ವಿಷಯಕ್ಕೆ ಹೋಗಿ

ಕಸ ವಿಲೇವಾರಿ, ಶೌಚಾಲಯಗಳ ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ತಾಲೂಕು ಆದಾಗ ಇನ್ನಷ್ಟು ಕಷ್ಟ - ಯಳನಾಡು ಸ್ವಾಮೀಜಿ ಎಚ್ಚರಿಕೆ

ಕಸ ವಿಲೇವಾರಿ, ಶೌಚಾಲಯಗಳ ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ತಾಲೂಕು ಆದಾಗ ಇನ್ನಷ್ಟು ಕಷ್ಟ - ಯಳನಾಡು ಸ್ವಾಮೀಜಿ ಎಚ್ಚರಿಕೆ

ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯಿತಿ ಮುಂದೆ ರಾಜ್ಯ ರೈತ ಸಂಘದ ಅಧ್ಯಕ್ಷ ಚಂದ್ರಪ್ಪ ನೇತೃತ್ವದಲ್ಲಿ 23 ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿಗೆ ಯಳನಾಡು-ಅರಸೀಕೆರೆ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಜ್ಞಾನಪ್ರಭು ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮಿಜಿಗಳು ಭೇಟಿ ನೀಡಿ ಬೆಂಬಲ ಸೂಚಿಸಿ, ಆಡಳಿತದ ನಿರ್ಲಕ್ಷ್ಯದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಹುಳಿಯಾರು ಹೋಬಳಿಯನ್ನು ತಾಲೂಕು ಮಾಡುವ ಬಗ್ಗೆ ಮೊದಲಿಗಿನಿಂದಲೂ ಕೂಗು ಇರುವಾಗ, ಈಗಿರುವ ಹೋಬಳಿ ಮಟ್ಟದ ಕಸ ವಿಲೇವಾರಿ ಮತ್ತು ಸಾರ್ವಜನಿಕ ಶೌಚಾಲಯಗಳ ಸಮಸ್ಯೆಗಳನ್ನೇ ಬಗೆಹರಿಸಲು ಸಾಧ್ಯವಾಗದಿದ್ದರೆ, ನಾಳೆ ದಿನ ಹುಳಿಯಾರು ತಾಲೂಕು ಆದಾಗ ಅದರ ಸಮಸ್ಯೆಗಳನ್ನು ನಿಭಾಯಿಸುವುದು ಇನ್ನಷ್ಟು ದುಸ್ತರವಾಗಲಿದೆ ಎಂದು ಸ್ವಾಮೀಜಿ ಆತಂಕ ವ್ಯಕ್ತಪಡಿಸಿದರು.

ತಾಲೂಕು ಅರ್ಹತೆ ಇದ್ದರೂ ನಿರ್ಲಕ್ಷ್ಯ:

ಹುಳಿಯಾರು ಪಟ್ಟಣ ಪಂಚಾಯಿತಿ ಒಂದು ಹಳ್ಳಿ ಮತ್ತು ಪಟ್ಟಣದ ರೀತಿಯಲ್ಲಿದ್ದು, ಅದನ್ನು ಅಭಿವೃದ್ಧಿಪಡಿಸುವುದು ಕಷ್ಟದ ಸಮಸ್ಯೆ. ಆದರೆ ಹುಳಿಯಾರು ಒಂದು ಹೋಬಳಿ ಮಟ್ಟಕ್ಕಿಂತಲೂ ಮೀರಿ ತಾಲೂಕು ಆಗಲು ಅರ್ಹತೆ ಹೊಂದಿದೆ ಎಂದು ಈ ಹಿಂದಿನಿಂದಲೂ ಜನರ ಬೇಡಿಕೆ ಮತ್ತು ಕೂಗು ಇದೆ. ಇಷ್ಟೆಲ್ಲಾ ಅರ್ಹತೆ ಹೊಂದಿದ್ದರೂ, ಇಲ್ಲಿನ ಆಡಳಿತ ಹೋಬಳಿ ಮಟ್ಟದ ಸಮಸ್ಯೆಗಳನ್ನೇ ಬಗೆಹರಿಸಲು ಆಗದಿದ್ದರೆ, ತಾಲೂಕು ಮಟ್ಟದ ಸಮಸ್ಯೆಗಳನ್ನು ಬಗೆಹರಿಸುವುದು ಇನ್ನು ದೊಡ್ಡ ಸವಾಲಾಗಲಿದೆ. ಆಡಳಿತವು ಕೇವಲ ಭರವಸೆಗಳನ್ನು ನೀಡದೆ, ತಕ್ಷಣವೇ ಕಣ್ಣುಬಿಟ್ಟು ನೋಡಿ, ಹೋರಾಟ ನಿಲ್ಲಿಸಿ, ರೈತರಿಗೆ ಕೆಲಸ ಮಾಡಲು, ಧಾನ್ಯ ಬೆಳೆಯಲು ಅವಕಾಶ ಕಲ್ಪಿಸಬೇಕು. ರೈತ ದೇಶದ ಬೆನ್ನೆಲುಬು, ರೈತ ಇಲ್ಲದಿದ್ದರೆ ನಾವೂ, ನೀವೂ ಯಾರೂ ಇಲ್ಲ. ರೈತರು ಪ್ರತಿಭಟನೆ ಮಾಡುವುದು ಸರಿಯಲ್ಲ, ಅವರು ಮನೆಯಲ್ಲಿದ್ದುಕೊಂಡು ಕೃಷಿ ಮಾಡಬೇಕು.

ಕಸ ವಿಲೇವಾರಿ ಮತ್ತು ಶೌಚಾಲಯಗಳ ವ್ಯವಸ್ಥೆ ಸುಧಾರಣೆಗೆ ಆಗ್ರಹ:

ಇಡೀ ರಾಷ್ಟ್ರದಲ್ಲಿ ಕಸದ ಸಮಸ್ಯೆ ಇದೆ. ಸ್ವಚ್ಛತೆ ನಮ್ಮ ಮನೆಯಿಂದಲೇ ಶುರುವಾಗಲಿ ಎಂಬಂತೆ ನಮ್ಮ ಮನೆ ಮುಂದೆ ಚೆನ್ನಾಗಿರಬೇಕು, ಇನ್ನೊಬ್ಬರ ಮನೆ ಮುಂದೆ ಹೇಗಾದರೂ ಇರಲಿ ಎಂಬ ಮನಸ್ಥಿತಿ ಬಿಟ್ಟು, ವ್ಯವಸ್ಥಿತವಾಗಿ ಸ್ವಚ್ಛತೆ ಕಾಪಾಡಬೇಕು. ಅಂತೆಯೇ, ಸರ್ಕಾರ ಮನೆಮನೆಗೆ ಶೌಚಾಲಯ ಸೇರಿದಂತೆ ಉತ್ತಮ ವ್ಯವಸ್ಥೆಗಳನ್ನು ಕೊಡುತ್ತಾ ಬಂದಿದ್ದರೂ, ಸಾರ್ವಜನಿಕ ಶೌಚಾಲಯಗಳ ಬಗ್ಗೆ ಮಾತ್ರ ಬಹಳಷ್ಟು ಉದಾಸೀನತೆ ಇದೆ. ಸಾರ್ವಜನಿಕರು ಶೌಚಾಲಯವನ್ನು ಸರಿಯಾಗಿ ಬಳಸದೇ ಇರುವುದರಿಂದ, ಅದರ ನಿರ್ವಹಣೆ ಸವಾಲಾಗಿದೆ. ನಮ್ಮ ಮನೆ ಶೌಚಾಲಯವನ್ನು ಸ್ವಚ್ಛವಾಗಿಡುವಂತೆ, ಸಾರ್ವಜನಿಕ ಶೌಚಾಲಯಗಳನ್ನೂ ಪೂಜಾ ಮಂದಿರದಷ್ಟೇ ಮಹತ್ವ ಕೊಟ್ಟು ಒಳ್ಳೆಯ ರೀತಿಯಲ್ಲಿ ನಿರ್ವಹಣೆ ಮಾಡಬೇಕು. ಹೊರಗಿನಿಂದ ಬರುವ ಜನರಿಗೆ ಶೌಚಾಲಯ ಸೌಲಭ್ಯ ಇಲ್ಲದೆ ಪರದಾಡುವ ಪರಿಸ್ಥಿತಿ ಇದೆ. ಆಡಳಿತ ಮತ್ತು ಜನಪ್ರತಿನಿಧಿಗಳು ಇತ್ತ ಗಮನ ಹರಿಸಿ, ರೈತರು ಧರಣಿ ಕೂರಲು ಅವಕಾಶ ಕೊಡದೇ ಆದಷ್ಟು ಬೇಗ ಉತ್ತಮ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸ್ವಾಮೀಜಿಗಳು ಕಳಕಳಿಯ ಮನವಿ ಮಾಡಿದರು.

ಈ ಸಂದರ್ಭದಲ್ಲಿ ರೈತ ಸಂಘದ ಅಧ್ಯಕ್ಷ ಚಂದ್ರಪ್ಪ, ಶ್ರೀ ಆಂಜನೇಯ ದೇವಸ್ಥಾನ ಸಮಿತಿಯ ಅಧ್ಯಕ್ಷ ಬಡಗಿ ರಾಮಣ್ಣ, ಕಾರ್ಯದರ್ಶಿ ಧನಂಜಯ ಮೂರ್ತಿ, ಪೈಲ್ವಾನ್ ಜಯಣ್ಣ, ನಂದಾವಾಡಗಿ, ಎಬಿವಿಪಿ ಗುರುಪ್ರಸಾದ್, ಬಸವರಾಜು, ಪ್ರಶಾಂತ್, ಲಕ್ಷ್ಮಿ, ಜಯಲಕ್ಷ್ಮಮ್ಮ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ಸೇರಿದಂತೆ ರೈತಸಂಘದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...