ಮಾಜಿ ಶಾಸಕರ ಭರವಸೆ :ಪ್ರತಿಭಟನೆ ಹಿಂತೆಗೆದುಕೊಂಡ ನಿರಾಶ್ರಿತರು ----------------------- ನಿರಾಶ್ರಿತರಿಗೆ ಸ್ಪಂದಿಸಿದ ತಹಸಿಲ್ದಾರ್ -------------------------- ನಿರಾಶ್ರಿತರಿಗಾಗಿ ಗಂಜಿ ಕೇಂದ್ರ ತೆರೆದ ತಾಲೂಕು ಆಡಳಿತ ----------------- ಹುಳಿಯಾರು:ಹುಳಿಯರು ಅಮಾನಿಕೆರೆ ದಡದಲ್ಲಿ ಕಳೆದ ಮೂರ್ನಾಲ್ಕು ದಶಕಗಳಿಂದಗಳಿಂದಲೂ ವಾಸವಿರುವ ಅಲೆಮಾರಿ ನಿರ್ಗತಿಕ ನಿವಾಸಿಗಳ ಗುಡಿಸಿಲುಗಳು ಇದೀಗ ಕೆರೆ ತುಂಬುತ್ತಿರುವ ಹಿನ್ನೆಲೆಯಲ್ಲಿ ಜಲಾವೃತಗೊಳ್ಳುತ್ತಿದ್ದು 120ಕ್ಕೂ ಹೆಚ್ಚು ಕುಟುಂಬಗಳು ಬೀದಿ ಪಾಲಾಗಲಿದ್ದು ತಮಗೆ ಶಾಶ್ವತ ಪುನರ್ ವಸತಿ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ಕಳೆದ ಎರಡು ದಿನಗಳಿಂದಲೂ ಪಟ್ಟಣ ಪಂಚಾಯ್ತಿ ಕಛೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದು ,ಇಂದು ಶುಕ್ರವಾರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ಸಿ.ಬಿ.ಸುರೇಶ್ ಬಾಬು ತಹಸಿಲ್ದಾರ್ ಅವರೊಂದಿಗೆ ಚರ್ಚಿಸಿ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಅಂತ್ಯಗೊಂಡಿತು. ಹುಳಿಯಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಶಂಕರಾಪುರ ಬಡಾವಣೆಯಲ್ಲಿನ ಅಮಾನಿಕೆರೆ ಅಂಗಳದಲ್ಲಿ ಅಲೆಮಾರಿಗಳು,ಹಕ್ಕಿಪಿಕ್ಕಿ ಜನಾಂಗದವರು,ನಿರ್ಗತಿಕರು,ಕೂಲಿ ಕಾರ್ಮಿಕರು, ಅಲ್ಪಸಂಖ್ಯಾತರು, ಕಡುಬಡವರು ಕಳೆದ 30-40 ವರ್ಷಗಳಿಂದಲೂ ಜೋಪಡಿ ಕಟ್ಟಿಕೊಂಡು ವಾಸಿಸುತ್ತಿದ್ದು, ಇದೀಗ ಕೆರೆ ತುಂಬುತ್ತಿರುವ ಹಿನ್...