ವಿಷಯಕ್ಕೆ ಹೋಗಿ

ವರ್ಗಾವಣೆ ಬಳಿಕವೂ ಚೆಕ್ ಡ್ರಾ: ಹುಳಿಯಾರು ಪಪಂ ಹಿಂದಿನ ಮುಖ್ಯಾಧಿಕಾರಿ ವಿರುದ್ಧ ಅಧಿಕಾರ ದುರುಪಯೋಗದ ಗಂಭೀರ ಆರೋಪ

ವರ್ಗಾವಣೆ ಬಳಿಕವೂ ಚೆಕ್ ಡ್ರಾ: ಹುಳಿಯಾರು ಪಪಂ ಹಿಂದಿನ ಮುಖ್ಯಾಧಿಕಾರಿ ವಿರುದ್ಧ ಅಧಿಕಾರ ದುರುಪಯೋಗದ ಗಂಭೀರ ಆರೋಪ

ಹುಳಿಯಾರು: ​ಹುಳಿಯಾರು ಪಟ್ಟಣ ಪಂಚಾಯಿತಿಯ ಹಿಂದಿನ ಮುಖ್ಯಾಧಿಕಾರಿ ನಾಗಭೂಷಣ್ ಅವರು ವರ್ಗಾವಣೆಗೊಂಡು ಅಧಿಕಾರದಿಂದ ಬಿಡುಗಡೆಗೊಂಡ ನಂತರವೂ ಪಟ್ಟಣ ಪಂಚಾಯಿತಿಯ ಚೆಕ್‌ಗಳನ್ನು ಆನ್‌ಲೈನ್ ಮೂಲಕ ಡ್ರಾ ಮಾಡಿಸುವ ಮೂಲಕ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಹಾಲಿ ಪ.ಪಂ. ಕೌನ್ಸಿಲರ್ ಅಬೂಬಕರ್ ಸಿದ್ದೀಕ್ ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಈ ಸಂಬಂಧ ಸಮಗ್ರ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಆರೋಪ : ​ಮಾಧ್ಯಮದ ಮುಂದೆ ದಾಖಲೆಗಳನ್ನು ಪ್ರದರ್ಶಿಸಿದ ಅಬೂಬಕರ್ ಸಿದ್ದೀಕ್ ಅವರು, ನಾಗಭೂಷಣ್ ಅವರು ಆಗಸ್ಟ್ ತಿಂಗಳಲ್ಲಿ ಹುಳಿಯಾರಿನಿಂದ ವರ್ಗಾವಣೆಗೊಂಡ ಬಳಿಕದ ಚಟುವಟಿಕೆಗಳನ್ನು ವಿವರಿಸಿದರು.

ರಿಲೀವ್ ಮತ್ತು ಜಾಯಿನ್: ಮುಖ್ಯಾಧಿಕಾರಿಯಾಗಿದ್ದ ನಾಗಭೂಷಣ್ ಅವರು ಆಗಸ್ಟ್ 12 ರಂದು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರದಿಂದ ಬಿಡುಗಡೆಗೊಂಡಿದ್ದರು. ಅದಾದ ಬಳಿಕ ಆಗಸ್ಟ್ 14 ರಂದು ಗಂಗಾವತಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಚೆಕ್ ಡ್ರಾ 1 (ವರ್ಗಾವಣೆ ಬಳಿಕ): ಅವರು ಗಂಗಾವತಿಯಲ್ಲಿ ಕರ್ತವ್ಯಕ್ಕೆ ಹಾಜರಾದ ದಿನವೇ, ಅಂದರೆ ಆಗಸ್ಟ್ 14 ರಂದು ಸಂಜೆ 5 ಗಂಟೆ 35 ನಿಮಿಷಕ್ಕೆ ಹುಳಿಯಾರು ಪ.ಪಂ.ನ ಚೆಕ್ ಅನ್ನು ಡ್ರಾ ಮಾಡಲಾಗಿದೆ. ಈ ಚೆಕ್ ಖಾತೆಯಿಂದ ಪಾಸ್ ಆಗಿದೆ.

ಚೆಕ್ ಡ್ರಾ 2 : ಇದಾದ ಕೆಲ ದಿನಗಳ ಬಳಿಕ, ಆಗಸ್ಟ್ ತಿಂಗಳ 30 ರಂದು ಮಧ್ಯಾಹ್ನ 12 ಗಂಟೆ 35 ನಿಮಿಷಕ್ಕೆ ಮತ್ತೊಂದು ಚೆಕ್ ಸಹ ಡ್ರಾ ಮಾಡಲಾಗಿದೆ. ಈ ಚೆಕ್ ಕೂಡ ಪಾಸ್ ಆಗಿದೆ.

ಅಧಿಕಾರದ ದುರುಪಯೋಗ : ​ವರ್ಗಾವಣೆಗೊಂಡ ಅಧಿಕಾರಿಗಳಿಗೆ ಚೆಕ್ ಡ್ರಾ ಮಾಡಿಕೊಡಲು ಯಾವುದೇ ಅಧಿಕಾರವಿರುವುದಿಲ್ಲ. ಆದರೂ ಆನ್‌ಲೈನ್ ಮೂಲಕ ಈ ಚೆಕ್‌ಗಳನ್ನು ಡ್ರಾ ಮಾಡಲಾಗಿದೆ. ಅವರ ಸಹಿಯನ್ನು ದುರುಪಯೋಗಪಡಿಸಿಕೊಳ್ಳಲಾಗಿದೆಯೇ ಅಥವಾ ಅವರೇ ಡ್ರಾ ಮಾಡಿಸಿಕೊಟ್ಟಿದ್ದಾರೆಯೇ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಕೌನ್ಸಿಲರ್ ಸಿದ್ದೀಕ್ ಒತ್ತಾಯಿಸಿದರು.

            ​ಅಲ್ಲದೆ, ಪಟ್ಟಣ ಪಂಚಾಯಿತಿ ಕಾಮಗಾರಿಗಳ ಬಿಲ್‌ಗಳ ವಿಚಾರದಲ್ಲಿಯೂ ಅವ್ಯವಹಾರ ನಡೆದಿದ್ದು, ಕಾಮಗಾರಿಯ GPS ಫೋಟೋ ಮತ್ತು ಇತರೆ ಅಗತ್ಯ ದಾಖಲೆಗಳಿಲ್ಲದೆ ಬೇಕಾಬಿಟ್ಟಿಯಾಗಿ ಬಿಲ್‌ಗಳನ್ನು ಮಾಡಿದ್ದಾರೆ. ಹುಳಿಯಾರು ಪಟ್ಟಣದ ಜನರ ಹಣವನ್ನು ಲೂಟಿ ಮಾಡಿಕೊಂಡು ಹೋಗಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ತನಿಖೆಗೆ ಆಗ್ರಹ​ಈ ಎಲ್ಲಾ ಅಕ್ರಮಗಳಿಗೆ ಸಂಬಂಧಿಸಿದಂತೆ ತಕ್ಷಣವೇ ಲೋಕಾಯುಕ್ತ ಅಥವಾ ಸಂಬಂಧಿಸಿದ ಉನ್ನತ ಅಧಿಕಾರಿಗಳು ತನಿಖೆ ನಡೆಸಿ, ಅಧಿಕಾರ ದುರುಪಯೋಗಪಡಿಸಿಕೊಂಡ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಬೂಬಕರ್ ಸಿದ್ದೀಕ್ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪ.ಪಂ. ಮಾಜಿ ಅಧ್ಯಕ್ಷ ಕಿರಣ್, ಕೌನ್ಸಿಲರ್‌ಗಳಾದ ಮಹಮ್ಮದ್ ಜುಬೇರ್, ಬಿಬಿ ಫಾತಿಮಾ, ನಾಮಿನಿ ಸದಸ್ಯ ವೆಂಕಟೇಶ್,ಕಾಯಿ ಕುಮಾರ್, ಶೃತಿ ಸನತ್,ಸಂದ್ಯಾಕಿರಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...