ಚಿಕ್ಕನಾಯಕನಹಳ್ಳಿ : ಪಟ್ಟಣದ ತೀ.ನಂ. ಶ್ರೀ ಭವನದಲ್ಲಿ 2024–25ನೇ ಸಾಲಿನ ಉಚಿತ ಸಿಇಟಿ/ನೀಟ್ ತರಬೇತಿ ಶಿಬಿರದಲ್ಲಿ ಅತ್ಯುತ್ತಮ ಸಾಧನೆ ಮಾಡಿಸಿ ಸರ್ಕಾರಿ ಸೀಟು ಪಡೆದುಕೊಂಡ ಎಸ್.ಬಿ. ಚಾರಿಟಬಲ್ ಟ್ರಸ್ಟ್ನ ವಿದ್ಯಾರ್ಥಿಗಳಿಗಾಗಿ “ಅಭಿನಂದನಾ ಸಮಾರಂಭ”ವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಶಾಸಕ ಸಿ.ಬಿ. ಸುರೇಶ್ ಬಾ ಬು ಅವರು ತಹಶೀಲ್ದಾರ್ ಹಾಗೂ ಎಸ್.ಬಿ. ಚಾರಿಟಬಲ್ ಟ್ರಸ್ಟ್ನ ಪದಾಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿ ಮಾತನಾಡಿದರು. ಉಚಿತ ತರಬೇತಿಯ ಮೂಲಕ ಗ್ರಾಮೀಣ ಹಾಗೂ ಬಡ ಕುಟುಂಬಗಳ ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶ ಕಲ್ಪಿಸಿರುವ ಎಸ್.ಬಿ. ಚಾರಿಟಬಲ್ ಟ್ರಸ್ಟ್ನ ಕಾರ್ಯ ಶ್ಲಾಘನೀಯವಾಗಿದ್ದು, ವಿದ್ಯಾರ್ಥಿಗಳು ಪಡೆದಿರುವ ಸರ್ಕಾರಿ ಸೀಟುಗಳು ಅವರ ಶ್ರಮ ಹಾಗೂ ಸಂಸ್ಥೆಯ ಮಾರ್ಗದರ್ಶನದ ಫಲವಾಗಿದೆ ಎಂದರು. ಸರ್ಕಾರಿ ಸೀಟು ಪಡೆದ ವಿದ್ಯಾರ್ಥಿಗಳಿಗೆ ಇನ್ನಷ್ಟು ಪ್ರೋತ್ಸಾಹ ನೀಡುವ ಉದ್ದೇಶದಿಂದ ಲ್ಯಾಪ್ಟಾಪ್ಗಳು ಹಾಗೂ ಅಗತ್ಯ ಶಿಕ್ಷಣ ಸಲಕರಣೆಗಳನ್ನು ವಿತರಿಸಲಾಯಿತು. ಮುಂದುವರಿದು ಮಾತನಾಡಿದ ಶಾಸಕ ಸುರೇಶ್ ಬಾಬು ಅವರು, “ನಾಳೆ ನಿಮ್ಮಲ್ಲಿ ಕೆಲವರು ಅಧಿಕಾರಿಗಳಾಗಿ ನಮ್ಮ ತಾಲೂಕಿಗೆ ಮರಳಿ ಬರುವ ದಿನಗಳು ಬರಬೇಕು. ಸಮಾಜಕ್ಕೆ ಸೇವೆ ಸಲ್ಲಿಸುವ ಶಕ್ತಿ ಶಿಕ್ಷಣದಲ್ಲಿದೆ” ಎಂದು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಮುಂದಿನ ದಿ...