ವಿಷಯಕ್ಕೆ ಹೋಗಿ

ಸವಾಲುಗಳೇ ಇಂದಿನ ಯಶಸ್ಸಿಗೆ ಭದ್ರ ಬುನಾದಿ: ದೊಡ್ಡಬಿದರೆಯಲ್ಲಿ ಇಸ್ರೋ ವಿಜ್ಞಾನಿ ಡಾ. ಆರ್. ಶ್ರೀನಿವಾಸ್ ಸ್ಫೂರ್ತಿದಾಯಕ ನುಡಿ

ಸವಾಲುಗಳೇ ಇಂದಿನ ಯಶಸ್ಸಿಗೆ ಭದ್ರ ಬುನಾದಿ: ದೊಡ್ಡಬಿದರೆಯಲ್ಲಿ ಇಸ್ರೋ ವಿಜ್ಞಾನಿ ಡಾ. ಆರ್. ಶ್ರೀನಿವಾಸ್ ಸ್ಫೂರ್ತಿದಾಯಕ ನುಡಿ

---------------------

ಹುಳಿಯಾರು : ಸಮೀಪದ ದೊಡ್ಡಬಿದರೆಯಲ್ಲಿರುವ ಜೆ.ಸಿ.ಎಂ. ಇಂಟರ್ನ್ಯಾಷನಲ್ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ತಾರಾ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ಬಾಹ್ಯಾಕಾಶ ವಿಜ್ಞಾನ ಜಾಗೃತಿ' ಕಾರ್ಯಕ್ರಮದಲ್ಲಿ ಹೈದರಾಬಾದಿನ ಇಸ್ರೋ ವಿಜ್ಞಾನಿ ಡಾ. ಆರ್. ಶ್ರೀನಿವಾಸ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಪ್ರೇರಣೆ ನೀಡಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಜ್ಞಾನ ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇಸ್ರೋ ಪಯಣದ ರೋಚಕ ಇತಿಹಾಸ :ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಆರ್. ಶ್ರೀನಿವಾಸ್, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ISRO) ಅತ್ಯಂತ ಕಠಿಣ ಹಾದಿಯನ್ನು ದಾಟಿ ಇಂದು ಜಾಗತಿಕ ಮಟ್ಟದಲ್ಲಿ ಅಗ್ರಗಣ್ಯ ಸಂಸ್ಥೆಯಾಗಿ ಬೆಳೆದು ಬಂದ ಇತಿಹಾಸವನ್ನು ವಿವರಿಸಿದರು. 

1963ರಲ್ಲಿ ಕೇರಳದ ತುಂಬಾದಲ್ಲಿರುವ ಒಂದು ಸಣ್ಣ ಚರ್ಚ್‌ನಲ್ಲಿ ಆರಂಭವಾದ ಭಾರತದ ಬಾಹ್ಯಾಕಾಶ ಪಯಣ, ಇಂದು ಚಂದ್ರಯಾನ ಮತ್ತು ಮಂಗಳಯಾನದಂತಹ ಬೃಹತ್ ಸಾಧನೆಗಳನ್ನು ಮಾಡಿದೆ ಎಂದು ಹೆಮ್ಮೆಯಿಂದ ಸ್ಮರಿಸಿದರು.

ಆರಂಭದಲ್ಲಿ ವಿಜ್ಞಾನಿಗಳು ರಾಕೆಟ್ ಬಿಡಿಭಾಗಗಳನ್ನು ಸೈಕಲ್ ಮತ್ತು ಎತ್ತಿನ ಬಂಡಿಗಳ ಮೇಲೆ ಸಾಗಿಸುತ್ತಿದ್ದ ಶ್ರಮವನ್ನು ಸ್ಮರಿಸಿದ ಅವರು, ಅಂದಿನ ಆ ಸವಾಲುಗಳೇ ಇಂದಿನ ಜಾಗತಿಕ ಯಶಸ್ಸಿಗೆ ಭದ್ರ ಬುನಾದಿಯಾಗಿದೆ ಎಂದರು.ತಾಂತ್ರಿಕ ಮಾಹಿತಿ: ರಾಕೆಟ್‌ಗಳು ಭೂಮಿಯಿಂದ ಉಪಗ್ರಹಗಳನ್ನು ನಿಗದಿತ ಕಕ್ಷೆಗೆ ತಲುಪಿಸಲು ಸಾರಿಗೆ ವಾಹನಗಳಂತೆ ಹೇಗೆ ಕೆಲಸ ಮಾಡುತ್ತವೆ ಎಂಬ ಬಗ್ಗೆ ಸರಳವಾಗಿ ವಿವರಿಸಿದರು. ವಿವಿಧ ಮಾದರಿಯ ರಾಕೆಟ್‌ ಉಡಾವಣೆ, ಸ್ಯಾಟಲೈಟ್ ಅಪ್ಲಿಕೇಶನ್ ಸೆಂಟರ್‌ನ ಕಾರ್ಯವೈಖರಿ ಹಾಗೂ ರಿಮೋಟ್ ಸೆನ್ಸಿಂಗ್ ಉಪಗ್ರಹಗಳ ಮೂಲಕ ಸಿಗುವ ಹವಾಮಾನ ವರದಿ ಮತ್ತು ಸಂವಹನ ಸೇವೆಗಳ ಪ್ರಾಮುಖ್ಯತೆಯನ್ನು ಮನವರಿಕೆ ಮಾಡಿಕೊಟ್ಟರು.

ವಿದ್ಯಾರ್ಥಿಗಳಿಗೆ ಕರೆ: 'ಸ್ಟೂಡೆಂಟ್ ಔಟ್‌ರೀಚ್' ಯೋಜನೆಗಳ ಬಗ್ಗೆ ಮಾಹಿತಿ ನೀಡಿದ ಅವರು, ಭವಿಷ್ಯದ ವಿಜ್ಞಾನಿಗಳಾಗಲು ಇಂದಿನಿಂದಲೇ ಕುತೂಹಲ ಮತ್ತು ಸಂಶೋಧನಾ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜ್ಞಾನದ ಹಸಿವು ಬೆಳೆಸಿಕೊಳ್ಳಿ:

ತಾರಾ ಫೌಂಡೇಶನ್‌ನ ವಿಶ್ವೇಶ್ವರಯ್ಯ ಅವರು ಮಾತನಾಡಿ, ಕೇವಲ ಮಾಹಿತಿ ಸಂಗ್ರಹಣೆಗಿಂತ ಅದನ್ನು ಜ್ಞಾನವಾಗಿ ಪರಿವರ್ತಿಸಿ ಪ್ರಬುದ್ಧತೆ ಸಾಧಿಸುವ ಮೂಲಕ 'ಜೀನಿಯಸ್' ಆಗಿ ರೂಪುಗೊಳ್ಳಬೇಕು. ನಮ್ಮ ರಕ್ತದಲ್ಲೇ ಇರುವ ಜ್ಞಾನದ ಶಕ್ತಿಯಿಂದಾಗಿ ಇಂದು ಜಗತ್ತಿನ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಭಾರತೀಯರೇ ವಿಜ್ಞಾನಿಗಳಾಗಿ, ಪ್ರೊಫೆಸರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ವಿದ್ಯಾರ್ಥಿಗಳು ಕೇವಲ ಇಂಜಿನಿಯರಿಂಗ್ ಅಥವಾ ವೈದ್ಯಕೀಯ ಶಿಕ್ಷಣಕ್ಕೆ ಸೀಮಿತವಾಗದೆ, ಅಮೆರಿಕದಂತಹ ದೇಶಗಳ ಮಾದರಿಯಲ್ಲಿ ದೇಶದ ಅಭಿವೃದ್ಧಿಗೆ ಪೂರಕವಾದ ಹೊಸ ಆವಿಷ್ಕಾರಗಳನ್ನು ಮಾಡುವ ಸಂಶೋಧಕರಾಗಿ ಬೆಳೆಯಬೇಕು. ಹಣ ಸಂಪಾದನೆಗಿಂತ ದೇಶ ಕಟ್ಟುವ ಕೆಲಸಕ್ಕೆ ಜ್ಞಾನ ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಸಂಸ್ಥೆಯ ಅಧ್ಯಕ್ಷರಾದ ಜೆ.ಸಿ. ಮಾಧುಸ್ವಾಮಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗಾಗಿ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ತಾರಾ ಫೌಂಡೇಶನ್‌ನ ಸುರೇಶ್, ಬಸವರಾಜು, ಜೆ.ಸಿ.ಎಂ ಇಂಟರ್ನ್ಯಾಷನಲ್ ಸ್ಕೂಲ್ ಮುಖ್ಯಸ್ಥ ನಿರಂಜನ ಆರಾಧ್ಯ, ಪ್ರಿನ್ಸಿಪಾಲ್ ರಘು, ಕಾಡಶೆಟ್ಟಿಹಳ್ಳಿ ಸತೀಶ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ವಸಂತ್, ಪಟ್ಟಣ ಪಂಚಾಯಿತಿ ಸದಸ್ಯೆ ಬಿಬಿ ಫಾತಿಮಾ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...