತದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸಹ ಯುವಕರಲ್ಲಿ ಸಂಘಟನಾ ಶಕ್ತಿ ಮತ್ತು ದೇಶಪ್ರೇಮ ಬೆಳೆಸುತ್ತಿದೆ ಎಂದರು.

ನಿಸ್ವಾರ್ಥ ಪ್ರಚಾರಕರ ಸೇವೆ : ಸಂಘದ ಶಕ್ತಿ ಅದರ ನಿಸ್ವಾರ್ಥ ಪ್ರಚಾರಕರಲ್ಲಿ ಇದೆ. ಸುಮಾರು 5,000 ಮಂದಿ ಪ್ರಚಾರಕರು ತಮ್ಮ ಜೀವನವನ್ನೇ ಸಂಘಕ್ಕಾಗಿ ಅರ್ಪಿಸಿದ್ದಾರೆ. ಮದುವೆಯಾಗದೆ, ಕುಟುಂಬ-ಆರ್ಥಿಕ ಭಾವನೆಗಳನ್ನು ಬದಿಗಿಟ್ಟು, ಯಾವ ಸಂಬಳವಿಲ್ಲದೆ ಸಂಘ ಕಳುಹಿಸಿದ ಎಲ್ಲೆಡೆ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ತ್ಯಾಗಿಗಳಿಂದ ಸಂಘ ಬಲಿಷ್ಠವಾಗಿದೆ ಎಂದು ಉಮೇಶ್ ಹೇಳಿದರು.

ವನವಾಸಿ ಕಲ್ಯಾಣ ಮತ್ತು ರಾಷ್ಟ್ರೀಯ ಪರಿವರ್ತನೆ :ಸಂಘವು ವನವಾಸಿ ಕಲ್ಯಾಣ ಕಾರ್ಯಗಳಿಂದ ಗಿರಿಜನ ವಿದ್ಯಾರ್ಥಿಗಳ ಜೀವನದಲ್ಲಿ ಬದಲಾವಣೆ ತಂದಿದೆ. ಇದರ ಉದಾಹರಣೆಯಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜೀವನವನ್ನು ಉಲ್ಲೇಖಿಸಿದರು. ಅವರು ಬುಡಕಟ್ಟು ಪ್ರದೇಶದಿಂದ ರಾಷ್ಟ್ರಪತಿ ಸ್ಥಾನಕ್ಕೆ ಏರಲು ಕಾರಣವಾದದ್ದು ಸಂಘಟನಾ ಸಂಸ್ಕಾರವೇ ಎಂದರು.

ಸ್ವದೇಶಿ ಚಿಂತನೆ ಮತ್ತು ಸಂಸ್ಕೃತಿಯ ಅರಿವು :ಶತಮಾನೋತ್ಸವದ ಸಂಧರ್ಭದಲ್ಲಿ ಸಂಘವು “ಪಂಚ ಪರಿವರ್ತನೆ” ಎಂಬ ಹೊಸ ಸಂಕಲ್ಪವನ್ನು ಘೋಷಿಸಿದೆ. ಇದರ ಪ್ರಮುಖ ಅಂಶವೆಂದರೆ ಸ್ವದೇಶಿ ಚಿಂತನೆ. “ಸ್ವದೇಶಿ ಎಂದರೆ ಕೇವಲ ಸ್ಥಳೀಯ ವಸ್ತು ಬಳಕೆ ಮಾತ್ರವಲ್ಲ, ಜೀವನ ಶೈಲಿಯಲ್ಲಿಯೂ ಆ ಪರಿವರ್ತನೆ ತರಬೇಕು. ಉಡುಗೆ, ಆಹಾರ, ಭಾಷೆ ಎಲ್ಲದರಲ್ಲೂ ನಮ್ಮ ಸ್ವಭಾವ ಪ್ರತಿಬಿಂಬಿಸಬೇಕು. ಮಕ್ಕಳಿಗೆ ಇಂಗ್ಲಿಷ್ ಕಲಿಸುವುದರಲ್ಲಿ ತಪ್ಪಿಲ್ಲ, ಆದರೆ ಮಾತೃಭಾಷೆಯ ಗೌರವ ಮರೆಯಬಾರದು ಎಂದು ಅವರು ಹೇಳಿದರು.

ಇತಿಹಾಸದ ಅರಿವು : 1975ರ ತುರ್ತು ಪರಿಸ್ಥಿತಿಯಲ್ಲಿ ಸಾವಿರಾರು ಸ್ವಯಂಸೇವಕರು ನೀಡಿದ ಬಲಿದಾನವನ್ನು ಇಂದಿನ ಪೀಳಿಗೆ ಮರೆಯುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಈ ಇತಿಹಾಸವನ್ನು ನೆನಪಿಸುವುದು, ಯುವ ಪೀಳಿಗೆಯಲ್ಲಿ ದೇಶಪ್ರೇಮವನ್ನು ಬೆಳೆಸುವುದು ನಮ್ಮ ಹೊಣೆಗಾರಿಕೆ ಎಂದು ಉಮೇಶ್ ಒತ್ತಿ ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀ ಪ್ರಸನ್ನ ಗಣಪತಿ ಸೇವಾ ಚಾರಿಟಬಲ್ ಟ್ರಸ್ಟ್ (ರಿ) ಅಧ್ಯಕ್ಷರಾದ ಡಿ.ಎಸ್.ಮೋಹನ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಾಕಷ್ಟು ಸಂಖ್ಯೆಯ ಸ್ವಯಂಸೇವಕರು ಗಣವೇಷದಲ್ಲಿ ಶಿಸ್ತಿನಿಂದ ಭಾಗವಹಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...