ವಿಷಯಕ್ಕೆ ಹೋಗಿ

ಹುಳಿಯಾರು ಪಟ್ಟಣ ಸಂತೆ ಸ್ಥಳಾಂತರ ಮತ್ತು ನೆಲ ಬಾಡಿಗೆ ಹೊಸದಾಗಿ ನಿಗದಿ

ಹುಳಿಯಾರು ಪಟ್ಟಣ ಸಂತೆ ಸ್ಥಳಾಂತರ ಮತ್ತು ನೆಲ ಬಾಡಿಗೆ ಹೊಸದಾಗಿ ನಿಗದಿ

ಸಂತೆ ವ್ಯಾಪಾರಿಗಳಿಗೆ APMC ಯಾರ್ಡ್‌ನಲ್ಲಿ ಸ್ಥಳ ಗುರುತು, ದರ ನಿಗದಿ: ಪಟ್ಟಣ ಪಂಚಾಯಿತಿ ತೀರ್ಮಾನ

ಹುಳಿಯಾರು: ​ಹುಳಿಯಾರು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ  ರತ್ನಮ್ಮ ಅವರ ಅಧ್ಯಕ್ಷತೆಯಲ್ಲಿ  ಇಂದು ನಡೆದ ಸಭೆಯಲ್ಲಿ, ಪಟ್ಟಣದ ವ್ಯಾಪ್ತಿಯಲ್ಲಿ ಗಾಂಧಿಪೇಟೆಯ ರಸ್ತೆ ಪಕ್ಕದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ಎ.ಪಿ.ಎಂ.ಸಿ ಯಾರ್ಡ್‌ಗೆ ಸ್ಥಳಾಂತರಿಸಿದ ಜಾಗದಲ್ಲಿ ವ್ಯಾಪಾರಸ್ಥರಿಗೆ ಸ್ಥಳ ಗುರುತು ಮಾಡಿ, ನೆಲ ಬಾಡಿಗೆಯನ್ನು ನಿಗದಿಪಡಿಸುವ ಕುರಿತು ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಯಿತು.

ಮೊದಲ ಆದ್ಯತೆ: ಸ್ಥಳಾಂತರಗೊಂಡಿರುವ ಸಂತೆಯಲ್ಲಿ ಹಾಲಿ ವ್ಯಾಪಾರಸ್ಥರಿಗೆ ಮೊದಲ ಆದ್ಯತೆ ನೀಡುವುದು ಹಾಗೂ ಹಾಲಿ ವ್ಯಾಪಾರಸ್ಥರಿಗೆ ಸ್ಥಳ ಹಂಚಿಕೆಯ ನಂತರ ಖಾಲಿ ಜಾಗ ಲಭ್ಯವಿದ್ದಲ್ಲಿ ಮಾತ್ರ ಹೊಸಬರಿಗೆ ಆದ್ಯತೆ ನೀಡುವುದು ಎಂದು ತೀರ್ಮಾನಿಸಲಾಯಿತು.

​ನೆಲ ಬಾಡಿಗೆ ನಿಗದಿ: ಈ ಕೆಳಕಂಡಂತೆ ವಾರದ ಸಂತೆಯ ದಿನಕ್ಕೆ  ನೆಲ ಬಾಡಿಗೆ ನಿಗದಿಪಡಿಸಲಾಯಿತು.

​5 x 5 ಅಡಿ ಅಳತೆಗೆ: ರೂ. 50/-.

​10 x 10 ಅಡಿ ಅಳತೆಗೆ: ರೂ. 100/-.

​10 x 15 ಅಡಿ ಅಳತೆಗೆ: ರೂ. 150/-.

​ಸ್ಥಳ ಹಂಚಿಕೆ ಕುರಿತು ಕೌನ್ಸಿಲರ್ ದಯಾನಂದ್ ಸ್ಪಷ್ಟನೆ: ಸಭೆಯ ನಂತರ ಪಟ್ಟಣ ಪಂಚಾಯಿತಿ ಮುಂದೆ ಸೇರಿದ್ದ ನೂರಾರು ಸಂತೆ ವ್ಯಾಪಾರಸ್ಥರಿಗೆ ಈ ವಿಚಾರಗಳನ್ನು ತಿಳಿಸಲಾಯಿತು. ಈ ವೇಳೆ ಮಾತನಾಡಿದ ಕೌನ್ಸಿಲರ್ ದಯಾನಂದ್ ಅವರು, ನೆಲ ಬಾಡಿಗೆಯನ್ನು ಪ.ಪಂ. ಸ್ವಚ್ಛತೆ ಕಾಪಾಡಲು ಬಳಸಲಾಗುತ್ತದೆ ಎಂದು ತಿಳಿಸಿದರು.

​ಸ್ಥಳ ಹಂಚಿಕೆ ಪ್ರಕ್ರಿಯೆ ಕುರಿತು ವಿವರಿಸಿದ ಅವರು, ಹಳೆಯ ಪಟ್ಟಿಯ ಪ್ರಕಾರ ಹಿಂದಿನಿಂದಲೂ ಇರುವ ವ್ಯಾಪಾರಿಗಳಿಗೆ ಮೊದಲ ಆದ್ಯತೆ ನೀಡುವುದು ಹಾಗೂ ಅವರಿಗೆ ಸ್ಥಳ ಹಂಚಿಕೆಯಾದ ನಂತರವೇ ಹೊಸಬರಿಗೆ ಅವಕಾಶ ನೀಡುವುದು ಎಂದು ವಿವರಿಸಿದರು. 

ಸಂತೆ ಸ್ಥಳವನ್ನು ಮೂರು ಸಾಲುಗಳಲ್ಲಿ ಗುರುತಿಸಲಾಗಿದ್ದು, 5x5 ಅಳತೆ ಒಂದು ಸಾಲಿನಲ್ಲಿ, 10x10 ಅಳತೆ ಮತ್ತೊಂದು ಸಾಲಿನಲ್ಲಿ ಮತ್ತು 10x15 ಅಳತೆ ಇನ್ನೊಂದು ಸಾಲಿನಲ್ಲಿ ಬರುತ್ತದೆ ಎಂದು ತಿಳಿಸಿದರು.

​ಗುರುತಿಸಿದ ಸ್ಥಳಗಳಿಗೆ ನಂಬರ್ ಹಾಕಿ, ಲಾಟರಿ ಎತ್ತುವ ಮುಖಾಂತರ ಯಾವ ವ್ಯಾಪಾರಿಗೆ ಯಾವ ನಂಬರ್ ಸಿಗುವುದೋ ಅದೇ ಸ್ಥಳದಲ್ಲಿ ವ್ಯಾಪಾರ ಮಾಡಬೇಕು. ತಮಗೆ ಬೇಕಾದಲ್ಲಿ, ಮುಂಭಾಗದಲ್ಲಿ, ಹಿಂಭಾಗದಲ್ಲಿ ಸ್ಥಳ ಕೇಳಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.ವ್ಯಾಪಾರಸ್ಥರಿಗೆ ಶೀಘ್ರವೇ ನೆರಳಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. 

ವಿಶೇಷ ದಿನಗಳು ಅಥವಾ ಹಬ್ಬಗಳಂದು ನಡೆಯುವ ಸಂತೆ ದಿನ ಎಂದಿನ ಬಾಡಿಗೆಯನ್ನೆ ವಸೂಲಿ ಮಾಡಲಾಗುವುದು ಎಂದು ತೀರ್ಮಾನಿಸಲಾಯಿತು.

ಈ ಸಂದರ್ಭದಲ್ಲಿ  ಉಪಾಧ್ಯಕ್ಷೆ ಕಾವ್ಯಾರಾಣಿ, ಮಾಜಿ ಅಧ್ಯಕ್ಷ ಕಿರಣ್ ಕುಮಾರ್, ದಸ್ತಗೀರ್ ಸಾಬ್, ಸಿದ್ದಿಕ್, ಬಡಗಿ ರಾಜು, ಮಹಮ್ಮದ್ ಜುಬೇರ್, ದಯಾನಂದ್, ಮಂಜನಾಯ್ಕ ,ಜಹೀರ್ ಸಾಬ್ ಪ್ರೀತಿ ರಾಘವೇಂದ್ರ, ವೆಂಕಟೇಶ್ ಸೈಯದ್ ನೂರ್ ಫಕ್ರುದ್ದೀನ್, ಮುಖ್ಯಾಧಿಕಾರಿ ಮಂಜುನಾಥ್ ಇಂಜಿನಿಯರ್ ಮಂಜುನಾಥ್ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...