ಬ್ಯಾಂಕುಗಳಲ್ಲಿ ಅವಧಿ ಮೀರಿದ ಹಣ ವಾರಸುದಾರರಿಗೆ ವಾಪಸ್ ----------------- ಹುಳಿಯಾರು : ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವ ಹಣ ಹತ್ತು ವರ್ಷಗಳಿಗೂ ಹೆಚ್ಚು ಕಾಲ ನಾಮಿನೇಷನ್ ಇಲ್ಲದೆ, ವಾರಸುದಾರರು ಮುಂದೆ ಬಾರದ ಕಾರಣ ಬಳಕೆಯಾಗದೆ ಉಳಿದಿದ್ದಲ್ಲಿ, ಅಂತಹ ಹಣವನ್ನು ಸಂಬಂಧಪಟ್ಟ ವಾರಸುದಾರರಿಗೆ ಅಥವಾ ನಾಮಿನಿಗೆ ಮರಳಿಸಬೇಕೆಂಬ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕುಗಳಿಗೆ ಸ್ಪಷ್ಟ ನಿರ್ದೇಶನ ನೀಡಿದೆ ಎಂದು ಆರ್ಥಿಕ ಸಾಕ್ಷರತಾ ಸಲಹೆಗಾರ ಆರ್.ಎಂ. ಕುಮಾರಸ್ವಾಮಿ ತಿಳಿಸಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆವತಿಯಿಂದ ಕೆಂಪರಾಯನಹಟ್ಟಿಯಲ್ಲಿ ಆಯೋಜಿಸಿದ್ದ ಕೇಂದ್ರ ಮಾಸಿಕ ಸಭೆಯಲ್ಲಿ ಮಾತನಾಡಿ, ಇಂತಹ ಖಾತೆಗಳಿಗೆ ಸಂಬಂಧಿಸಿದವರು ಕೆವೈಸಿ ದಾಖಲೆಗಳೊಂದಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಬ್ಯಾಂಕುಗಳಿಂದ ಹಣವನ್ನು ಹಿಂಪಡೆಯಬಹುದು ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಮಾತನಾಡಿದ ತಾಲೂಕಿನ ಸಮನ್ವಯಾಧಿಕಾರಿ ಕವಿತಾ , ಗ್ರಾಹಕರ ಹಣವನ್ನು ಯಾವುದೇ ಕಾರಣಕ್ಕೂ ಬ್ಯಾಂಕುಗಳು ಅಕ್ರಮವಾಗಿ ತಡೆಹಿಡಿಯದೇ, ರಿಸರ್ವ್ ಬ್ಯಾಂಕ್ ರೂಪಿಸಿರುವ ಈ ವ್ಯವಸ್ಥೆಯ ಮೂಲಕ ನ್ಯಾಯಯುತವಾಗಿ ವಾರಸುದಾರರು ಅಥವಾ ನಾಮಿನಿಗೆ ಹಿಂತಿರುಗಿಸಬೇಕೆಂಬುದು ಈ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದರು. ಸಾರ್ವಜನಿಕರು ಈ ಸೌಲಭ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕೆಂದು ಅವರು ಮನವಿ ...