ಹುಳಿಯಾರು: ಜನ ಸುರಕ್ಷಾ ಶಿಬಿರದಲ್ಲಿ 'ಯೋನೋ' ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಮಾಹಿತಿಹುಳಿಯಾರು: ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ಇತ್ತೀಚೆಗೆ ತಿಮ್ಮನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಜನ ಸುರಕ್ಷಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ಶಿಬಿರದಲ್ಲಿ ಬ್ಯಾಂಕಿಂಗ್ ಮತ್ತು ವಿಮಾ ಯೋಜನೆಗಳ ಕುರಿತು ಗ್ರಾಹಕರಿಗೆ ಸಮಗ್ರ ಮಾಹಿತಿ ನೀಡಲಾಯಿತು.*YONO (ಯೋನೋ) ಡಿಜಿಟಲ್ ಬ್ಯಾಂಕಿಂಗ್ ಮಹತ್ವ* : ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ತಿಮ್ಮನಹಳ್ಳಿ ಭಾರತೀಯ ಸ್ಟೇಟ್ ಬ್ಯಾಂಕ್ನ ವ್ಯವಸ್ಥಾಪಕ ಅನಿಮೇಶ್ ಕುಮಾರ್, ಬ್ಯಾಂಕಿನಲ್ಲಿ ಜಾರಿಯಲ್ಲಿರುವ ಎಸ್ಬಿಐ ಯೋನೋ ಡಿಜಿಟಲ್ ಬ್ಯಾಂಕಿಂಗ್ ಸೇವೆಯ ಮಹತ್ವವನ್ನು ವಿವರಿಸಿದರು.ಅವರು, "ಯೋನೋ ಬ್ಯಾಂಕಿಂಗ್ ಯೋಜನೆಯಡಿ ಗ್ರಾಹಕರು ಉಳಿತಾಯ ಖಾತೆಯಲ್ಲಿ ಹಣ ಕಟ್ಟುವುದು, ತೆಗೆಯುವುದು, ಎಟಿಎಂ ಇಲ್ಲದೆ ಹಣ ಹಿಂಪಡೆಯುವುದು, ಬ್ಯಾಲೆನ್ಸ್ ಸಂದೇಶ, ಆರ್ ಟಿ ಜಿ ಎಸ್, ನೆಫ್ಟ್ ಮಾಡುವುದು ಮತ್ತು ಸ್ಟೇಟ್ಮೆಂಟ್ ಪಡೆಯುವುದು ಸೇರಿದಂತೆ ಹಲವಾರು ಬ್ಯಾಂಕಿಂಗ್ ಕೆಲಸಗಳನ್ನು ಕುಳಿತಲ್ಲೇ ತಮ್ಮ ಮೊಬೈಲ್ ಸಹಾಯದಿಂದ ಮಾಡಬಹುದು. ಇದರ ಪ್ರಯೋಜನ ಪಡೆದುಕೊಳ್ಳಬೇಕು," ಎಂದು ಜನರಿಗೆ ಕರೆ ನೀಡಿದರು.ಕೇಂದ್ರ ಸರ್ಕಾರದ ವಿಮಾ ಯೋಜನೆಗಳ ವಿವರಣೆ :ಚಿಕ್ಕನಾಯಕನಹಳ್ಳಿ ಆರ್ಥಿಕ ಸಾಕ್ಷರತಾ ಕೇಂದ್ರದ ಆರ್ಥಿಕ ಸಾಕ್ಷರತಾ ಸಲಹೆಗಾರರಾದ ಆರ್ ಎಂ ಕುಮಾರಸ್ವಾಮಿ ಅವರು ಮಾತನಾಡಿ, ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಾದ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಈ ಯೋಜನೆಗಳನ್ನು ಬ್ಯಾಂಕಿನ ಮುಖಾಂತರ ನೋಂದಾಯಿಸಿಕೊಂಡು ಅದರ ಪ್ರಯೋಜನ ಪಡೆದುಕೊಳ್ಳಬೇಕೆಂದು ವಿವರಿಸಿದರು.
ಈ ಸಂದರ್ಭದಲ್ಲಿ ತಿಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಬಾಬು, ಎಂಬಿಕೆ ಉಮಾದೇವಿ, ಎಲ್ ಸಿ ಆರ್ ಪಿ ನಾಗರತ್ನ ಹಾಗೂ ಬ್ಯಾಂಕಿನ ಸಿಬ್ಬಂದಿಗಳಾದ ರಾಜಶೇಖರ್, ಲಕ್ಷ್ಮಣ್, ಕಂದಿಕೆರೆ ಪ್ರದೀಪ್ ಮುಂತಾದವರು ಉಪಸ್ಥಿತರಿದ್ದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ